ಜನ ಮನದ ನಾಡಿ ಮಿಡಿತ

Advertisement

ಅಸಂಘಟಿತ ವಲಯದ ಕಾರ್ಮಿಕರ ಬೇಡಿಕೆಗಳ ಬಗ್ಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಗೆ ಮನವಿ ಮಾಡಿದ ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ರವರನ್ನು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ರವರು ಬೆಂಗಳೂರಿನಲ್ಲಿ ಭೇಟಿಯಾಗಿ ಜಿಲ್ಲೆಯ ಅಸಂಘಟಿತ ಕಾರ್ಮಿಕರಾದ ಚಿನ್ನ ಬೆಳ್ಳಿ ಕುಶಲಕರ್ಮಿಗಳು, ವಿಶ್ವಕರ್ಮ ಸಮುದಾಯದ ಬಡಗಿ, ಕಮ್ಮಾರ ವೃತ್ತಿ, ಟೈಲರ್,ಆಟೋ ಚಾಲಕರು, ಮೀನುಗಾರಿಕಾ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆ ಹಾಗೂ ಬೇಡಿಕೆಗಳ ಬಗ್ಗೆ ಸಮಾಲೋಚನೆ ನಡೆಸಿ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.


ಇತ್ತೀಚಿನ ದಿನಗಳಲ್ಲಿ ಕರಾವಳಿ ಜಿಲ್ಲೆಯಾದ್ಯಂತ ಬಂಡವಾಳಶಾಹಿ ಕಾರ್ಪೊರೇಟ್ ವ್ಯವಸ್ಥೆಯ ಚಿನ್ನಾಭರಣ ಸಂಸ್ಥೆಗಳು ಹೊರ ರಾಜ್ಯದ ಕಾರ್ಮಿಕರಿಂದ ಆಭರಣಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದು, ಜಿಲ್ಲೆಯ ಸ್ಥಳೀಯ ಕುಶಲಕರ್ಮಿಗಳಿಗೆ ಅವಕಾಶ ನೀಡದೆ ಸಂಕಷ್ಟ ಎದುರಿಸುವಂತಾಗಿದೆ.

ಅಸಂಘಟಿತ ಕಾರ್ಮಿಕರು ಸರಕಾರದಿಂದ ನೀಡುವ ಸೌಲಭ್ಯದಿಂದ ವಂಚಿತರಾಗಿದ್ದು, ಆರೋಗ್ಯ ವಿಮೆ, ಮಕ್ಕಳ ವಿದ್ಯಭ್ಯಾಸಕ್ಕಾಗಿ ವಿದ್ಯಾರ್ಥಿ ವೇತನ, ಕಡಿಮೆ ಬಡ್ಡಿದರದಲ್ಲಿ ಸಾಲ ಯೋಜನೆ, ಇ ಎಸ್ ಐ ಸೌಲಭ್ಯ, ಕೌಶಲ್ಯ ತರಬೇತಿ ಕಾರ್ಯಕ್ರಮಗಳು, ಪಿಂಚಣಿ ಯೋಜನೆಗಳ ಬಗ್ಗೆ ಸೂಕ್ತ ಕ್ರಮ ವಹಿಸುವಂತೆ ಸಚಿವರಿಗೆ ಮನವಿ ಮಾಡಿದರು.

ಶೀಘ್ರದಲ್ಲಿಯೇ ಚಿನ್ನ ಬೆಳ್ಳಿ ಕುಶಲಕರ್ಮಿಗಳು, ವಿಶ್ವಕರ್ಮ ಸಮುದಾಯ ಹಾಗೂ ಟೈಲರ್ ಅಸೋಸಿಯೇಶನ್, ಆಟೋ ಚಾಲಕರ ಸಂಘ, ಮೀನುಗಾರಿಕಾ ಕಾರ್ಮಿಕರ ನಿಯೋಗದೊಂದಿಗೆ ವಿವಿಧ ಬೇಡಿಕೆಗಳ ಬಗ್ಗೆ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಲು ಅವಕಾಶ ನೀಡುವಂತೆ ಕೋರಿದರು.

Leave a Reply

Your email address will not be published. Required fields are marked *

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

error: Content is protected !!