ಜನ ಮನದ ನಾಡಿ ಮಿಡಿತ

Advertisement

ಶತಾಯುಷಿ ಅಂಗಡಿಮಾರು ಕೃಷ್ಣ ಭಟ್ಟರು ನಿಧನ

ಮುಲ್ಕಿ:ಪೇಜಾವರ ಸ್ವಾಮೀಜಿಗಳ ಪೂರ್ವಾಶ್ರಮದ ತೀರ್ಥ ರೂಪರಾದ ಶತಾಯುಷಿ ಪಕ್ಷಿಕೆರೆ ಸಮೀಪದ ಅಂಗಡಿಮಾರು ಕೃಷ್ಣ ಭಟ್ಟರು(102) ಭಾನುವಾರ ರಾತ್ರಿ ನಿಧನರಾದರು.

ಅವರು ಪೇಜಾವರ ವಿಶ್ವ ಪ್ರಸನ್ನ ಸ್ವಾಮೀಜಿ ಸಹಿತ 5 ಪುತ್ರರು ಹಾಗೂ 6 ಪುತ್ರಿಯರನ್ನು ಅಗಲಿದ್ದಾರೆ. ಪಕ್ಷಿಕೆರೆ ಸಮೀಪದ ಅಂಗಡಿಮಾರು ಬಳಿ ಹಿರಿಯ ಕೃಷಿಕರಾಗಿದ್ದ ಅವರು ಕಳೆದ ಹಲವಾರು ವರ್ಷಗಳಿಂದ ಪುರೋಹಿತ ವೃತ್ತಿ ಜೊತೆಗೆ ಅವರು ತುಳುನಾಡು ಪಂಚಾಂಗ ರಚಿಸಿದ್ದರು. ತಮ್ಮ ಮನೆಯಲ್ಲಿ ಗುರುಕುಲ ಮಾದರಿಯಲ್ಲಿ ಶಿಕ್ಷಣ ನೀಡುವುದರ ಜೊತೆಗೆ ಯುಗಪುರುಷ ಸಹಿತ ಮೂರು ದೇವಸ್ಥಾನಗಳಿಗೆ ರಥವನ್ನು ನೀಡಿ ಕೊಡು ಗೈದಾನಿಯಾಗಿ ಜನಾನುರಾಗಿಯಾಗಿದ್ದರು. ಅವರ ಸಾಧನೆಯನ್ನು ಗುರುತಿಸಿ ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಚಂದ್ರಶೇಖರ ಸ್ವಾಮೀಜಿಯವರು ಗೌರವಿಸಿದ್ದರು.

