ಜನ ಮನದ ನಾಡಿ ಮಿಡಿತ

Advertisement

ಬೈಕ್ ಕಳವು : ಅಂತರ್ ಜಿಲ್ಲೆ ಚೋರರನ್ನು ಬಂಧಿಸಿದ ಮೂಡುಬಿದಿರೆ ಪೊಲೀಸರು

ಮೂಡುಬಿದಿರೆ : ಉತ್ತರ ಕನ್ನಡ ಜಿಲ್ಲೆ ಮತ್ತು ದ.ಕ.ದ ಮೂಡುಬಿದಿರೆಯಿಂದ ಬೈಕ್ ಕಳವು ಮಾಡಿರುವ ಅಂತರ್ ಜಿಲ್ಲಾ ಚೋರರನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ.ನೇತೃತ್ವದ ಪೊಲೀಸರ ತಂಡವು ಶುಕ್ರವಾರ ಬಂಧಿಸಿದ್ದಾರೆ.


ತುಮಕೂರು ಜಿಲ್ಲೆಯ ಅಂಜನೇಯ ದೇವಸ್ಥಾನದ ಬಳಿ ಕೊಡವತಿ ಗ್ರಾಮದ ಆಕಾಶ್ ಕಲ್ಕಿ ಹಾಗೂ ಅಂಜನೇಯ ದೇವಸ್ಥಾನದ ಹತ್ತಿರ, ಬೀರ್ಗನಹಳ್ಳಿಯ ವೀರೇಂದ್ರ ಬಂಧಿತರು.

ಮುಂಜಾನೆಯ ಜಾವ ಮೂಡುಬಿದಿರೆ ಪೊಲೀಸ್‌ ಠಾಣಾ ವ್ಯಾಪ್ತಿಯ ಪ್ರಾಂತ ಗ್ರಾಮದ ಕೊಡಂಗಲ್ಲು ಮಹಾವೀರ ಕಾಲೇಜಿನ ಎದರು ವಾಹನ ತಪಾಸಣೆ ನಡೆಸುತ್ತಿರುವ ಸಂದರ್ಭ ದ್ವಿ ಚಕ್ರ ವಾಹನದಲ್ಲಿ ಬರುತ್ತಿದ್ದ ಇಬ್ಬರನ್ನು ದ್ವಿಚಕ್ರ ವಾಹನವನ್ನು ನಿಲ್ಲಿಸಲು ಹೇಳಿದಾಗ ವಾಹನವನ್ನು ನಿಲಿಸದೇ ವಾಪಾಸು ಹಿಂತಿರುಗಲು ಪ್ರಯತ್ನಿಸುತ್ತಿರುವ ವೇಳೆ ಪೊಲೀಸ್ ನಿರೀಕ್ಷಕ ಸಂದೇಶ್ ಹಾಗೂ ಸಿಬ್ಬಂದಿಯವರು ಅವರುಗಳನ್ನು ವಶಕ್ಕೆ ಪಡೆದು ಕೂಲಂಕುಶವಾಗಿ ವಿಚಾರಣೆ ನಡೆಸಿದಾಗ ಅ.10 ರಂದು ಉತ್ತರಕನ್ನಡ ಜಿಲ್ಲೆಯ ಮುರುಡೇಶ್ವರ ಠಾಣಾ ವ್ಯಾಪ್ತಿಯಲ್ಲಿ KA 47, L 9678 ನೇ ಹೀರೋ ಸೂಪರ್ ಮೋಟಾರು ಸೈಕಲ್ ಮತ್ತು ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾರ್ಪಾಡಿ ಗ್ರಾಮದ ಜೈನ್ ಪಿ.ಯು ಕಾಲೇಜಿನ ಎದುರು ಇರುವ ಅರ್ಹತ್ ಅಪಾರ್ಟ್ಮೆಂಟ್ ನ ಪಾರ್ಕಿಂಗ್ ಏರಿಯಾದಲ್ಲಿ ನಿಲ್ಲಿಸಿದ KA-19-HD-4034 ನಂಬರಿನ ರಾಯಲ್ ಎನ್ ಫಿಲ್ಡ್ ಕ್ಲಾಸಿಕ್ 350 ಮೋಟಾರು ಸೈಕಲನ್ನು ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದ್ದು ಆರೋಪಿಗಳಿಂದ ಒಟ್ಟು ಅಂದಾಜು ಮೌಲ್ಯ 1,80,000/- ಸ್ವತ್ತುಗಳನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ.

ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್, IPS ರವರ ಮಾರ್ಗದರ್ಶನದಂತೆ, ಡಿಸಿಪಿಗಳಾದ ಸಿದ್ದಾರ್ಥ ಗೊಯಲ್ IPS (ಕಾ&ಸು), ದಿನೇಶ್ ಕುಮಾರ್, ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ರವರ ನಿರ್ದೇಶನದಂತೆ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ ಮತ್ತು ಸಿಬಂದಿಗಳು ಕಾರ್ಯಚರಣೆ ನಡೆಸಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!