ಜನ ಮನದ ನಾಡಿ ಮಿಡಿತ

Advertisement

ವಿದ್ಯಾಗಿರಿಯಲ್ಲಿ ಮಿಜಾರುಗುತ್ತು ಆನಂದ ಆಳ್ವರಿಗೆ ನುಡಿನಮನ; ಆಳ್ವಾಸ್ ಕಾಲೇಜಿನ ಕೃಷಿಸಿರಿ ವೇದಿಕೆಯಲ್ಲಿ ನಡೆದ ಕಾರ್ಯಕ್ರಮ


ಸ್ವರ್ಗಸ್ಥರಾದ ಶತಾಯುಷಿ ಮಿಜಾರುಗುತ್ತು ಆನಂದ ಆಳ್ವ ಅವರಿಗೆ ನುಡಿನಮನ ಹಾಗೂ ಸಹಬೋಜನವು ಆಳ್ವಾಸ್ ಕಾಲೇಜಿನ ಕೃಷಿಸಿರಿ ವೇದಿಕೆಯಲ್ಲಿ ಶ್ರದ್ಧಾ-ಭಕ್ತಿಯಿಂದ ನೆರವೇರಿದೆ

ಈ ಸಂದರ್ಭ ನಿಟ್ಟೆ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ವಿನಯ ಹೆಗ್ಡೆ ಅವರು ನುಡಿನಮನ ಸಲ್ಲಿಸಿದ್ದಾರೆ. ಬಳಿಕ ಮಾತಾನಾಡಿದ ಇವರು, ಕೌಟುಂಬಿಕ ಜವಾಬ್ದಾರಿಯಿಂದ ತನ್ನ ವಿದ್ಯಾಭ್ಯಾಸ ಮೊಟುಕಾದರೂ, ವಿದ್ಯಾಕ್ಷೇತ್ರಕ್ಕೆ ಕೊಡುಗೆ ನೀಡಿ ಹಾಗೂ ವಿಶ್ವವಿದ್ಯಾಲಯಕ್ಕೆ ಸಮಾನಾಗಿ ಶಿಕ್ಷಣ ಸಂಸ್ಥೆ ಕಟ್ಟುವಲ್ಲಿ ತನ್ನ ಮಗನಿಗೆ ನೆರಳಾಗಿ ನಿಂತ ಆನಂದ ಆಳ್ವರ ವ್ಯಕ್ತಿತ್ವವು ಆದರ್ಶ ಹಾಗೂ ಅನುಕರಣೀಯ’ ಎಂದು ಹೇಳಿದ್ರು. ಇದೇ ವೇಳೆ ಮೂಡುಬಿದಿರೆ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಾತನಾಡಿ, ‘ಹಿಂದೂ ಸಂಪ್ರದಾಯದ ಗರುಡ ಪುರಾಣದಲ್ಲಿ ಶ್ರಾದ್ಧ ಹಾಗೂ ಮೋಕ್ಷಗಳ ಕುರಿತ ವಿವರಗಳಿವೆ. ಧರ್ಮ ನಿಷ್ಠ, ಧ್ಯಾನಿ, ಯೋಗಾದಿ ವಿಚಾರಗಳಿಂದ ಮೋಕ್ಷ ಪಡೆಯುತ್ತಾರೆ ಎಂಬ ಉಲ್ಲೇಖವಿದೆ. ಅಂತಹ ಬದುಕನ್ನು ಆನಂದಿಸಿದವರು ‘ಆನಂದ ಆಳ್ವರು’ ಎಂದು ಹೇಳಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಕೃಷಿಸಿರಿ ವೇದಿಕೆಯಲ್ಲಿ ರಚಿಸಲಾದ ಪುಷ್ಪಾಲಂಕೃತ ಬೃಹತ್ ಮಂಟಪದಲ್ಲಿ ಇರಿಸಲಾದ ಮಿಜಾರುಗುತ್ತು ಆನಂದ ಆಳ್ವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆಗೈದಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!