ಜನ ಮನದ ನಾಡಿ ಮಿಡಿತ

Advertisement

ನಾಗಸ್ವರ ವಾದಕ ಜಲೀಲ್ ಸಾಹೇಬ್ ಹೃದಯಾಘಾತದಿಂದ ನಿಧನ

ಕಾಪು: ನಾಗಸ್ವರ ವಾದಕ ಶೇಖ್ ಜಲೀಲ್ ಸಾಹೇಬ್ (56) ಅವರು ಸೋಮವಾರ ಹೃದಯಾಘಾತದಿಂದ ನಿಧನ ಹೊಂದಿದರು.


ಇಂದು ಮುಂಜಾನೆ ನಾಗಸ್ವರ ಹೆಗಲಿಗೇರಿಸಿಕೊಂಡು ಮನೆಯಿಂದ ಹೊರಗೆ ಹೋಗಿದ್ದರು. ಹೋಟೇಲ್ ನಲ್ಲಿ ಚಹಾ ಕುಡಿಯಲು ಕುಳಿತಿದ್ದ ವೇಳೆ ಎದೆನೋವು ಕಾಣಿಸಿಕೊಂಡಿತ್ತು. ಆದರೆ, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಜಲೀಲ್ ಸಾಹೇಬ್ ಅವರು ಶನಿವಾರ ಕೊಪ್ಪಲಂಗಡಿಯಲ್ಲಿ ನಡೆದ ಮುಳ್ಳಮುಟ್ಟೆ, ಭಾನುವಾರ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ದೀಪಾವಳಿ ಸಂಭ್ರಮ ಮತ್ತು ಬಲಿ ಹೊರಡುವ ಸಂದರ್ಭದಲ್ಲೂ ನಾಗಸ್ವರ ಸೇವೆ ನೀಡಿದ್ದರು. ಕಾಪು ಸಾವಿರ ಸೀಮೆಯ ಒಡೆಯ ಮಹತೋಭಾರ ಶ್ರೀ ಲಕ್ಷ್ಮೀ ಜನಾರ್ದನ ದೇವರ ಸನ್ನಿಧಿ, ಕಾಪು ಮೂರನೇ ಮಾರಿಗುಡಿ ಸಹಿತ ಕಾಪು ಮಾರಿಯಮ್ಮ ದೇವಿ ಸನ್ನಿಧಿ ಹಾಗೂ ಕಾಪು ಸಾವಿರ ಸೀಮೆಯ ಹೆಚ್ಚಿನ ದೇವಸ್ಥಾನ, ಗರಡಿ, ದೇವಸ್ಥಾನಗಳಲ್ಲಿ ನಾಗಸ್ವರ ವಾದಕರಾಗಿ ಸೇವೆ ನೀಡುತ್ತಿದ್ದರು.
ಮೃತರು, ಪತ್ನಿ, ಮಗಳು, ಸಹೋದರ‌ ಸಹಿತ ಅಪಾರ ಬಂಧು ಬಳಗ, ಅಭಿಮಾನಿಗಳನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!