ಜನ ಮನದ ನಾಡಿ ಮಿಡಿತ

Advertisement

ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಗುಲಾಬಿ ಆಂದೋಲನ ಕಾರ್ಯಕ್ರಮ

ದ. ಕ. ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ ಬಂಟ್ವಾಳ ಮತ್ತು ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಗುಲಾಬಿ ಆಂದೋಲನ ಕಾರ್ಯಕ್ರಮ.


ಬಂಟ್ವಾಳ ತಾಲೂಕಿನ ದ.ಕ.ಜಿ.ಪ ಸರಕಾರಿ ಪ್ರಾಥಮಿಕ ಶಾಲೆ, ಕೊಡಂಗೆ ಇಲ್ಲಿ ಜರಗಿತು . ತಾಲೂಕು ಆರೋಗ್ಯಾಧಿಕಾರಿ ಡಾಕ್ಟರ್ ಅಶೋಕ್ ರೈ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮದ ಬಗ್ಗೆ ವಿವರವಾಗಿ ಮಕ್ಕಳಿಗೆ ಮಾಹಿತಿ ನೀಡಿದರು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಕುಸುಮ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಶೃತಿ ತಂಬಾಕು ವ್ಯಸನಿಗಳು ಆಗುವುದಿಲ್ಲ ಮತ್ತು ನಮ್ಮ ಕುಟುಂಬ ವರ್ಗದವರನ್ನು ಹಾಗೂ ಸ್ನೇಹಿತರನ್ನು ಈ ದುಶ್ಚಟದಿಂದ ಹೊರ ತರಲು ಪ್ರಯತ್ನ ಮಾಡುತ್ತೇವೆ ಎಂಬ ಬಗ್ಗೆ ಮಕ್ಕಳಿಗೆ ಪ್ರತಿಜ್ಞೆ ಮಾಡಿಸಿದರು. ಈ ಸಂದರ್ಭದಲ್ಲಿ ತಂಬಾಕು ದುಷ್ಪಟದ ಅರಿವು ಮೂಡಿಸಲು ಜಾತ ನಡೆಸಲಾಯಿತು ಹಾಗೂ ಸುತ್ತಮುತ್ತಲಿನ ಅಂಗಡಿಗಳಿಗೆ ತೆರಲಿ ಗುಲಾಬಿ ಹೂ ನೀಡಿ ತಂಬಾಕು ವಸ್ತುಗಳನ್ನು ಮಾರಾಟ ಮಾಡದಂತೆ ಅಂಗಡಿ ಮಾಲಕರಿಗೆ ಮನವರಿಕೆ ಮಾಡಲಾಯಿತು.


ಕಾರ್ಯಕ್ರಮದಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಶ್ವಿನಿ, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ರಾಧ, ಆರೋಗ್ಯ ನಿರೀಕ್ಷಣಾಧಿಕಾರಿ ರಾಕೇಶ್, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಸೌಮ್ಯ, ಆಶಾ ಕಾರ್ಯಕರ್ತೆ ಸರಸ್ವತಿ ತಾಲೂಕು ಆರೋಗ್ಯಾಧಿಕಾರಿ ಕಚೇರಿಯ ಸಿಬ್ಬಂದಿ ಸುಜಾತ,ಶಾಲಾ ಮುಖ್ಯ ಶಿಕ್ಷಕಿ ಸುಗುಣ ಮತ್ತು ಎಲ್ಲಾ ಶಿಕ್ಷಕರು, ಶಾಲಾಭಿವೃದ್ಧಿ ಸದಸ್ಯರಾದ ಅಬ್ದುಲ್ ಜಲೀಲ್ ಭಾಗವಹಿಸಿದರು.

Leave a Reply

Your email address will not be published. Required fields are marked *

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

error: Content is protected !!