ಜನ ಮನದ ನಾಡಿ ಮಿಡಿತ

Advertisement

ಡಿ. 3 ರಂದು ಉಡುಪಿಯಲ್ಲಿ ನಡೆಯಲಿದೆ ‘ನಾರೀ ಶಕ್ತಿ ಸಂಗಮ’ ಮಹಿಳಾ ಸಮ್ಮೇಳನ

ಉಡುಪಿ:ಮಹಿಳಾ ಸಮ್ಮೇಳನ, ಉಡುಪಿ ಜಿಲ್ಲೆ ಇದರ ಆಶ್ರಯದಲ್ಲಿ ಸೇವಾ ಸಂಗಮ ಟ್ರಸ್ಟ್ ಸಹಯೋಗದಲ್ಲಿ ‘ನಾರೀ ಶಕ್ತಿ ಸಂಗಮ’ ಮಹಿಳಾ ಸಮ್ಮೇಳನವನ್ನು ಡಿಸೆಂಬರ್ 3 ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ2 ಗಂಟೆಯವರೆಗೆ ಉಡುಪಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷೆ ಸುಮತ ನಾಯಕ್ ಹೇಳಿದ್ದಾರೆ.

ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳೆಯರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಈ ಸಮ್ಮೇಳನವನ್ನು ಆಯೋಜಿಸಲಾಗಿದೆ. ರಾಷ್ಟ್ರೀಯ ಚಿಂತನೆ, ಸಾಮಾಜಿಕ ಸಾಮರಸ್ಯ, ಮಹಿಳಾ ಸುರಕ್ಷೆ, ಕೃಷಿ ಇತ್ಯಾದಿ ವಿಚಾರಗಳ ಬಗ್ಗೆ ಸಮ್ಮೇಳನ ಬೆಳಕು ಚೆಲ್ಲಲಿದೆ. ಸಮ್ಮೇಳನದಲ್ಲಿ ಸುಮಾರು 1,500 ಮಹಿಳೆಯರು ಭಾಗವಹಿಸಲಿದ್ದಾರೆ ಎಂದ್ರು. ಸ್ವಾತಂತ್ರ‍್ಯ ಪೂರ್ವದಲ್ಲಿ ಹೋರಾಟ ಮಾಡಿದ ವೀರ ಮಹಿಳೆಯರ ಹಾಗೂ ಸ್ವಾತಂತ್ರ‍್ಯ ನಂತರ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದಂತಹ ಮಹಿಳಾ ಸಾಧಕಿಯರ ಚಿತ್ರಗಳನ್ನು ಎಲ್ ಇಡಿ ಮೂಲಕ ಪ್ರದರ್ಶನ ಮಾಡಲಾಗುತ್ತದೆ. ಸಂಜೀವಿನಿ ಸ್ವಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ವಿವಿಧ ಉತ್ಪನ್ನಗಳ, ಪುಸ್ತಕ ಭಂಡಾರ ಮತ್ತು ಗೋವು ಉತ್ಪನ್ನಗಳ ಮಳಿಗೆಗಳು ಇರಲಿವೆ ಎಂದು ಮಾಹಿತಿ ನೀಡಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಸ್ವಾಗತ ಸಮಿತಿಯ ಪ್ರತಿಭಾ ಎಂ.ಎಲ್. ಸಾಮಗ, ಗೀತಾ ಆನಂದ ಕುಂದರ್, ರೇಷ್ಮಾ ಉದಯ್ ಶೆಟ್ಟಿ, ಸುಬ್ರಹ್ಮಣ್ಯ ಹೊಳ್ಳ, ಶಶಿಕಲಾ ಕೆ. ಹೆಗ್ಡೆ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!