ಜನ ಮನದ ನಾಡಿ ಮಿಡಿತ

Advertisement

ಪುತ್ತಿಗೆ ಪರ್ಯಾಯ ಮಹೋತ್ಸವ: ಹೊರೆ ಕಾಣಿಕೆ‌ ಸಮಿತಿ ಸಭೆ


ಉಡುಪಿ: ಜನವರಿಯಲ್ಲಿ ನಡೆಯಲಿರುವ ಪುತ್ತಿಗೆ ಮಠದ ಪರ್ಯಾಯ‌ ಮಹೋತ್ಸವದ ಹೊರೆಕಾಣಿಕೆ ಸಮಿತಿ ಸಭೆ ಪುತ್ತಿಗೆ ಮಠದ ಸಭಾಂಗಣದಲ್ಲಿ ಭಾನುವಾರ ನಡೆಯಿತು.


ಹೊರೆಕಾಣಿಕೆ ಸಮಿತಿಯ ಸಂಚಾಲಕ ಬೈಕಾಡಿ ಸುಪ್ರಸಾದ್ ಶೆಟ್ಟಿ ಮಾತನಾಡಿ, ಪುತ್ತಿಗೆ ಶ್ರೀಗಳ ಪರ್ಯಯಾ ಮಹೋತ್ಸವ ವನ್ನು ವಿಜೃಂಭಣೆಯಿಂದ ನಡೆಸುವ ಹಿನ್ನೆಲೆಯಲ್ಲಿ ಹೊರಕಾಣಿಕೆ ಮೆರವಣಿಗೆಯನ್ನು ಅದ್ದೂರಿಯಾಗಿ ನಡೆಸಲು ಚಿಂತನೆ ನಡೆಸಲಾಗಿದೆ ಎಂದರು. ಸುಮಾರು 50 ಭಾಗದಲ್ಲಿ ಹೊರೆಕಾಣಿಕೆ ಸಮಿತಿಯನ್ನು ಮಾಡಲಿದ್ದೇವೆ. ಅಲ್ಲಲ್ಲಿ ಸಭೆಗಳನ್ನು ನಡೆಸಿ ಹೊರೆಕಾಣಿಕೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಮಾರ್ಗದರ್ಶನ ನೀಡಲಾಗುತ್ತಿದೆ. ಪುತ್ತಿಗೆ ಶ್ರೀಗಳು ವಿದೇಶದಲ್ಲಿ ಕೂಡ ಮಠಗಳನ್ನು ಸ್ಥಾಪಿಸಿ ನಮ್ಮ ಧರ್ಮ ಸಂಸ್ಕೃತಿಯನ್ನು ಪ್ರಸಿದ್ಧಿ ಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ ಈ ಇದೊಂದು ವಿಶ್ವಮಟ್ಟದ ಪರ್ಯಾಯವಾಗಿದ್ದು, ನಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲಿದ್ದೇವೆ ಎಂದು ಹೇಳಿದರು.
ಸಮಿತಿಯ ಪ್ರಧಾನ‌ ಕಾರ್ಯದರ್ಶಿ ಬೆಳಪು ದೇವಿಪ್ರಸಾದ್ ಶೆಟ್ಟಿ ಮಾತನಾಡಿ, ಉಭಯ ಜಿಲ್ಲೆಯ ಸಹಕಾರಿಗಳು ಸೇರಿ ಉತ್ತಮ ರೀತಿಯಲ್ಲಿ ಹೊರೆಕಾಣಿಕೆ ನೀಡಬೇಕೆಂದು ಮನವಿ ಮಾಡಿದ್ದೇವೆ. ಬೇರೆ ಬೇರೆ ಸಂಸ್ಥೆಗಳಿಗೆ ಎಲ್ಲ ಮಾಹಿತಿ ನೀಡಿದ್ದು, ಹೊರೆಕಾಣಿಕೆ ಮೆರವಣಿಗೆಯ ಬಗ್ಗೆಯೂ ಮಾಹಿತಿ ನೀಡಲಾಗುತ್ತಿದೆ. ಅದೊಂದು ನಾಡ ಹಬ್ಬದ ರೀತಿಯಲ್ಲಿ ನಡೆಯಲಿದೆ. ಸರಕಾರದ ವತಿಯಿಂದ ವಹಿಸಬೇಕಾದ ಜವಾಬ್ದಾರಿಯ ಬಗ್ಗೆಯೂ ಜಿಲ್ಲಾಧಿಕಾರಿ ಗಳ ನೇತೃತ್ವದಲ್ಲಿ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದರು.


ಸಭೆಯಲ್ಲಿ ಆನೆಗುಡ್ಡೆ ವಿನಾಯಕ ದೇವಸ್ಥಾನ ಮ್ಯಾನೆಜಿಂಗ್ ಟ್ರಸ್ಟಿ ಕೆ.ಶ್ರೀ ರಮಣ ಉಪಾಧ್ಯಾಯ, ಕೃಷ್ಣಮೂರ್ತಿ ಆಚಾರ್ಯ, ಅಮೃತಾ ಕೃಷ್ಣಮೂರ್ತಿ, ಯೋಗೀಶ್ ಶೆಟ್ಟಿ, ಅಂಡಾರು ದೇವಿಪ್ರಸಾದ್ ಶೆಟ್ಟಿ, ಬ್ರಾಹ್ಮಣ ಸಭಾದ ಮಂಜುನಾಥ ಉಪಾಧ್ಯ, ಶ್ರೀಕಾಂತ ನಾಯಕ್, ಶಶಿಕಾಂತ್ ಪಡುಬಿದ್ರಿ, ಜ್ಯೋತಿ ದೇವಾಡಿಗ, ಮಾತೃ ಮಂಡಳಿಯ ಪದ್ಮಾ, ಶ್ರೀಕಾಂತ್ ಸಿದ್ದಾಪುರ, ಉದಯ್ ಮಠದಬೆಟ್ಟು, ಕೃಷ್ಣ ರಾವ್ ಕೊಡಂಚ, ಬಾಸ್ಕರ್ ರಾವ್ ಕಿದಿಯೂರು, ಏಲ್.ಎನ್.ಹೆಗ್ಡೆ, ರಾಘವೇಂದ್ರ ಕಿಣಿ, ರಾಘವೇಂದ್ರ ಭಟ್ ಕನರ್ಪಾಡಿ, ರಘುಪತಿ ರಾವ್, ಚೈತನ್ಯ ಮತ್ತಿತರರು ಉಪಸ್ಥಿತರಿದ್ದರು.


ನಾಗರಾಜ್ ಆಚಾರ್ಯ ಸ್ವಾಗತಿಸಿ, ವಿಜಯ ರಾಘವ ವಂದಿಸಿದರು. ರವೀಂದ್ರ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!