ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆಯಾಗಿ ಕುಮಾರಿ ಸಾನ್ವಿ ಸುವರ್ಣ ಆಯ್ಕೆ

ಬಂಟ್ವಾಳ: ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ಘಟಕವು ನಿರ್ವಹಿಸುವ ಬಂಟ್ವಾಳ ತಾಲೂಕು 17ನೇಯ ಮಕ್ಕಳ ಸಾಹಿತ್ಯ ಸಮ್ಮೇಳನ ಕಡೇಶಿವಾಲಯ ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆಯ ಸಹಭಾಗಿತ್ವದಲ್ಲಿ ಡಿ. 06 ರಂದು ನಡೆಯಲಿದೆ.

ಸಮ್ಮೇಳನದಲ್ಲಿ ತಾಲೂಕಿನ 18ವರ್ಷ ಪ್ರಾಯಕ್ಕಿಂತ ಕೆಳಗಿನ ಮಕ್ಕಳು ಭಾಗವಹಿಸಲಿದ್ದಾರೆ. ಸಮ್ಮೇಳನದ ಸರ್ವಾಧ್ಯಕ್ಷರಾಗಿ ಕಡೇಶಿವಾಲಯ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಕುಮಾರಿ ಸಾನ್ವಿ ಸುವರ್ಣ ಆಯ್ಕೆಯಾಗಿರುತ್ತಾರೆ ಎಂದು ‘ಮಕ್ಕಳ ಕಲಾ ಲೋಕ’ ದ ಅಧ್ಯಕ್ಷರಾದ ರಮೇಶ ಎಂ. ಬಾಯಾರು ತಿಳಿಸಿದ್ದಾರೆ. ಸಾನ್ವಿಯವರು ಸುಂದರ ಪೂಜಾರಿ ವಿಶಾಲಾಕ್ಷಿ ದಂಪತಿ ಪುತ್ರಿ.

ಕಲಿಕೆಯಲ್ಲಿ ಉತ್ತಮ ಸಾಧನೆ ತೋರುತ್ತಿರುವ ಬಾಲ ಪ್ರತಿಭೆ. ಎಳೆಯ ವಯಸ್ಸಿನಲ್ಲಿಯೇ ವಿವಿಧ ಕ್ಷೇತ್ರಗಳಲ್ಲಿ ತನ್ನನ್ನು ತೊಡಗಿಸಿ ಕೊಂಡಿರುವ ಇವರು ಭಾರತ ಸರಕಾರದ ಶಿಕ್ಷಣ ಸಚಿವಾಲಯದಿಂದ “ವೀರಗಾಥಾ” ಪ್ರಮಾಣ ಪತ್ರ ಪಡೆದಿರುವರು. ಸಶಸ್ತ್ರ ಪಡೆಗಳ ಶೂರರ ಸ್ಮರಣಾರ್ಥವಾಗಿ ಈ ಪ್ರಮಾಣ ಪತ್ರ ನೀಡಲಾಗಿದೆ. ಭಾರತೀಯ ಜೀವ ವಿಮಾ ನಿಗಮವು ನೀಡುವ ಸಾಧನಾ ಪ್ರಶಸ್ತಿಯನ್ನು ಪಡೆದ ಈಕೆ ಉತ್ತಮ ಮಾತುಗಾರರು. ಸ್ಪರ್ಧಾತ್ಮ ಪರೀಕ್ಷೆಗಳಿಗೆ ತಯಾರಿ, ಫೊಟೋಗ್ರಫಿ, ನೃತ್ಯ, ಬರವಣಿಗೆ, ಚಿತ್ರ ಕಲೆ ಇವರ ಹವ್ಯಾಸ ಎಂದು ಕಡೇಶಿವಾಲಯ ಶಾಲಾ ಮುಖ್ಯೋಪಾಧ್ಯಾಯ ಬಾಬು ಪೂಜಾರಿ ಕೆ. ತಿಳಿಸಿರುತ್ತಾರೆ.


Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!