ಜನ ಮನದ ನಾಡಿ ಮಿಡಿತ

Advertisement

ಹಳೆಯಂಗಡಿ : ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಆಧ್ಯಾತ್ಮ ಶಿಕ್ಷಣವು ಅಗತ್ಯ – ಮಿಥುನ್ ರೈ

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಆಧ್ಯಾತ್ಮಿಕ ಶಿಕ್ಷಣವನ್ನು ಪಡೆಯುವುದು ಅತೀ ಅಗತ್ಯ. ಇದರೊಂದಿಗೆ ಸಂಸ್ಕಾರ, ಆಚಾರ-ವಿಚಾರಗಳನ್ನು ದೇವಾಲಯದ ಸಂಬಂಧ ಪಟ್ಟ ವಿಭಾಗವು ನಡೆಸಿದರೆ ವಿದ್ಯಾರ್ಥಿಗಳ ಜೀವನಕ್ಕೆ ಅನುಕೂಲವಾಗುತ್ತದೆ ಇಂತಹ ಕಾರ್ಯಕ್ರಮವನ್ನು ಸಿಎಸ್ಐ ಜಿಲ್ಲಾ ಸಮಿತಿಯು,ಹಳೆಯಂಗಡಿ ಸಿಎಸ್ಐ ಅಮ್ಮನ್ ಮೆಮೋರಿಯಲ್ ಚರ್ಚಿನ ಅತಿಥೇಯದಲ್ಲಿ ನಡೆಸಿರುವುದು ಅಭಿನಂದನೀಯ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀ ಮಿಥುನ್ ರೈ ಯವರು ನುಡಿದರು.

ಅವರು ಸಿಎಸ್ಐ ಕೆಎಸ್‌ಡಿ ದಕ್ಷಿಣ ಕನ್ನಡ ಪ್ರದೇಶ ಪರಿಷತ್ತು ಮತ್ತು ಸಿ ಎಸ್ ಐ ಅಮ್ಮನ್ ಮೆಮೋರಿಯಲ್ ಚರ್ಚ್ ಹಳೆಯಂಗಡಿ ಇದರ ಆಶ್ರಯದಲ್ಲಿ ನಡೆದ ಜಾಗತಿಕ ಭಾನುವಾರ ಶಾಲಾ ದಿನಾಚರಣಿ ಮಕ್ಕಳ ಹಬ್ಬದ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಣೆ ಮಾಡಿ ಈ ಮೇಲಿನಂತೆ ನುಡಿದರು.

ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಪ್ರಾದೇಶಿಕ ಪರಿಷತ್ ನ ಅಧ್ಯಕ್ಷರಾದ ರೆವೆ.ವಿಲಿಯಂ ಬಿ. ಕುಂದರ್ ವಹಿಸಿದ್ದರು

ಸಿಎಸ್ಐ ಕೆ ಎಸ್ ಡಿ ಇದರ ಖಜಾಂಚಿಯಾದ ಶ್ರೀ ವಿನ್ಸೆಂಟ್ ಪಾಲನ್ನ ಮಾತನಾಡಿ ಈ ವರ್ಷದ ಜಾಗತಿಕ ಭಾನುವಾರ ಶಾಲಾ ದಿನಾಚರಣೆಯನ್ನು ಹಳೆಯಂಗಡಿಯವರು ಅತಿ ಮೌಲ್ಯಯುತವಾಗಿ ನಡೆಸಿದ್ದು, ಡಯಾಸಿಸ್ ನ ಪರವಾಗಿ ಅಭಿನಂದನೆ ಸಲ್ಲಿಸುತ್ತಿದ್ದೇನೆ ಎಂದರು.

ರೆ. ಜಾರ್ಜ್ ಎ. ಬೆರ್ನಾರ್ಡ್ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಇದರ ಟ್ರಸ್ಟಿಯಾದ ಶ್ರೀಮತಿ ಜಾಯ್ಸ್ ವಿನಯ ಬಂಗೇರ ಭಾಗವಹಿಸಿದ್ದರು.

ವೇದಿಕೆಯಲ್ಲಿ ದಕ್ಷಿಣ ಕನ್ನಡ ಪ್ರದೇಶ ಪರಿಷತ್ ನ ಉಪಾಧ್ಯಕ್ಷರಾದ ರೆವೆ. ಗ್ಯಾಬ್ರಿಯಲ್ ರೋನಿತ್, ಕಾರ್ಯದರ್ಶಿ ಜಯವಂತಿ ಪೌಲ್, ಖಜಾಂಚಿ ಕೌಶಿಕ್ ಅಮ್ಮನ್ನ, ಹಳೆಯಂಗಡಿ ಸಭಾ ಪಾಲಕರಾದ ರೆವೆ. ಅಮೃತ್ ರಾಜ್ ಖೋಡೆ, ಪಣಂಬೂರು ಸಭಾ ಪಾಲಕರಾದ ರೆವೆ. ಸಂಧ್ಯಾ ಖೋಡೆ, ಸಭಾ ಪರಿಪಾಲನ ಸಮಿತಿಯ ಆಸ್ಟಿನ್ ಕರ್ಕಡ, ವಸಂತ್ ಬೆರ್ನಾರ್ಡ್, ಲಾವಣ್ಯ ಕೋಟ್ಯಾನ್, ಶರ್ಲಿ ಬಂಗೇರ, ಜೇಮ್ಸ್ ಕರ್ಕಡ, ಸಿಡ್ನಿ ಕರ್ಕಡ ಮೊದಲಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪ್ರದೇಶ ಪರಿಷತ್ ನ ಕಾರ್ಯದರ್ಶಿಯಾದ ಶ್ರೀಮತಿ ಜಯವಂತಿ ಪೌಲ್ ರವರನ್ನು ಸನ್ಮಾನಿಸಲಾಯಿತು. ಶ್ರೀಮತಿ ಶರ್ಲಿ ಬೆರ್ನಾರ್ಡ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಶ್ರೀ ಪರಮಾನಂದ ಸಾಲ್ಯಾನ್ ಅವರಿಗೆ ಈ ವರ್ಷದ ರಂಗಭಾಸ್ಕರ ಪ್ರಶಸ್ತಿ..!

ಉಳ್ಳಾಲ: ಆಹಾರ ಅರಸಿ ಬಂದ ನವಿಲಿಗೆ ವಿದ್ಯುತ್ ಕಂಬವೇ ಮರಣಬಲೆ….!

ಬಂಟ್ವಾಳ: ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ಉದ್ಘಾಟನೆ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿ….!

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

error: Content is protected !!