ಜನ ಮನದ ನಾಡಿ ಮಿಡಿತ

Advertisement

`ಕ್ರೀಡಾ ಕಾರಂಜಿ’ ರಾಜ್ಯ ಮಟ್ಟದ ಪ್ರೌಢ ಶಾಲಾ ಕ್ರೀಡಾಕೂಟದ ಪ್ರಯುಕ್ತ; ಪುತ್ತೂರು ತಾಲೂಕಿನಾದ್ಯಂತ ಸಂಚರಿಸಲಿರುವ ಕ್ರೀಡಾ ಜ್ಯೋತಿ ರಥಕ್ಕೆ ಚಾಲನೆ

ಪುತ್ತೂರು: ನಗರದ ಶ್ರೀ ರಾಮಕೃಷ್ಣ ಪ್ರೌಢ ಶಾಲೆಯಲ್ಲಿ ಡಿ.೧ ರಿಂದ ೪ರವರೆಗೆ ನಡೆಯಲಿರುವ ೧೭ರ ವಯೋಮಾನದ ಪ್ರೌಢ ಶಾಲಾ ಬಾಲಕ ಬಾಲಕಿಯರ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಹಸಿರುವಾಣಿ ಸಮರ್ಪಣೆ ಹಾಗೂ ಕಾರ್ಯಕ್ರಮದ ಪ್ರಯುಕ್ತ ಕಡಬ ಹಾಗೂ ಪುತ್ತೂರು ತಾಲೂಕಿನಾದ್ಯಂತ ಸಂಚರಿಸುತ್ತಿರುವ ಕ್ರೀಡಾ ಜ್ಯೋತಿ ಹೊತ್ತ ರಥಕ್ಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಚಾಲನೆ ನೀಡಲಾಯಿತು.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಮತ್ತು ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ಜಂಟಿಯಾಗಿ ತಂಗಿನಕಾಯಿ ಒಡೆದು ಕ್ರೀಡಾ ಜ್ಯೋತಿ ರಥಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಬಳಿಕ ದೇವಳದ ವಠಾರದಿಂದ ಹೊರಟ ರಥವು ಉಪ್ಪಿನಂಗಡಿ, ಆಲಂಕಾರು, ಕಡಬ, ಸವಣೂರು, ಕೆಯ್ಯೂರು, ಕುಂಬ್ರ ಸೇರಿದಂತೆ ವಿವಿಧ ಕಡೆಗಳಲ್ಲಿ ಸಂಚರಿಸಿತು.

ಶ್ರೀ ರಾಮಕೃಷ್ಣ ಪ್ರೌಢ ಶಾಲೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿ, ಡಿವೈಎಸ್ಪಿ ಅರುಣ್ ನಾಗೇಗೌಡ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ಬಯ್ಯ ನಾಯ್ಕ, ತಹಶೀಲ್ದಾರ್ ಶಿವಶಂಕರ್ ಜೆ., ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್., ರಾಜ್ಯ ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಎನ್.ಕೆ. ಜಗನ್ನಿವಾಸ ರಾವ್, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವೀಂದ್ರ ಶೆಟ್ಟಿ ನುಳಿಯಾಲು, ಉದ್ಯಮಿಗಳಾದ ನಳಿನಿ ಪಿ. ರೈ, ಪ್ರಸನ್ನ ಕುಮಾರ್ ಸಾಮೆತಡ್ಕ, ಚಿಕ್ಕಪ್ಪ ನಾಯ್ಕ್ ಅರಿಯಡ್ಕ ಅತಿಥಿಗಳಾಗಿ ಭಾಗವಹಿಸಿ ಕಾರ್ಯಕ್ರಮಕ್ಕೆ ಶುಭ ಕೋರಿದರು.


ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಭುವನೇಶ್ ಜೆ., ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಂದರ ಗೌಡ, ಜಿ.ಪಂ. ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷೆ ಅನಿತಾ ಹೇಮನಾಥ ಶೆಟ್ಟಿ, ಬಂಟರ ಸಂಘದ ತಾಲೂಕು ಸಮಿತಿ ಸಂಚಾಲಕ ದಯಾನಂದ ರೈ ಮನವಳಿಕೆ, ಶ್ರೀ ರಾಮಕೃಷ್ಣ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯಿನಿ ಜಯಲಕ್ಷಿö್ಮ ಎ. ಮತ್ತಿತರರು ಉಪಸ್ಥಿತರಿದ್ದರು.

