ಜನ ಮನದ ನಾಡಿ ಮಿಡಿತ

Advertisement

ಸಂಬಳ ಕೇಳಲು ಬಂದ ವ್ಯಕ್ತಿಗೆ ಬೂಟು ನೆಕ್ಕಿಸಿ ವಿಕೃತಿ ಮೆರೆದ ಮಹಿಳಾ ಉದ್ಯಮಿ.!

ಗುಜರಾತ್:ಮಹಿಳಾ ಉದ್ಯಮಿ ಹಾಗೂ ಆಕೆಯ 6 ಸಹಚರರು ದಲಿತ ವ್ಯಕ್ತಿಯೊಬ್ಬನ ಮೇಲೆ ದೌರ್ಜನ್ಯ ಎಸಗಿದ ಘಟನೆ ಗುಜರಾತ್ ರಾಜ್ಯದ ಮೊರ್ಬಿ ನಗರದಲ್ಲಿ ನಡೆದಿದೆ.

ಸಂಬಳ ನೀಡುವಂತೆ ಒತ್ತಾಯ ಮಾಡಿದ ಎಂದು ಸಿಟ್ಟಿಗೆದ್ದ ಮಹಿಳೆ, ತನ್ನ ಕಂಪನಿಯ ಇತರ ಕಾರ್ಮಿಕರ ನೆರವು ಪಡೆದು 21 ವರ್ಷ ವಯಸ್ಸಿನ ದಲಿತ ಯುವಕನ ಬಾಯಿಗೆ ತನ್ನ ಚಪ್ಪಲಿಯನ್ನು ತುರುಕಿ, ಇತರ ನೌಕರರಿಂದ ಬೆಲ್ಟ್ ನಿಂದ ಹೊಡೆಸಿದ ಹೇಯ ಘಟನೆ ನಡೆದಿದೆ. ರಾಣಿಬಾ ಇಂಡಸ್ಟ್ರೀಸಿ ಎಂಬ ಸೆರಾಮಿಕ್ ಕಂಪನಿಯಲ್ಲಿ ಸೇಲ್ಸ್ ಮ್ಯಾನೇಜರ್ ಆಗಿ ಕೆಲಸಕ್ಕೆ ಸೇರಿಕೊಂಡಿದ್ದ ನಿಲೇಶ್ ದಾಲ್ಮಾನಿಯಾ ಎಂಬ ವ್ಯಕ್ತಿಯನ್ನು ಕೇವಲ 18 ದಿನಗಳಲ್ಲೇ ವಜಾಗೊಳಿಸಲಾಗಿತ್ತು. ಬಳಿಕ ಆ 18 ದಿನಗಳ ತನ್ನ ಕೆಲಸಕ್ಕೆ ನೀಡಬೇಕಾಗಿದ್ದ ಸಂಬಳ ಕೇಳಲು ನಿಲೇಶ್ ತನ್ನ ಇಬ್ಬರು ಸ್ನೇಹಿತರೊಂದಿಗೆ ರಾಣಿಬಾ ಇಂಡಸ್ಟ್ರೀಸಿ ಗೆ ತೆರಳಿದ ವೇಳೆ ನಿಲೇಶ್‌ನನ್ನು ಕಂಡು ಕೋಪಗೊಂಡ ರಾಣಿಬಾ ಮತ್ತು ಆಕೆಯ ಸಹಾಯಕ ಮೊದಲು ಮೂವರಿಗೂ ಕಪಾಳಮೋಕ್ಷ ಮಾಡಿದ್ದಾರೆ. ಬಳಿಕ ಅಲ್ಲಿದ್ದ ಐವರು ಇತರ ಆರೋಪಿಗಳು ನಿಲೇಶ್‌ಗೆ ತೀವ್ರವಾಗಿ ಥಳಿಸಿದ್ದಾರೆ. ಈ ವೇಳೆ ನಿಲೇಶ್ ದಲಿತ ಎಂಬ ಕಾರಣಕ್ಕೆ ಜಾತಿ ನಿಂದನೆ ಮಾಡಿದ್ದಾರೆ. ನಿಲೇಶ್ ಹಾಗೂ ಆತನ ಜೊತೆಗಾರರಿಗೆ ಥಳಿಸಿದ ಆರೋಪದ ಮೇಲೆ ಆರು ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!