ಜನ ಮನದ ನಾಡಿ ಮಿಡಿತ

Advertisement

ಮೂಡುಬಿದಿರೆ ಕಂಬಳ ಸಮಾಲೋಚನಾ ಸಭೆ ; ಶಾಸಕ ಉಮಾನಾಥ ಕೋಟ್ಯಾನ್ ಭಾಗಿ

ಕೋಟಿ ಚೆನ್ನಯ ಜೊಡುಕರೆ ಕಂಬಳ ಸಮಿತಿಯ ವತಿಯಿಂದ ಡಿ.೧೭ ಮತ್ತು ೧೮ ರಂದು ನಡೆಯಲಿರುವ ಮೂಡುಬಿದಿರೆ ಕಂಬಳದ ಕುರಿತು ಸಮಾಲೋಚನಾ ಸಭೆಯು ಸೃಷ್ಠಿ ಗಾರ್ಡನ್‌ನಲ್ಲಿ ನಡೆಯಿತು. ಈ ವೇಳೆ ಕಂಬಳ ಸಮಿತಿಯ ಅಧ್ಯಕ್ಷರಾದ ಶಾಸಕ ಉಮಾನಾಥ ಕೋಟ್ಯಾನ್‌ರವರು ಮಾತಾನಾಡಿ, ಅವಿಭಜಿತ ದ.ಕ ಜಿಲ್ಲೆಯಲ್ಲಿ ಅತೀ ಹೆಚ್ಚು ಕೋಣಗಳು ಭಾಗವಹಿಸುವ ಕಂಬಳ ಇದಾಗಿದ್ದು, ಶಿಸ್ತು ಅಚ್ಚುಕಟ್ಟು ಮತ್ತು ಸಮಯ ಪರಿಪಾಲನೆಗೆ ಹೆಸರಾಗಿದೆ.

ಈ ಗೌರವವನ್ನು ಮುಂದಿನ ಕಂಬಳಗಳಲ್ಲಿಯೂ ಉಳಿಸಿಕೊಳ್ಳಬೇಕು. ಹಿಂದಿನ ಕಂಬಳದ ಸಮಯದಲ್ಲಿ ತಾವು ಯಾರ ಬಳಿಯೂ ಧನದ ಸಹಕಾರವನ್ನು ಕೇಳಿಲ್ಲ. ಈ ಬಾರಿ ಕಂಬಳವು ವೈಭವಯುತವಾಗಿ ನಡೆಯಲು ಎಲ್ಲರೂ ಸಹಕಾರ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಈ ಸಂದರ್ಬದಲ್ಲಿ ಜಿಲ್ಲಾ ಕಂಬಳ ಸಮಿತಿಯ ಮಾಜಿ ಅಧ್ಯಕ್ಷರಾದ ಭಾಸ್ಕರ್ ಎಸ್. ಕೋಟ್ಯಾನ್, ಕೆಎಂಎಫ್ ಅಧ್ಯಕ್ಷರಾದ ಕೆಪಿ ಸುಚರಿತ ಶೆಟ್ಟಿ, ಕಂಬಳ ಸಮಿತಿಯ ಕಾರ್ಯದರ್ಶಿಯಾದ ರಂಜಿತ್ ಪೂಜಾರಿ, ಬಿಜೆಪಿ ಮುಖಂಡರಾದ ಕೆ.ಪಿ ಜಗದೀಶ, ಅಧಿಕಾರಿಯಾದ ಸುನಿಲ್ ಆಳ್ವ, ಈಶ್ವರ ಕಟೀಲು, ನಾಗರಾಜ ಪೂಜಾರಿ, ನ್ಯಾಯವಾದಿ ಶಾಂತಿಪ್ರಸಾದ್ ಹೆಗ್ಡೆ, ವಲಯ ಅರಣ್ಯಾಧಿಕಾರಿ ಹೇಮಗಿರಿ ಅಂಗಡಿ, ಜಿಲ್ಲಾ ಕಂಬಳ ಸಮಿತಿಯ ತೀರ್ಪುಗಾರ ವಿಜಯಕುಮಾರ್ ಕಂಗಿನಮನೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!