ಜನ ಮನದ ನಾಡಿ ಮಿಡಿತ

Advertisement

ಬಿಎಡ್ ವಿದ್ಯಾರ್ಥಿ ಮೃತದೇಹ ಬಾವಿಯಲ್ಲಿ ಪತ್ತೆ!!


ಪೆರ್ಲ: ಬಿಎಡ್ ವ್ಯಾಸಂಗ ನಿರತನಾಗಿದ್ದ ವಿದ್ಯಾರ್ಥಿಯೋರ್ವ ಡೆತ್ ನೋಟ್ ಬರೆದಿಟ್ಟು ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆಗೈದ ಘಟನೆ ಎಣ್ಮಕಜೆ ಗ್ರಾಮ ಪಂಚಾಯತಿನ ಪಜ್ಜಾನ ಎಂಬಲ್ಲಿ ನಡೆದಿದೆ.
ಇಲ್ಲಿನ ಬಡಗಿ ವೃತ್ತಿ ನಿರ್ವಹಿಸುವ ಸಿಲ್ವೆಸ್ಟರ್ ಕ್ರಾಸ್ತಾ ಎಂಬವರ ಪುತ್ರ ಐವನ್ ಕ್ರಾಸ್ತ (23) ಎಂಬ ಯುವಕನ ಮೃತದೇಹ ನ.7ರಂದು ಸಂಜೆ ಮನೆ ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ.

ತೊಕ್ಕೊಟಿನ ಕಾಲೇಜುವೊಂದರಲ್ಲಿ ಬಿಎಡ್ ವಿದ್ಯಾರ್ಥಿಯಾಗಿರುವ ಈತ ಕಳೆದ ಕೆಲವು ದಿನಗಳಿಂದ ಖಿನ್ನತೆಗೊಳಗಿದ್ದಂತೆ ಕಂಡು ಬರುತ್ತಿದ್ದು ನ.6ರಂದು ರಾತ್ರಿ ಊಟ ಮಾಡಿ ಮಲಗಿದ್ದ. ಮರುದಿನ ನ.7ರಿಂದ ಬೆಳಗ್ಗೆ ಈತ ನಾಪತ್ತೆಯಾಗಿದ್ದು ಬೆಳಗ್ಗೆಯೇ ಎದ್ದು ಕಾಲೇಜಿಗೆ ಹೋಗಿರಬೇಕೆಂದು ಭಾವಿಸಿದ್ದರು. ಸಂಜೆ ಕಾಲೇಜು ಬಿಟ್ಟು ಬಾರದಿರುವಾಗಲೂ ಕಾಣದಿದ್ದು ಮನೆಯವರು ಹುಡುಕಾಡಿದಾಗ ಮನೆ ಸಮೀಪದ ಬಾವಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಬಳಿಕ ಈತ ಮಲಗುವ ಕೋಣೆಯೊಳಗೆ “ನನ್ನ ಸಾವಿಗೆ ನಾನೇ ಕಾರಣ” ಎಂದು ಬರೆದಿಟ್ಟ ಡೆತ್ ನೋಟ್ ಪತ್ತೆಯಾಗಿದೆ. ಬದಿಯಡ್ಕ ಪೋಲಿಸರು ಪ್ರಕರಣ ದಾಖಲಿಸಿದ್ದು ಮೃತದೇಹ ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಪಂಚೆನಾಮೆ ನಡೆಸಿ ನ.8ಕ್ಕೆ (ಇಂದು) ಸಂಜೆ 4 ಗಂಟೆಗೆ ಮಣಿಯಂಪಾರೆ ಸಂತ ಲಾರೆನ್ಸ್ ಚರ್ಚಿನಲ್ಲಿ ಸಂಸ್ಕರಿಸಲಾಗುವುದೆಂದು ಮನೆಯವರು ತಿಳಿಸಿದ್ದಾರೆ. ಮೃತರು ತಂದೆ,ತಾಯಿ ನತಾಲಿಯ ಡಿಸೋಜ, ಸಹೋದರ ಮೇಲ್ವಿನ್ ಕ್ರಾಸ್ತ (ಶೇಣಿ ಶಾಲಾ ವಿದ್ಯಾರ್ಥಿ) ಎಂಬವರನ್ನಗಲಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!