ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಅಮ್ಮನಡೆಗೆ ನಮ್ಮ ನಡಿಗೆ ಕಾರ್ಯಕ್ರಮಕ್ಕೆ ಚಾಲನೆ

ನವ ರಾತ್ರಿಯ ದಿನದಲ್ಲಿ ನಮ್ಮ ಮನಸ್ಸಿನಲ್ಲಿ ಭಕ್ತಿಯ ಸನ್ಮಾರ್ಗದತ್ತ ಸಾಗಲು ವಿಶೇಷ ಆರಾಧನೆ ನಡೆಸಿದರೆ ಯಶಸ್ಸು ಸಾದ್ಯವಿದೆ . ಪಾದಯಾತ್ರೆಯಂತಹ ಪವಿತ್ರ ಸೇವೆಯನ್ನು ಅನುಭವಿಸಬೇಕು ಎಂದು ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಫೋರ್ಟ್ಸ್ ಕ್ಲಬ್ ನ ಗೌರವಾಧ್ಯಕ್ಷ ಪ್ರಶಾಂತ್ ಕುಮಾರ್ ಬೇಕಲ್ ಹೇಳಿದರು.
ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ದೇವಸ್ಥಾನದಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇಗುಲಕ್ಕೆ 6 ನೇ ವರ್ಷದ ಅಮ್ಮನಡಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಫೋರ್ಟ್ಸ್ ಕ್ಲಬ್ ಈ ಕಾರ್ಯಕ್ರಮವನ್ನು ವಿಶೇಷವಾಗಿ ಸoಯೋಜಿಸಿತ್ತು.


ಮುಂಜಾನೆ 5:30ಕ್ಕೆ ಶ್ರೀ ಕ್ಷೇತ್ರ ತೋಕೂರಿನಿಂದ ಪಾದಯಾತ್ರೆ ಪ್ರಾರಂಭಗೊಂಡು ದಾರಿಯುದ್ದಕ್ಕೂ ಭಜನೆಯ ಹಾಡುಗಳನ್ನು ದೇವರ ನಾಮ ಸ್ಮರಣೆಯನ್ನು ಮಾಡುತ್ತಾ ಶ್ರೀ ಕ್ಷೇತ್ರ ಕಟೀಲಿಗೆ 7:30 ಕ್ಕೆ ತಲುಪಿ ಶ್ರೀ ದೇವರ ದರ್ಶನ ಪಡೆಯಲಾಯಿತು.
ಕ್ಲಬ್ ಅಧ್ಯಕ್ಷ ಜಗದೀಶ್ ಕುಲಾಲ್, ಉಪಾಧ್ಯಕ್ಷ ಸುನಿಲ್ ದೇವಾಡಿಗ, ಕಾರ್ಯದ್ಯಕ್ಷ ಸಂತೋಷ್ ದೇವಾಡಿಗ, ಮಹಿಳಾ ಕಾರ್ಯಧ್ಯಕ್ಷೆ ಯಶೋಧಾ ದೇವಾಡಿಗ, ನಿಕಟ ಪೂರ್ವ ಕಾರ್ಯಾಧ್ಯಕ್ಷ ಸುರೇಶ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯ ಸಂತೋಷ್ ಕುಮಾರ್, ಪ್ರಮುಖರಾದ ಸುರೇಶ್ ದೇವಾಡಿಗ, ಮಹೇಶ್ ಸುವರ್ಣ, ಚಂದ್ರಶೇಖರ ದೇವಾಡಿಗ, ಗೌತಮ್ ಬೆಲ್ಚೆಡ್, ಗಣೇಶ್ ದೇವಾಡಿಗ, ಪ್ರದೀಪ್ ದೇವಾಡಿಗ, ಸುರೇಖಾ, ಪ್ರಮೀಳಾ.ಕೆ.ದೇವಾಡಿಗ, ಶೋಭಾ.ವಿ. ಅಂಚನ್, ವಾಣಿ ಮಹೇಶ್, ನೀಮಾ ಸನಿಲ್ ಪದಾಧಿಕಾರಿಗಳು, ಸದಸ್ಯರು, ಸದಸ್ಯೆಯರು ,ಹಾಗೂ ಗ್ರಾಮಸ್ಥರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!