ಜನ ಮನದ ನಾಡಿ ಮಿಡಿತ

Advertisement

ಆಳ್ವಾಸ್ ಕಾಲೇಜಿನಲ್ಲಿ ಸ್ವಯಂ ಸೇವಕರ ದಿನ ಕುರಿತ ವಿಶೇಷ ಉಪನ್ಯಾಸ

ಮೂಡುಬಿದಿರೆ: ‘ನಮ್ಮ ದೇಶದಲ್ಲಿ ಸೇವೆ ಎಂಬುದನ್ನು ವಿಭಿನ್ನವಾಗಿ ಕಟ್ಟಿಕೊಟ್ಟವರು ಸ್ವಾಮಿ ವಿವೇಕಾನಂದರು’ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದರು.


ಸ್ವಯಂ ಸೇವಕರ ದಿನ-2023ರ ಅಂಗವಾಗಿ ಆಳ್ವಾಸ್ ಕಾಲೇಜಿನ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಆಳ್ವಾಸ್ ಕಾಲೇಜಿನ ಚಿಗುರು ವಿದ್ಯಾರ್ಥಿ ವೇದಿಕೆ ಆಯೋಜಿಸಿದ ವಿಶೇಷ ಉಪನ್ಯಾಸ- ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಭಾರತದಲ್ಲಿ ಇನ್ನೊಬ್ಬರಿಗೆ ನಿಸ್ವಾರ್ಥದಿಂದ ಮಾಡುವ ಸಹಾಯಕ್ಕೆ ಸೇವೆ ಎಂದು ಕರೆದರೆ, ವಿದೇಶಗಳಲ್ಲಿ ಇದನ್ನು ಸಾಮಾಜಿಕ ಚಟುವಟಿಕೆ ಎಂದು ಗುರುತಿಸುತ್ತಾರೆ. ಯಾವಾಗ ನಿರೀಕ್ಷೆಗಳು ಶೂನ್ಯವಾಗುತ್ತೋ, ಆಗ ಮಾಡುವ ಸಾಮಾಜಿಕ ಚಟುವಟಿಕೆ ಸೇವೆಯಾಗಿ ಗುರುತಿಸಿಕೊಳ್ಳುತ್ತದೆ’ ಎಂದರು.
‘ಭಗವಂತ ಗರ್ಭಗುಡಿಯಲ್ಲಿ ಇರೋದಿಲ್ಲ, ವ್ಯಕ್ತಿಗಳ ಹೃದಯದಲ್ಲಿರುತ್ತಾನೆ. ಪರಬ್ರಹ್ಮ ಸ್ವರೂಪಿ ಆನಂದ ನೀಡುವ ಏಕೈಕ ಕ್ರಿಯೆ ಸೇವೆ. ಇತರರ ದುಃಖಕ್ಕೆ ಸ್ಪಂದಿಸಿದಾಗ ಸಿಗುವ ಸಂತೋಷ ನಮ್ಮ ಕಷ್ಟಕ್ಕೆ ಸ್ಪಂದಿಸಿದಾಗಲೂ ಸಿಗುವುದಿಲ್ಲ’ ಎಂದರು.


‘ಜೀವ ಸೇವೆಯನ್ನು ಯಾರು ಮಾಡುತ್ತಾರೋ ಅವರು ಶಿವ ಸೇವೆಯನ್ನು ಮಾಡಿದ ಹಾಗೆ. ಸೇವೆಯನ್ನು ಪ್ರಾಮಾಣಿಕವಾಗಿ ಮಾಡಿದರೆ ಹೃದಯಕ್ಕೆ ಅದ್ಭುತ ಆನಂದ ಸಿಗುತ್ತೆ. ಆತ್ಮಕ್ಕೆ ಆನಂದ ಸಿಗುವುದು ಸೇವೆಯಿಂದ ಮಾತ್ರ’ ಎಂದರು. ‘ಸೇವಾ ಮನೋಭಾವ ಯುವಕರಲ್ಲಿ ಹೆಚ್ಚು ಮೂಡಬೇಕು. ಇದ್ದುದ್ದನ್ನೆಲ್ಲವನ್ನು ಸಮಾಜಕ್ಕೆ ಕೊಟ್ಟು ಗಾಂಧೀಜಿ ಜಗತ್‌ಮಾನ್ಯರಾದರು’ ಎಂದರು.


‘ಭಾರತ ಸೇವಾ ಮಾರ್ಗದಲ್ಲಿ ಅಗ್ರಣಿಯಾಗಿದೆ. ಇಂದು ಭಾರತಕ್ಕೆ ಹೆಚ್ಚು ಶ್ರೇಷ್ಠತೆ ಸಿಕ್ಕಿರುವುದು ಸೇವಾ ಮನೋಭಾವದಿಂದ. ಭಾರತವನ್ನು ಕರಿ ನೇಷನ್ (ಸಾಂಬಾರು ಪದಾರ್ಥಗಳ), ಮೂಢನಂಬಿಕೆಗಳ ದೇಶ, ಬಡವರ ದೇಶ, ಎಂದು ಹೇಳುವ ಪರಿಸ್ಥಿತಿಯಿಂದ ಕೊರೋನಾ ಕಾಲದಲ್ಲಿ ವಿದೇಶಗಳಿಗೆ ಕೊರೋನಾ ಲಸಿಕೆಯನ್ನು ನೀಡುವ ಹಂತಕ್ಕೆ ಬೆಳೆಯಿತು. ಕೊರೋನಾ ಲಸಿಕೆ ಹೊಂದಿದ್ದ ದೇಶಗಳು ಹೆಚ್ಚಿನ ಹಣಕ್ಕೆ ಲಸಿಕೆಯನ್ನು ಮಾರಿದರೆ, ಭಾರತ ಮಾತ್ರ ಔಷಧಿಯನ್ನು ನಿರ್ಮಾಣ ವೆಚ್ಚದಲ್ಲೆ ನೀಡಿದ ಜಗತ್ತಿನ ಏಕೈಕ ದೇಶ’ ಎಂದು ಶ್ಲಾಘಿಸಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!