ಜನ ಮನದ ನಾಡಿ ಮಿಡಿತ

Advertisement

ಉಡುಪಿಯ ನಾಲ್ವರ ಹತ್ಯಾಕಾಂಡ ; ಬಗೆದಷ್ಟು ಬಯಲಾಗ್ತಿದೆ ಕಿರಾತಕನ ಕ್ರೌರ್ಯ

 ಒಂದೇ ಮನೆಯಲ್ಲಿ ನಾಲ್ವರ ಹತ್ಯಾಕಾಂಡ ನಡೆದಿದ್ದ ರಕ್ತಪಾತ ಬೆಚ್ಚಿ ಬೀಳಿಸಿದೆ. ಗಗನಸಖಿ ಅಯ್ನಾಸ್‌ಳನ್ನು ಬರ್ಬರವಾಗಿ ಹತ್ಯೆ ಮಾಡಿದ ಕಿರಾತಕನ ಕ್ರೌರ್ಯ ಬಗೆದಷ್ಟು ಬಯಲಾಗ್ತಿದೆ. ಸದ್ಯ ಪೊಲೀಸರ ವಶದಲ್ಲಿರುವ ಆರೋಪಿ ಪ್ರವೀಣ ಚೌಗಲೆ ತಾನು ಯಾರು? ಅಯ್ನಾಸ್‌ಳನ್ನು ಕೊಲೆ ಮಾಡಲು ಕಾರಣವೇನು ಅನ್ನೋ ಸ್ಫೋಟಕ ಸಂಗತಿಗಳನ್ನ ಬಾಯ್ಬಿಟ್ಟಿದ್ದಾನೆ.

ಆರೋಪಿ ಪ್ರವೀಣ ಚೌಗಲೆ ಏರ್‌ ಇಂಡಿಯಾ ವಿಮಾನದಲ್ಲಿ ಕ್ಯಾಬಿನ್ ಕ್ರ್ಯೂ ಆಗಿ ಕೆಲಸ ಮಾಡುತ್ತಿದ್ದ. ಕ್ಯಾಬಿನ್ ಕ್ರ್ಯೂ ಅಂದ್ರೆ ವಿಮಾನ ಹತ್ತಿದ ಮೇಲೆ ಪ್ರಯಾಣಿಕರು ವಿವರಣೆ ನೀಡೋ ಕಾರ್ಯ. ಇದೇ ವಿಮಾನದಲ್ಲಿ ಸಹೋದ್ಯೋಗಿಯಾಗಿದ್ದು ಗಗನಸಖಿ ಅಯ್ನಾಸ್‌. ಅಯ್ನಾಸ್‌ ಅಂದ್ರೆ ಪ್ರವೀಣ್ ಅದೆಷ್ಟು ಇಷ್ಟ ಪಡುತ್ತಿದ್ದ ಅಂದ್ರೆ, ಅಯ್ನಾಸ್ ಮೊಬೈಲ್ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಪ್ರವೀಣ್ ಚೌಗಲೆ ಹುಚ್ಚನಂತಾಗಿದ್ದ.

ಅಯ್ನಾಸ್ ತನ್ನಿಂದ ದೂರ ಮಾಡಿದ್ದಕ್ಕೆ ಕೋಪಗೊಂಡ ಪ್ರವೀಣ್ ಕೊಲೆ ಮಾಡಲು ನಿರ್ಧರಿಸಿದ್ದ. ಈತನ ಉದ್ದೇಶ ಅಯ್ನಾಸ್ ಒಬ್ಬಳನ್ನೇ ಕೊಲೆ ಮಾಡುವುದಾಗಿತ್ತು. ಆದರೆ, ಸಾಕ್ಷ್ಯ ನಾಶದ ಕಾರಣಕ್ಕೆ ಅಯ್ನಾಸ್ ಜೊತೆಗಿದ್ದ ಅಮ್ಮ, ತಮ್ಮ, ತಂಗಿಯನ್ನು ಹತ್ಯೆ ಮಾಡಿದ್ದಾನೆ. ಕೊಲೆ ಮಾಡಿದ ಬಳಿಕ ಪ್ರವೀಣ್ ಓಡಾಟ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದಿಷ್ಟೇ ಅಲ್ಲ ಎಲ್ಲಾ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಿದ ಪೊಲೀಸರಿಗೆ ಹಂತಕ ಪ್ರವೀಣ್ ಕೊಲೆ ಮಾಡೋದಕ್ಕೂ ಮೊದಲೇ ಅಯ್ನಾಸ್ ಮನೆಗೆ ಬಂದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಉಡುಪಿ ಪೊಲೀಸರು ಪ್ರವೀಣ್ ಹೆಜ್ಜೆ ಗುರುತನ್ನೇ ಹಿಂಬಾಲಿಸಿಕೊಂಡು ಹೋಗಿ ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

error: Content is protected !!