ಜನ ಮನದ ನಾಡಿ ಮಿಡಿತ

Advertisement

ಶ್ರೀ ವೈದ್ಯನಾಥ ,ಅರಸು,ಜುಮಾದಿಬಂಟ ದೈವಸ್ಥಾನಕ್ಕೆ ನೂತನ ಧ್ವಜ ಸ್ತಂಭ; ವೃಕ್ಷದ ಛೇಧಕ್ಕೆ ಮುಹೂರ್ತಪೂಜೆ

ಬಂಟ್ವಾಳ:ಬoಟ್ವಾಳದ ನಂದನಹಿತ್ಲು ಶ್ರೀ ವೈದ್ಯನಾಥ ,ಅರಸು,ಜುಮಾದಿಬಂಟ ದೈವಸ್ಥಾನಕ್ಕೆ ನೂತನ ಧ್ವಜ ಸ್ತಂಭ ಸಮರ್ಪಣೆಯ ಹಿನ್ನಲೆಯಲ್ಲಿ ಬಂಟ್ವಾಳ ತ್ಯಾಗರಾಜರಸ್ತೆಯಲ್ಲಿ ಗುರುತಿಸಲಾದ ವೃಕ್ಷದ ಛೇಧಕ್ಕೆ ಸ್ಥಳದಲ್ಲಿ ಮುಹೂರ್ತಪೂಜಾ ವಿಧಿ ವಿಧಾನವನ್ನು ನಡೆಸಲಾಯಿತು.

ಕ್ಷೇತ್ರದ ತಂತ್ರಿಗಳಾದ ಪೊಳಲಿ ಗಿರಿಪ್ರಕಾಶ್ ತಂತ್ರಿಯವರ ನೇತೃತ್ವದಲ್ಲಿ ವೃಕ್ಷಕ್ಕೆ ಧಾರ್ಮಿಕ ವಿಧಿ ವಿಧಾನಗಳು ನೆರವೇರಿದೆ. ಇದೇ ವೇಳೆ ಮರ ಕತ್ತರಿಸುವುದು ಸಹಿತ ಮುಂದಿನ ಪ್ರಕ್ರಿಯೆಗೆ ವಿಶ್ವಕರ್ಮರಿಗೆ ವೀಳ್ಯ ನೀಡಲಾಯಿತು. ಇನ್ನು ಈ ಸಂದರ್ಭ ದೈವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಗಣೇಶ್ ಸುವರ್ಣ ತುಂಬೆ, ಬಾಳಿಗಾ ಮನೆತನದ ಬಿ. ಸುಧೀರ್ ಬಾಳಿಗಾ, ವಿಶ್ವನಾಥ ಪೂಜಾರಿ ಪೊನ್ನಂಗಿಲಗುತ್ತು, ಸಂಜೀವ ಪೂಜಾರಿ ಪೆಲತ್ತಿಮಾರು, ಲೋಕೇಶ್ ಬಂಗೇರ ಗಾಣದಪಡ್ಪು,ಲೋಕನಾಥ ಪೂಜಾರಿ ಬಡಕೊಟ್ಟು, ಧ್ವಜಸ್ತಂಭಕ್ಕಾಗಿ ಮರವನ್ನು ಉಚಿತವಾಗಿ ದಾನಗೈದ ಅವಿನಾಶ್ ಕಾಮತ್, ಶಿಲ್ಪಿ ಸದಾಶಿವ ಶೆಣೈ, ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!