ಜನ ಮನದ ನಾಡಿ ಮಿಡಿತ

Advertisement

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಗೋಪೂಜೆ; ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯ

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಬಲಿಪಾಡ್ಯಮ ದಿನ ಗೋಧೋಳಿ ಸಮಯದಲ್ಲಿ ಸಾಮೂಹಿಕ ಗೋಪೂಜೆ ದೇವಸ್ಥಾನದ ಗೋಶಾಲೆಯಲ್ಲಿ ನಡೆಯಿತು.


ದೇವಸ್ಥಾನದ ಪ್ರಧಾನ ಅರ್ಚಕರಾದ ವಿ.ಎಸ್. ಭಟ್ ಹಾಗೂ ವಸಂತ ಕೆದಿಲಾಯ ಗೋಶಾಲೆ ಆವರಣದಲ್ಲಿ ಗೋಪೂಜೆಯ ವಿಧಿ ವಿಧಾನಗಳನ್ನು ನೆರವೇರಿಸಿದ್ದಾರೆ. ಬಳಿಕ ಗೋವುಗಳಿಗೆ ಹೂವಿನ ಹಾರ ಹಾಕಿ ಅವಲಕ್ಕಿ, ದೋಸೆಯನ್ನು ತಿನ್ನಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಧ ಕೇಶವ ಪ್ರಸಾದ್ ಮುಳಿಯ ಅವರು ಮಾತಾನಾಡಿ, ಮೂರು ವರ್ಷಗಳಿಂದ ಗೋಪೂಜೆ ಮಾಡುತ್ತಾ ಬಂದಿದ್ದೇವೆ. ಕಳೆದ ವರ್ಷದಿಂದ ಗೋಶಾಲೆ ತೆರೆದಿದ್ದೇವೆ. ಈ ಭಾರಿಯೂ ಗೋಪೂಜೆ ನಡೆದಿದೆ. ಈ ಸಂದರ್ಭದಲ್ಲಿ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳನ್ನು ನೆನಪಿಸಬೇಕಾಗುತ್ತದೆ. ಏಕೆಂದರೆ ದೇಶಿ ವಿವಿಧ ತಳಿಗಳ ಪುನರುತ್ಥಾನಕ್ಕಾಗಿ ಗೋವಿನ ಆಂದೋಲನ ಮಾಡುವಲ್ಲಿ ಅವರ ಅನುಗ್ರಹವಿದೆ ಎಂದು ಹೇಳಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಬಿ.ಐತ್ತಪ್ಪ ನಾಯ್ಕ್, ಡಾ. ಸುಧಾ ಎಸ್. ರಾವ್, ವೀಣಾ ಬಿ.ಕೆ., ಕಾರ್ಯನಿರ್ವಹಣಾಧಿಕಾರಿಯಾದ ಕೆ.ವಿ.ಶ್ರೀನಿವಾಸ, ಗೋಪೂಜೆ ಸೇವಾಕರ್ತರು, ಭಕ್ತಾದಿಗಳು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!