ಜನ ಮನದ ನಾಡಿ ಮಿಡಿತ

Advertisement

ಕಿನ್ನಿಗೋಳಿ: ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯ ಘಟಕವನ್ನು ಗ್ರಾಮ ಮಟ್ಟದಲ್ಲಿ ಆರಂಭಿಸುವ ನಿಟ್ಟಿನಲ್ಲಿ ಪೂರ್ವಾಭಾವಿ ಸಭೆ

ಕಿನ್ನಿಗೋಳಿ ಸ್ವಾ ಮಿ ವಿವೇಕಾನಂದ ಸೇವಾಸಂಸ್ಥೆಯು ಕಳೆದ 10 ವರ್ಷದಿಂದ ಸಾಂಸ್ಕೃತಿಕ ಸಾಹಿತ್ಯಿಕ, ಅದ್ಯಾತ್ಮಿಕ ಧಾರ್ಮಿಕ , ಕ್ರೀಡಾ ಮತ್ತು ಸೇವಾ ಕಾರ್ಯಕ್ರಮಗಳನ್ನು ಮಾಡುತ್ತ ಬಂದಿದ್ದು ಇದೀಗ ಪ್ರತಿ ಗ್ರಾಮದಲ್ಲಿಯೂ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯ ಸೇವಾ ಘಟಕಗಳನ್ನು ಆರಂಭಿಸಲಾಗುವುದು ಎಂದು ಕಿನ್ನಿಗೋಳಿ ಸ್ವಾಮಿ ವಿವೇಕಾನಂದ ಸೇವಾ ಟ್ರಸ್ಟ್ ಅಧ್ಯಕ್ಷ ನಿಡ್ಡೋಡಿ ಚಾವಡಿ ಮನೆ ಡಾ| ಜಗನ್ನಾಥ ಶೆಟ್ಟಿ ಹೇಳಿದರು.

ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯ ಘಟಕವನ್ನು ಗ್ರಾಮ ಮಟ್ಟದಲ್ಲಿ ಆರಂಭಿಸುವ ನಿಟ್ಟಿನಲ್ಲಿ ಜರಗಿದ ಪೂರ್ವಾಭಾವಿ ಸಭೆಯಲ್ಲಿ ಮಾತನಾಡಿದ ಅವರು ಸ್ವಾಮಿ ವಿವೇಕಾವಾಣಿಯಂತೆ ಮಾನವನ ಸೇವೆಯು ಮಾಧವ ಸೇವೆ ಯ ಪರಿಕಲ್ಪನೆಯಲ್ಲಿ ಪ್ರತಿ ಗ್ರಾಮ ಮಟ್ಟದಲ್ಲಿ ಧಾರ್ಮಿಕತೆಗೆ ಒತ್ತು ನೀಡುವ ನಿಟ್ಟಿನಲ್ಲಿ ಸತ್ಯನಾರಾಯಣ ಪೂಜೆ, ಶನಿ ಪೂಜೆ , ಹರಿಕಥೆ ಮಾಡಲಾಗುವುದು. ಸೇವಾ ಕಾರ್ಯಕ್ರಮಕ್ಕೆ ಗಟ್ಟಿ ಮಾಡಲು ವೈದ್ಯಕೀಯ ಶಿಬಿರ, ಸಮಾಜ ಮುಖಿ ಕಾರ್ಯಕ್ರಮ ಬಲ ಪಡಿಸಲು ಕೃಷಿ ಕಾರ್ಯಕ್ಕೆ ಸಲಹೆ ಮಾಹಿತಿ ಶಿಬಿರ ಅಗತ್ಯ ತುರ್ತು ಸೇವೆ ನೀಡುವ ಬಗ್ಗೆ ಇನ್ನಿತರ ಸೇವಾ ಕಾರ್ಯಕ್ರಮ ಮಾಡುವ ನಿಟ್ಟಿನಲ್ಲಿ ಗ್ರಾಮ ದಲ್ಲಿ ೩೦ ಜನರ ಸದೃಡ ತಂಡ ಕಟ್ಟಲಾಗುವುದು, ವಾರದ ಸಭೆ , ತಿಂಗಳ ಸಭೆ ಮುಂತಾದ ಪರಿಕಲ್ಪನೆ ಮಾಡಲಾಗುವುದು ಎಂದು ತಿಳಿಸಿದರು. ಸಂಚಾಲಕ ನರಸಿಂಹ ಮಡಿವಾಳ , ಪದ್ಮಿನಿ ವಸಂತ್, ಪ್ರಕಾಶ್ ಆಚಾರ್, ಸಂತೋಷ್ ದೇವಾಡಿಗ, ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು. ಸೀತಾರಾಮ ಶೆಟ್ಟಿ ಪ್ರಸ್ತಾವನೆಗೈದು,ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!