ಜನ ಮನದ ನಾಡಿ ಮಿಡಿತ

Advertisement

“ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಬಾಳಿಗೆ ಬೆಳಕಾದವರು ಬಂಗಾರಪ್ಪ” – ದೀನಬಂಧು ಸೇವಾ ಟ್ರಸ್ಟ್ ಅಧ್ಯಕ್ಷ ರಮೇಶ್ ಶೆಟ್ಟಿ ಅಭಿಪ್ರಾಯ

ಶಂಕರಘಟ್ಟ 26: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸರ್ಕಾರಿ ಸೇವೆಗೆ ಸೇರಲು ಹಾಗೂ ಉನ್ನತ ವಿದ್ಯಾಭ್ಯಾಸಕ್ಕೆ ಸಹಾಯ ಮಾಡುವ ಸಲುವಾಗಿ ಶೇ 15 ರಷ್ಟು ಕೃಪಾಂಕ ನೀಡುವುದರ ಮೂಲಕ ಸಾವಿರಾರು ಗ್ರಾಮೀಣ ಬಡ ವಿದ್ಯಾರ್ಥಿಗಳ ಬಾಳನ್ನು ಬೆಳಗಿದವರು ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ದಿ:ಎಸ್.ಬಂಗಾರಪ್ಪನವರು ಎಂದು ದೀನಬಂಧು ಸೇವಾಟ್ರಸ್ಟ್ ಅಧ್ಯಕ್ಷರಾದ ಎಂ.ರಮೇಶ್ ಶೆಟ್ಟಿ ಅಭಿಪ್ರಾಯಪಟ್ಟರು.


ಅವರು ಇಂದು ಭದ್ರಾವತಿ ತಾಲ್ಲೂಕು ಶಂಕರಘಟ್ಟದಲ್ಲಿರುವ ದೀನಬಂಧು ಸೇವಾ ಟ್ರಸ್ಟ್ ವತಿಯಿಂದ ಏರ್ಪಡಿಸಿದ್ದ ಮಾಜಿ ಮುಖ್ಯಮಂತ್ರಿಗಳಾದ ದಿ:ಬಂಗಾರಪ್ಪನವರ 90ನೇ ಹುಟ್ಟುಹಬ್ಬದ ಅಂಗವಾಗಿ ಸ್ಥಳೀಯ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿಗಳನ್ನು ವಿತರಿಸಿ ಮಾತನಾಡಿದರು.
ಆಗಿನ ಸಮಯದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ನಗರದ ವಿದ್ಯಾರ್ಥಿಗಳ ಸಮನಾಗಿ ಅಂಕಗಳನ್ನು ಪಡೆಯಲು ಸಾಧ್ಯವಾಗದೇ ಸರ್ಕಾರಿ ಸೇವೆಯಿಂದ ವಂಚಿತರಾಗುತ್ತಿದ್ದನ್ನು ಮನಗಂಡು ಕೃಪಾಂಕ ನೀಡುವಂತಹ ಐತಿಹಾಸಿಕ ನಿರ್ಣಯ ತೆಗೆದುಕೊಂಡ ಹಿನ್ನಲೆಯಲ್ಲಿ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳು ಸಾವಿರಾರು ಸಂಖ್ಯೆಯಲ್ಲಿ ತಮ್ಮ ಬದುಕಿಗೆ ನೆಲೆ ಕಂಡುಕೊಂಡರು. ಇಷ್ಟೇ ಅಲ್ಲ ರೈತರ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್, ಬಡವರಿಗೆ ಮನೆ ಕಟ್ಟಿ ಕೊಡುವ ಆಶ್ರಯ, ಅಕ್ಷಯ, ಆರಾಧನಾ, ವಿಶ್ವ ಇಂತಹ ಹತ್ತಾರು ಕಾರ್ಯಕ್ರಮಗಳ ಮೂಲಕ ಸಮಾಜ ಕಟ್ಟಕಡೆಯ ವ್ಯಕ್ತಿಗೆ ಸಹಾಯ ಮಾಡಿದ ಕೀರ್ತಿ ಬಂಗಾರಪ್ಪನವರಿಗೆ ಸಲ್ಲುತ್ತದೆ ಎಂದರು.
ಈ ಕಾರ್ಯಕ್ರಮದಲ್ಲಿ ಸಿಂಗನಮನೆ ಗ್ರಾ.ಪಂ. ಅಧ್ಯಕ್ಷರಾದ ಮಂಜುಳಮ್ಮ, ತಾವರಘಟ್ಟ ಗಾ.ಪಂ. ಉಪಾಧ್ಯಕ್ಷ ಗಿರೀಶ್, ಕಾಂಗ್ರೆಸ್ ಮುಖಂಡರುಗಳಾದ ಮುರುಗೇಶ್, ಶಶಿಕುಮಾರ್, ಕವಿತಾ ರುದ್ರೇಶ್, ಅಶ್ವಿನಿ ಶಶಿಕುಮಾರ್, ಲಲಿತಮ್ಮ,ಲಕ್ಷ್ಮಮ್ಮ, ತಿಪ್ಪೇರುದ್ರಸ್ವಾಮಿ, ಮಂಟಲಿಂಗಯ್ಯ. ಶ್ರೀಕಾಂತ್ ಮುಂತಾದವರುಗಳು ಭಾಗವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಸ್ಥಳೀಯ ಸರ್ಕಾರಿ ಶಾಲೆಯ ಬಡಮಕ್ಕಳಿಗೆ ಕಲಿಕಾ ಸಾಮಾಗ್ರಿಗಳನ್ನು ವಿತರಿಸಲಾಯಿತು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!