ಜನ ಮನದ ನಾಡಿ ಮಿಡಿತ

Advertisement

ಜಾಗತಿಕ ಬಂಟರ ಸಂಘಗಳ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರಿಂದ ಪುಣ್ಯ ಕಾರ್ಯ

ಮಂಗಳೂರು:ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ನೇತೃತ್ವದ ಜಾಗತಿಕ ಬಂಟರ ಸಂಘಗಳ ಒಕ್ಕೂಟವು ಸಮಾಜ ಕಲ್ಯಾಣ ಯೋಜನೆಯಡಿಯಲ್ಲಿ ಅಶಕ್ತರಿಗೆ ನೆರವಾಗುವ ಮೂಲಕ ಸಾಕಷ್ಟು ಪುಣ್ಯ ಕಾರ್ಯಗಳನ್ನು ಮಾಡುತ್ತಾ ಬಂದಿದೆ. ಅಂತೆಯೇ ಈ ಪುಣ್ಯ ಕಾರ್ಯಕ್ಕೆ ಮತ್ತೊಂದು ಸೇರ್ಪಡೆಯಾಗಿದೆ.

ಹೌದು, ಉಡುಪಿ ಜಿಲ್ಲೆಯ ಹಾವಂಜೆ ಕೀಳಿಂಜೆಯ ಛಾಯಾಗ್ರಾಹಕರಾದ ಗಣೇಶ್ ಶೆಟ್ಟಿಯವರ ಕ್ಯಾನ್ಸರ್ ಕಾಯಿಲೆಯ ಚಿಕಿತ್ಸೆಗಾಗಿ ಮತ್ತು ಅವರ ಮಗಳಾದ ಪ್ರತಿಭಾವಂತೆ ಕರಾಟೆ ಪಟು ರಿಯಾಳ ಕ್ರೀಡಾ ಚಟುವಟಿಕೆಗೆ ಆರ್ಥಿಕ ಸಹಾಯ ಒದಗಿಸುವಂತೆ ಮನವಿ ಮಾಡಿದ ಹಿನ್ನೆಲೆ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಅತ್ಯಂತ ತುರ್ತಾಗಿ ಸ್ಪಂದಿಸಿ, ಮಾನವೀಯ ನೆಲೆಯಲ್ಲಿ ಆರ್ಥಿಕ ಸಹಾಯವನ್ನು ಮಾಡಿದ್ದಾರೆ. ಅಂತೆಯೇ ಮಂಗಳೂರಿನ ಬಲ್ಕುಂಜೆ ನಿವಾಸಿಯಾದ ಗುಲಾಬಿಯವರು ಆರ್ಥಿಕವಾಗಿ ತುಂಬಾ ಕಷ್ಟದಲ್ಲಿದ್ದು, ಅವರಿಗೆ ಮನೆ ನಿರ್ಮಾಣಕ್ಕೆ ಮಂಜೂರಾದ ಸಹಾಯ ಧನದ ಚೆಕ್ಕನ್ನು ಗುಲಾಬಿಯವರಿಗೆ ಮನೆಯ ಗೃಹಪ್ರವೇಶದ ಸಂದರ್ಭದಲ್ಲಿ ಹಸ್ತಾಂತರಿಸುವ ಮೂಲಕ ಸಮಾಜಕ್ಕೆ ಮಾದರಿಯಾಗುವಂತಹ ಕಾರ್ಯವನ್ನು ಮಾಡಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ್ ಶೆಟ್ಟಿಯವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!