ಜನ ಮನದ ನಾಡಿ ಮಿಡಿತ

Advertisement

ಕರಾವಳಿಗೆ ಅಪ್ಪಳಿಸುತ್ತಿದೆ ಭಾರೀ ಮಳೆ!! ಮುನ್ನೆಚ್ಚರಿಕಾ ಕ್ರಮ…

ದಕ್ಷಿಣ ಕನ್ನಡ : ಅರಬ್ಬಿ ಸಮುದ್ರದ ಕರಾವಳಿ ತೀರದ ಸಮೀಪ ಚಂಡಮಾರುತ ರೂಪುಗೊಂಡಿದ್ದು, ಕಡಲ ನಗರಿ ಮಂಗಳೂರು ಸೇರಿದಂತೆ ಕರಾವಳಿಯಲ್ಲಿ ಮಳೆಯಾಗುತ್ತಿದ್ದು, ಮೋಡ ಮುಸುಕಿದ ವಾತಾವರಣವಿದೆ, ಕಳೆದೆರಡು ದಿನಗಳಿಂದ ಕರಾವಳಿಯ ಬಹುತೇಕ ಕಡೆಗಳಲ್ಲಿ ಗುಡುಗು ಸಿಡಿಲಿನಿಂದ ಕೂಡಿದ ಮಳೆಯಾಗುತ್ತಿದ್ದು, ಕರಾವಳಿಯ ಹಲವು ಜಿಲ್ಲೆಗಳಲ್ಲಿ, ಸಿಡಿಲಿನ ಆಘಾತದಿಂದ ಹಾನಿಯಾದ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ, ಹಲವು ಮನೆ ಕೊಟ್ಟಿಗೆಗಳು ಸಿಡಿಲಿನಿಂದ ಹಾನಿಯಾಗಿವೆ, ಇಂದು ಕೂಡ ಸಂಜೆಯ ವೇಳೆಗೆ ಉತ್ತಮ ಮಳೆಯಾಗುತ್ತಿದೆ ಎಂದು ವರದಿಯಾಗಿದೆ.

ಅರಬ್ಬಿ ಸಮುದ್ರದ ಆಗ್ನೇಯ ಹಾಗೂ ಪೂರ್ವ-ಕೇಂದ್ರ ಪ್ರದೇಶದಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಂಡಮಾರುತವು ಅರಬ್ಬಿ ಸಮುದ್ರದಲ್ಲಿ ಪಶ್ಚಿಮ ಮತ್ತು ವಾಯವ್ಯ ಪ್ರದೇಶದತ್ತ ಸಾಗಿ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ನಾವಿಕರು, ಮೀನುಗಾರರು ಮುನ್ನೆಚ್ಚರಿಕೆ ವಹಿಸಬೇಕು ಎಂದು ನಮ ಮಂಗಳೂರು ಬಂದರು ಪ್ರಾಧಿಕಾರ ತಿಳಿಸಿದೆ.

ಮುನ್ಸೂಚನೆಯಂತೆ ಚಂಡಮಾರುತ ಉಂಟಾಗಿದ್ದೇ ಆದರೆ ಬಂದರಿನ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸುವ ಸಾಧ್ಯತೆಯಿದ್ದು, ಹಡಗುಗಳು ಸಾಕಷ್ಟು ಮುಂಚಿತವಾಗಿ ದಡ ಸೇರುವಂತೆ ಸೂಚಿಸಲಾಗಿದೆ, ಬಂದರಿನ ಎಲ್ಲಾ ಕಾರ್ಯಾಚರಣೆಗಳು ರದ್ದಾಗುವ ಪರಿಸ್ಥಿತಿ ಉಂಟಾದರೆ ಅದನ್ನು ಎದುರಿಸಲು ಸಿದ್ಧರಾಗಿರಬೇಕು ಎಂದು ಬಂದರಿನ ಬಳಕೆದಾರರು, ಹಡಗು ಸಂಸ್ಥೆಗಳು, ಅರಬ್ಬಿ ಸಮುದ್ರಕ್ಕೆ ಹೊಂದಿಕೊಂಡಂತಿರುವ ಜಿಲ್ಲಾಡಳಿತಗಳು, ಮೀನುಗಾರಿಕಾ ಇಲಾಖೆ, ಕರಾವಳಿ ಭದ್ರತಾ ಪೊಲೀಸ್‌ ಹಾಗೂ ಕಸ್ಟಮ್ಸ್‌ ಇಲಾಖೆಗಳಿಗೆ ಮುನ್ನೆಚ್ಚರಿಕೆ ಸಂದೇಶ ರವಾನಿಸಿದೆ. ಮಾಧ್ಯಮದಲ್ಲಿ ವರದಿಯಾಗಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!