ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಬೋಳು ತಲೆ, ಬಿಳಿ ಬಣ್ಣದ ಶರ್ಟ್, ಬಿಳಿ ಬಣ್ಣದ ಮಾಸ್ಕ್ ಧರಿಸಿದ್ದವನೇ ಕಿಲ್ಲರ್!!

ದೀಪಾವಳಿ ಹಬ್ಬದ ಸಂಭ್ರಮದಲ್ಲಿದ್ದ ಜನತೆಗೆ ಬೆಚ್ಚಿ ಬೀಳಿಸಿದ್ದ ಉಡುಪಿ ಜಿಲ್ಲೆಯಲ್ಲಿ ನಡೆದ ಕೊಲೆ. ಒಂದೇ ಕುಟುಂಬದ ನಾಲ್ವರನ್ನು ದುಷ್ಕರ್ಮಿಯೊಬ್ಬ ಹತ್ಯೆ ಮಾಡಿದ್ದಾನೆ. ತಾಯಿ ಹಾಗೂ ಆಕೆಯ ಮೂವರು ಮಕ್ಕಳನ್ನು ಆರೋಪಿ ಬರ್ಬರವಾಗಿ ಇರಿದು ಕೊಂದಿದ್ದಾನೆ. ಆಟೋ ಒಂದರಲ್ಲಿ ಬಂದಿದ್ದ ಆರೋಪಿ ಕೊಲೆ ಎಸಗಿ ಮತ್ತೊಂದು ಆಟೋದಲ್ಲಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಬೋಳು ತಲೆಯ ಅಪರಿಚಿತ ವ್ಯಕ್ತಿಯೊಬ್ಬ ಬಿಳಿ ಬಣ್ಣದ ಶರ್ಟ್, ಬಿಳಿ ಬಣ್ಣದ ಮಾಸ್ಕ್ ಧರಿಸಿ ಬಂದು ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿದ್ದು, ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳ ಸಹಿತ, ಮಾಹಿತಿ ಸಂಗ್ರಹಿಸುತ್ತಿದ್ದಾರೆ..ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ನೇಜಾರು ತೃಪ್ತಿ ನಗರದಲ್ಲಿರುವ ಮೃತರ ಮನೆಗೆ ಬೆಳಗ್ಗಿನ ವೇಳೆ ಬಂದ ದುಷ್ಕರ್ಮಿಯೊಬ್ಬ ತಾಯಿ ಹಾಗೂ ಮೂವರು ಮಕ್ಕಳನ್ನು ಚೂರಿಯಿಂದ ಇರಿದು ಕೊಂದು ವೃದ್ಧೆಯನ್ನು ಗಾಯಗೊಳಿಸಿದ್ದಾನೆ. ತಾಯಿ ಹಸೀನಾ (46) ಆಕೆಯ ಮಕ್ಕಳಾದ ಅಫ್ನಾನ್ (23), ಅಯಾಂಜ್ (21), ಮತ್ತು ಅಸೀಮ್ (14) ದುಷ್ಕರ್ಮಿಯ ಇರಿತದಿಂದ ಮೃತಪಟ್ಟವರು ಎಂದು ಗುರುತಿಸಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!