ಅವರ ನಿಧನಕ್ಕೆ ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ,ವೇ.ಮೂ.ವಾದಿರಾಜ ಉಪಾಧ್ಯಾಯ ಕೊಲಕಾಡಿ, ವಿದ್ವಾನ್ ಪಂಜ ಭಾಸ್ಕರ್ ಭಟ್, ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು,ಶಾಸಕ ಉಮಾನಾಥ ಕೋಟ್ಯಾನ್, ಮಾಜೀ ಸಚಿವ ಅಭಯ ಚಂದ್ರ,ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು, ಭುವನಾಭಿರಾಮ ಉಡುಪ ಯುಗಪುರುಷ, ಉದ್ಯಮಿ ಅರವಿಂದ ಪೂಂಜ ಕಾರ್ನಾಡ್, ಕೆಮ್ರಾಲ್ ಗ್ರಾಮ ಪಂಚಾಯತ್ ಅಧ್ಯಕ್ಷ ಮಯ್ಶದ್ದಿ ಪಕ್ಷಿಕೆರೆ, ಉದ್ಯಮಿ ಪಟೇಲ್ ವಾಸುದೇವ ರಾವ್ ಪುನರೂರು, ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರು, ಪುನರ್ ವಿಪ್ರಸಂಪದ ಅಧ್ಯಕ್ಷ ಸುಧಾಕರ್ ರಾವ್, ಮುಲ್ಕಿ ಬಂಟರ ಸಂಘದ ಗೌರವಾಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ, ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಮುಲ್ಕಿ ಜಿಎಸ್‌ಬಿ ಸಭಾದ ಅತುಲ್ ಕುಡ್ವ ,ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಪ್ರಕಾಶ್ ಸುವರ್ಣ, ಮಾಜೀ ಅಧ್ಯಕ್ಷ ಗೋಪಿನಾಥ ಪಡಂಗ , , ಮುಲ್ಕಿ ವಿಜಯ ರೈತ ಸೇವಾ ಸೊಸೈಟಿ ಅಧ್ಯಕ್ಷ ರಂಗನಾಥ ಶೆಟ್ಟಿ, ಬಪ್ಪನಾಡು ಲಯನ್ಸ್ ಕ್ಲಬ್ ಇನ್ಸ್ಪೈರ್ ನ ಗೌರವಾಧ್ಯಕ್ಷ ವೆಂಕಟೇಶ್ ಹೆಬ್ಬಾರ್,ಅತಿಕಾರಿ ಬೆಟ್ಟು ಗ್ರಾಪಂ ಉಪಾಧ್ಯಕ್ಷ ಮನೋಹರ ಕೋಟ್ಯಾನ್ , ಮುಲ್ಕಿ ನ.ಪಂ ಮಾಜೀ ಅಧ್ಯಕ್ಷ ಸುಭಾಶ್ ಶೆಟ್ಟಿ, ಸದಸ್ಯ ಹರ್ಷ ರಾಜ ಶೆಟ್ಟಿ, ಸತೀಶ್ ಅಂಚನ್, ಯೋಗೀಶ್ ಕೋಟ್ಯಾನ್,ಪುತ್ತು ಬಾವ, ಮುಲ್ಕಿ ನ.ಪಂ.ಮುಖ್ಯಾಧಿಕಾರಿ ಇಂದು ಎಂ,ಮಾಜೀ ಅಧ್ಯಕ್ಷ ಸುನಿಲ್ ಆಳ್ವ, ಮಾಜೀ ಸದಸ್ಯ ಉಮೇಶ್ ಮಾನಂಪಾಡಿ, ಕೆಪಿಸಿಸಿ ಕೋ ಆರ್ಡಿನೇಟರ್ ವಸಂತ್ ಬೆರ್ನಾಡ್,ಮುಲ್ಕಿ ಲಯನ್ಸ್ ಕ್ಲಬ್ ಅಧ್ಯಕ್ಷೆ ಶೀತಲ್ ಸುಶೀಲ್,ಹಿಂದೂ ಯುವ ಸೇನೆ ಮುಲ್ಕಿ ಘಟಕದ ಅಧ್ಯಕ್ಷ ದಿನೇಶ್ ಕೊಲ್ನಾಡ್, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಜೆಡಿಎಸ್ ಪಕ್ಷದ ಮುಲ್ಕಿ ಘಟಕದ ನವೀನ್ ಪುತ್ರನ್, ಡಾ. ಹರಿಶ್ಚಂದ್ರ ಪಿ.ಸಾಲ್ಯಾನ್, ಶಶಿಂದ್ರ ಸಾಲ್ಯಾನ್, ಕಂಬಳ ಸಮಿತಿ ಅಧ್ಯಕ್ಷ ಕಿರಣ್ ಶೆಟ್ಟಿ ಕೋಲ್ನಾಡು ಗುತ್ತು,ಉದಯಕುಮಾರ್ ಶೆಟ್ಟಿ ಅಧಿಧನ್ ಮುಲ್ಕಿ , ಉದ್ಯಮಿ ಶಿವರಾಮ್ ಜಿ ಅಮೀನ್, ಕಿಶೋರ್ ಶೆಟ್ಟಿ ಬಪ್ಪನಾಡು, ಗೌತಮ್ ಜೈನ್ ಮುಲ್ಕಿ ಅರಮನೆ, ರಾಘವೇಂದ್ರ ರಾವ್ ಕೆರೆ ಕಾಡು, ಶಂಕರ್ ಪಡಂಗಮುಲ್ಕಿ ಪ್ರೆಸ್ ಕ್ಲಬ್ ಅಧ್ಯಕ್ಷ ನಿಶಾಂತ್ ಶೆಟ್ಟಿ, ಸದಸ್ಯರಾದ ಪುನೀತ್ ಕೃಷ್ಣ, ಹರೀಶ್ ಹೆಜ್ಮಾಡಿ ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಗುರುಗಳಾದ ಶ ಅಂಗಡಿಮಾರು ಕೃಷ್ಣ ಭಟ್ಟರ ಅಂತ್ಯಕ್ರಿಯೆ 12 ಗಂಟೆಗೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!