ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಅಮ್ಮನಡೆಗೆ ನಮ್ಮ ನಡಿಗೆ ಕಾರ್ಯಕ್ರಮಕ್ಕೆ ಚಾಲನೆ

ನವ ರಾತ್ರಿಯ ದಿನದಲ್ಲಿ ನಮ್ಮ ಮನಸ್ಸಿನಲ್ಲಿ ಭಕ್ತಿಯ ಸನ್ಮಾರ್ಗದತ್ತ ಸಾಗಲು ವಿಶೇಷ ಆರಾಧನೆ ನಡೆಸಿದರೆ ಯಶಸ್ಸು ಸಾದ್ಯವಿದೆ . ಪಾದಯಾತ್ರೆಯಂತಹ ಪವಿತ್ರ ಸೇವೆಯನ್ನು ಅನುಭವಿಸಬೇಕು ಎಂದು ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಫೋರ್ಟ್ಸ್ ಕ್ಲಬ್ ನ ಗೌರವಾಧ್ಯಕ್ಷ ಪ್ರಶಾಂತ್ ಕುಮಾರ್ ಬೇಕಲ್ ಹೇಳಿದರು.
ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ದೇವಸ್ಥಾನದಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇಗುಲಕ್ಕೆ 6 ನೇ ವರ್ಷದ ಅಮ್ಮನಡಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಫೋರ್ಟ್ಸ್ ಕ್ಲಬ್ ಈ ಕಾರ್ಯಕ್ರಮವನ್ನು ವಿಶೇಷವಾಗಿ ಸoಯೋಜಿಸಿತ್ತು.


ಮುಂಜಾನೆ 5:30ಕ್ಕೆ ಶ್ರೀ ಕ್ಷೇತ್ರ ತೋಕೂರಿನಿಂದ ಪಾದಯಾತ್ರೆ ಪ್ರಾರಂಭಗೊಂಡು ದಾರಿಯುದ್ದಕ್ಕೂ ಭಜನೆಯ ಹಾಡುಗಳನ್ನು ದೇವರ ನಾಮ ಸ್ಮರಣೆಯನ್ನು ಮಾಡುತ್ತಾ ಶ್ರೀ ಕ್ಷೇತ್ರ ಕಟೀಲಿಗೆ 7:30 ಕ್ಕೆ ತಲುಪಿ ಶ್ರೀ ದೇವರ ದರ್ಶನ ಪಡೆಯಲಾಯಿತು.
ಕ್ಲಬ್ ಅಧ್ಯಕ್ಷ ಜಗದೀಶ್ ಕುಲಾಲ್, ಉಪಾಧ್ಯಕ್ಷ ಸುನಿಲ್ ದೇವಾಡಿಗ, ಕಾರ್ಯದ್ಯಕ್ಷ ಸಂತೋಷ್ ದೇವಾಡಿಗ, ಮಹಿಳಾ ಕಾರ್ಯಧ್ಯಕ್ಷೆ ಯಶೋಧಾ ದೇವಾಡಿಗ, ನಿಕಟ ಪೂರ್ವ ಕಾರ್ಯಾಧ್ಯಕ್ಷ ಸುರೇಶ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯ ಸಂತೋಷ್ ಕುಮಾರ್, ಪ್ರಮುಖರಾದ ಸುರೇಶ್ ದೇವಾಡಿಗ, ಮಹೇಶ್ ಸುವರ್ಣ, ಚಂದ್ರಶೇಖರ ದೇವಾಡಿಗ, ಗೌತಮ್ ಬೆಲ್ಚೆಡ್, ಗಣೇಶ್ ದೇವಾಡಿಗ, ಪ್ರದೀಪ್ ದೇವಾಡಿಗ, ಸುರೇಖಾ, ಪ್ರಮೀಳಾ.ಕೆ.ದೇವಾಡಿಗ, ಶೋಭಾ.ವಿ. ಅಂಚನ್, ವಾಣಿ ಮಹೇಶ್, ನೀಮಾ ಸನಿಲ್ ಪದಾಧಿಕಾರಿಗಳು, ಸದಸ್ಯರು, ಸದಸ್ಯೆಯರು ,ಹಾಗೂ ಗ್ರಾಮಸ್ಥರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!