ಜನ ಮನದ ನಾಡಿ ಮಿಡಿತ

Advertisement

ನಾಗಸ್ವರ ವಾದಕ ಜಲೀಲ್ ಸಾಹೇಬ್ ಹೃದಯಾಘಾತದಿಂದ ನಿಧನ

ಕಾಪು: ನಾಗಸ್ವರ ವಾದಕ ಶೇಖ್ ಜಲೀಲ್ ಸಾಹೇಬ್ (56) ಅವರು ಸೋಮವಾರ ಹೃದಯಾಘಾತದಿಂದ ನಿಧನ ಹೊಂದಿದರು.


ಇಂದು ಮುಂಜಾನೆ ನಾಗಸ್ವರ ಹೆಗಲಿಗೇರಿಸಿಕೊಂಡು ಮನೆಯಿಂದ ಹೊರಗೆ ಹೋಗಿದ್ದರು. ಹೋಟೇಲ್ ನಲ್ಲಿ ಚಹಾ ಕುಡಿಯಲು ಕುಳಿತಿದ್ದ ವೇಳೆ ಎದೆನೋವು ಕಾಣಿಸಿಕೊಂಡಿತ್ತು. ಆದರೆ, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಜಲೀಲ್ ಸಾಹೇಬ್ ಅವರು ಶನಿವಾರ ಕೊಪ್ಪಲಂಗಡಿಯಲ್ಲಿ ನಡೆದ ಮುಳ್ಳಮುಟ್ಟೆ, ಭಾನುವಾರ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ದೀಪಾವಳಿ ಸಂಭ್ರಮ ಮತ್ತು ಬಲಿ ಹೊರಡುವ ಸಂದರ್ಭದಲ್ಲೂ ನಾಗಸ್ವರ ಸೇವೆ ನೀಡಿದ್ದರು. ಕಾಪು ಸಾವಿರ ಸೀಮೆಯ ಒಡೆಯ ಮಹತೋಭಾರ ಶ್ರೀ ಲಕ್ಷ್ಮೀ ಜನಾರ್ದನ ದೇವರ ಸನ್ನಿಧಿ, ಕಾಪು ಮೂರನೇ ಮಾರಿಗುಡಿ ಸಹಿತ ಕಾಪು ಮಾರಿಯಮ್ಮ ದೇವಿ ಸನ್ನಿಧಿ ಹಾಗೂ ಕಾಪು ಸಾವಿರ ಸೀಮೆಯ ಹೆಚ್ಚಿನ ದೇವಸ್ಥಾನ, ಗರಡಿ, ದೇವಸ್ಥಾನಗಳಲ್ಲಿ ನಾಗಸ್ವರ ವಾದಕರಾಗಿ ಸೇವೆ ನೀಡುತ್ತಿದ್ದರು.
ಮೃತರು, ಪತ್ನಿ, ಮಗಳು, ಸಹೋದರ‌ ಸಹಿತ ಅಪಾರ ಬಂಧು ಬಳಗ, ಅಭಿಮಾನಿಗಳನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!