ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು ಕಂಬಳದ ಅಧಿಕೃತ ಕಚೇರಿ ಉದ್ಘಾಟನೆ

ದಕ್ಷಿಣ ಕನ್ನಡ : ಬೆಂಗಳೂರಿನ ಅರಮನೆ ಮೈದಾನದಲ್ಲಿ ಮುಂದಿನ ತಿಂಗಳು ನಡೆಯಲಿರುವ, ಕಂಬಳಕ್ಕಾಗಿ ನಿರ್ಮಿಸಿರುವ ‘ಬೆಂಗಳೂರು ಕಂಬಳ ನಮ್ಮ ಕಂಬಳ ಕಚೇರಿ’ಯನ್ನು ವಿದ್ಯುಕ್ತವಾಗಿ ಉದ್ಘಾಟಿಸಲಾಯಿತು.

ಪುತ್ತೂರು ಶಾಸಕರ ನೇತೃತ್ವದಲ್ಲಿ ಮೊತ್ತ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಆಯೋಜಿಸಿರುವ, ಕರಾವಳಿ ಪ್ರಸಿದ್ಧ ಜಾನಪದ ಕ್ರೀಡೆ ಕಂಬಳ ಅದ್ದೂರಿಯಾಗಿ ನಡೆಯಲು ಈಗಾಗಲೇ ಸಿದ್ಧತೆ ನಡೆಸಿದ್ದು, ಕಂಬಳದ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಬೇಕಾದ ಕಚೇರಿಯನ್ನು ಇಂದು ಹಿರಿಯರ ಮತ್ತು ಗಣ್ಯರ ಉಪಸ್ಥಿತಿಯಲ್ಲಿ ತೆರೆಯಲಾಗಿದೆ, ಮುಂದಿನ ದಿನಗಳಲ್ಲಿ ಬೆಂಗಳೂರು ಕಂಬಳಕ್ಕೆ ಸಂಬಂಧಿಸಿದ ಎಲ್ಲಾ ಕೆಲಸಗಳನ್ನು ಕಚೇರಿಯಿಂದ ನಿರ್ವಹಿಸಲು ಸಾಧ್ಯವಾಗುವಂತೆ ವ್ಯವಸ್ಥೆ ಮಾಡಲಾಗಿದೆ ಎಂದು ವರದಿಯಾಗಿದೆ ಈ ವೇಳೆ ಕಂಬಳ ಸಮಿತಿ ಅಧ್ಯಕ್ಷ, ಪುತ್ತೂರು ಶಾಸಕ ಅಶೋಕ್ ರೈ, ಉಪಾಧ್ಯಕ್ಷರಾದ ಗುಣರಂಜನ್ ಶೆಟ್ಟಿ, ದಿನೇಶ್‌ ಹೆಗಡೆ, ಕಾರ್ಯಾಧ್ಯಕ್ಷ ಗುರುಕಿರಣ್, ಖಜಾಂಚಿ ಸುಂದರ್ ರಾಜ್ ರೈ, ಪ್ರಧಾನ ಕಾರ್ಯದರ್ಶಿ ಕೆ.ವಿ.ರಾಜೇಂದ್ರಕುಮಾರ್, ಕಾರ್ಯಾಧ್ಯಕ್ಷ ಉಮೇಶ್ ಶೆಟ್ಟಿ, ಉದಯ್‌ ಶೆಟ್ಟಿ, ಜಿ.ಶ್ರೀನಿವಾಸ್ ಸೇರಿದಂತೆ ಇನ್ನಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!