ಜನ ಮನದ ನಾಡಿ ಮಿಡಿತ

Advertisement

ಕೆಂಚನಕೆರೆ: ಮಕ್ಕಳ ದಿನಾಚರಣೆ; ಸಾಧಕರಿಗೆ ಗೌರವ

ಮುಲ್ಕಿ: ಶ್ರೀ ಚಂದ್ರಶೇಖರ ಸ್ವಾಮೀಜಿ ಟ್ರಸ್ಟ್ ಹಾಗೂ ಬಪ್ಪನಾಡು ಲಯನ್ಸ್ ಕ್ಲಬ್ ಇನ್ಸ್ಪೈರ್ ವತಿಯಿಂದ ಮಕ್ಕಳ ದಿನಾಚರಣೆ ಹಾಗೂ ಸಾಧಕರಿಗೆ ಗೌರವ ಕಾರ್ಯಕ್ರಮ ಕೆಂಚನಕೆರೆ ಕಾಮತ್ ಕಾಂಪೌಂಡ್ ನಲ್ಲಿ ನಡೆಯಿತು.
ಮಕ್ಕಳ ದಿನಾಚರಣೆಗೆ ಚಾಲನೆ ನೀಡಿ ಬಪ್ಪನಾಡು ಲಯನ್ಸ್ ಕ್ಲಬ್ ಇನ್ಸ್ಪೈರ್ ನ ಸ್ಥಾಪಕ ಅಧ್ಯಕ್ಷ ವೆಂಕಟೇಶ ಹೆಬ್ಬಾರ್ ಮಾತನಾಡಿ ಸೇವಾ ಸಂಸ್ಥೆಗಳ ವತಿಯಿಂದ ಶಿಕ್ಷಣ ಕ್ಷೇತ್ರದಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುವ ಕಾರ್ಯ ನಡೆಯುತ್ತಿದ್ದು ಇದು ಇತರ ಮಕ್ಕಳಿಗೂ ಪ್ರೇರಣೆಯಾಗಿ ಸಾಧನೆ ನಿರಂತರವಾಗಿ ನಡೆಯಲಿ ಎಂದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಕಿಲ್ಪಾಡಿ ಶ್ರೀ ಚಂದ್ರಶೇಖರ ಸ್ವಾಮೀಜಿ ಸೇವಾ ಟ್ರಸ್ಟ್ ನ ಸಂಚಾಲಕ ಪುನೀತ್ ಕೃಷ್ಣ ಮಾತನಾಡಿ ಸೇವಾ ಟ್ರಸ್ಟ್ ನಿಂದ ಅನೇಕ ಸೇವಾ ಕಾರ್ಯಗಳು ನಿರಂತರವಾಗಿ ನಡೆಯುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ರಾಜ್ಯ ಮಟ್ಟದ ಐಟಿ ಕ್ವಿಜ್ ಸ್ಪರ್ಧೆಯಲ್ಲಿ ಸಾಧನೆ ಮಾಡಿ ರಾಷ್ಟ್ರೀಯ ಮಟ್ಟಕ್ಕೆ ತೇರ್ಗಡೆಯಾದ ಮಾಧವ ಕಾಮತ್ ಕೆಂಚನಕೆರೆ ರವರನ್ನು ಗೌರವಿಸಲಾಯಿತು.


ಈ ಸಂದರ್ಭ ಪತ್ರಕರ್ತ ರಘುನಾಥ ಕಾಮತ್, ಲಯನ್ಸ್ ಸಂಸ್ಥೆಯ ಪದಾಧಿಕಾರಿಗಳಾದ ಪ್ರತಿಭಾ ಹೆಬ್ಬಾರ್, ಶಿವಪ್ರಸಾದ್, ಅಶ್ವಿನಿ, ಶಿವಾನಿ, ಸಾಧನ, ಶ್ರೀಧರ್ ಕಾಮತ್, ಸುಧಾ ಕಾಮತ್, ಸ್ಮಿತಾ ಕಾಮತ್, ಶ್ರೇಯ ಕಾಮತ್, ಜನಾರ್ದನ್, ವಿವೇಕ್ ,ವಿಖ್ಯಾತ ಮತ್ತಿತರರು ಉಪಸ್ಥಿತರಿದ್ದರು.
ಮಕ್ಕಳ ದಿನಾಚರಣೆ ಅಂಗವಾಗಿ ಆಟೋಟ ಸ್ಪರ್ಧೆ ನಡೆಸಿ ಬಹುಮಾನ ವಿತರಿಸಲಾಯಿತು. ರಘುನಾಥ ಕಾಮತ್ ನಿರೂಪಿಸಿದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!