ಜನ ಮನದ ನಾಡಿ ಮಿಡಿತ

Advertisement

ಮೂಡುಬಿದಿರೆ ಕಂಬಳ ಸಮಾಲೋಚನಾ ಸಭೆ ; ಶಾಸಕ ಉಮಾನಾಥ ಕೋಟ್ಯಾನ್ ಭಾಗಿ

ಕೋಟಿ ಚೆನ್ನಯ ಜೊಡುಕರೆ ಕಂಬಳ ಸಮಿತಿಯ ವತಿಯಿಂದ ಡಿ.೧೭ ಮತ್ತು ೧೮ ರಂದು ನಡೆಯಲಿರುವ ಮೂಡುಬಿದಿರೆ ಕಂಬಳದ ಕುರಿತು ಸಮಾಲೋಚನಾ ಸಭೆಯು ಸೃಷ್ಠಿ ಗಾರ್ಡನ್‌ನಲ್ಲಿ ನಡೆಯಿತು. ಈ ವೇಳೆ ಕಂಬಳ ಸಮಿತಿಯ ಅಧ್ಯಕ್ಷರಾದ ಶಾಸಕ ಉಮಾನಾಥ ಕೋಟ್ಯಾನ್‌ರವರು ಮಾತಾನಾಡಿ, ಅವಿಭಜಿತ ದ.ಕ ಜಿಲ್ಲೆಯಲ್ಲಿ ಅತೀ ಹೆಚ್ಚು ಕೋಣಗಳು ಭಾಗವಹಿಸುವ ಕಂಬಳ ಇದಾಗಿದ್ದು, ಶಿಸ್ತು ಅಚ್ಚುಕಟ್ಟು ಮತ್ತು ಸಮಯ ಪರಿಪಾಲನೆಗೆ ಹೆಸರಾಗಿದೆ.

ಈ ಗೌರವವನ್ನು ಮುಂದಿನ ಕಂಬಳಗಳಲ್ಲಿಯೂ ಉಳಿಸಿಕೊಳ್ಳಬೇಕು. ಹಿಂದಿನ ಕಂಬಳದ ಸಮಯದಲ್ಲಿ ತಾವು ಯಾರ ಬಳಿಯೂ ಧನದ ಸಹಕಾರವನ್ನು ಕೇಳಿಲ್ಲ. ಈ ಬಾರಿ ಕಂಬಳವು ವೈಭವಯುತವಾಗಿ ನಡೆಯಲು ಎಲ್ಲರೂ ಸಹಕಾರ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಈ ಸಂದರ್ಬದಲ್ಲಿ ಜಿಲ್ಲಾ ಕಂಬಳ ಸಮಿತಿಯ ಮಾಜಿ ಅಧ್ಯಕ್ಷರಾದ ಭಾಸ್ಕರ್ ಎಸ್. ಕೋಟ್ಯಾನ್, ಕೆಎಂಎಫ್ ಅಧ್ಯಕ್ಷರಾದ ಕೆಪಿ ಸುಚರಿತ ಶೆಟ್ಟಿ, ಕಂಬಳ ಸಮಿತಿಯ ಕಾರ್ಯದರ್ಶಿಯಾದ ರಂಜಿತ್ ಪೂಜಾರಿ, ಬಿಜೆಪಿ ಮುಖಂಡರಾದ ಕೆ.ಪಿ ಜಗದೀಶ, ಅಧಿಕಾರಿಯಾದ ಸುನಿಲ್ ಆಳ್ವ, ಈಶ್ವರ ಕಟೀಲು, ನಾಗರಾಜ ಪೂಜಾರಿ, ನ್ಯಾಯವಾದಿ ಶಾಂತಿಪ್ರಸಾದ್ ಹೆಗ್ಡೆ, ವಲಯ ಅರಣ್ಯಾಧಿಕಾರಿ ಹೇಮಗಿರಿ ಅಂಗಡಿ, ಜಿಲ್ಲಾ ಕಂಬಳ ಸಮಿತಿಯ ತೀರ್ಪುಗಾರ ವಿಜಯಕುಮಾರ್ ಕಂಗಿನಮನೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!