ದ.ಕ. ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಸಹಯೋಗದಲ್ಲಿ ಪುತ್ತೂರಿನ ಶ್ರೀ ರಾಮಕೃಷ್ಣ ಪ್ರೌಢ ಶಾಲೆಯ ನೇತೃತ್ವದಲ್ಲಿ ಕೊಂಬೆಟ್ಟಿನಲ್ಲಿರುವ ತಾಲೂಕು ಕ್ರೀಡಾಂಗಣದಲ್ಲಿ ಡಿ.೨ರಿಂದ ೪ ರವರೆಗೆ `ಕ್ರೀಡಾ ಕಾರಂಜಿ’ ರಾಜ್ಯ ಮಟ್ಟದ ಕ್ರೀಡಾಕೂಟ ನಡೆಯಲಿದೆ. ಡಿ.೨ ರಂದು ಸಂಜೆ ಕ್ರೀಡಾ ಜ್ಯೋತಿ ರಥ ದರ್ಬೆಗೆ ಆಗಮಿಸಲಿದ್ದು, ಅಲ್ಲಿ ಅದ್ದೂರಿಯ ಸ್ವಾಗತ ನೀಡಲಾಗುವುದು.

ಉಪ್ಪಿನಂಗಡಿಯಲ್ಲಿ ಸ್ವಾಗತ
ಕ್ರೀಡಾ ಜ್ಯೋತಿಯನ್ನು ಉಪ್ಪಿನಂಗಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಸ್ವಾಗತಿಸಲಾಯಿತು. ಶಾಲಾ ವಿದ್ಯಾರ್ಥಿಗಳ ಬ್ಯಾಂಡ್ ಸೆಟ್ ಹಾಗೂ ಕ್ರೀಡಾ ಸಮಿತಿಯ ವತಿಯ ಬ್ಯಾಂಡ್ ಸೆಟ್‌ಗಳ ನಾದದೊಂದಿಗೆ ಉಪ್ಪಿನಂಗಡಿಯ ಪ್ರಮುಖ ಬೀದಿಗಳಲ್ಲಿ ಸಾಗಿ ಬಂದ ಕ್ರೀಡಾ ಜ್ಯೋತಿಯ ಮೆರವಣಿಗೆಯು ಬಳಿಕ ಉಪ್ಪಿನಂಗಡಿ ಸರಕಾರಿ ಮಾದರಿ ಶಾಲಾ ವಠಾರದಲ್ಲಿ ಸಂಪನ್ನಗೊ0ಡು, ಉಪ್ಪಿನಂಗಡಿ ವಲಯದಿಂದ ಸಂಗ್ರಹಿಸಲ್ಪಟ್ಟ ಹೊರೆಕಾಣಿಕೆಯೊಂದಿಗೆ ಮುಂದಿನ ಪ್ರಯಾಣ ಬೆಳೆಸಿತು.

ಈ ಸಂಧರ್ಭ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜರಾಮ್ ಕೆ.ಬಿ., ಗ್ರಾ.ಪಂ. ಉಪಾಧ್ಯಕ್ಷೆ ವಿದ್ಯಾಲಕ್ಷಿö್ಮÃ ಪ್ರಭು, ಸದಸ್ಯರಾದ ಸುರೇಶ ಅತ್ರಮಜಲು, ಯು.ಟಿ. ತೌಸಿಫ್, ಸಂಜೀವ, ಎಸ್.ಡಿ.ಎಂ.ಸಿ. ಅಧ್ಯಕ್ಷ ರವಿಚಂದ್ರ ಶಾಂತಿ ಪ್ರಮುಖರಾದ ಬಾಲಚಂದ್ರ ಗುಂಡ್ಯ, ಶ್ರೀಧರ ಭಟ್, ಫಾರೂಕ್, ಮಜೀದ್, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ ಸಿ.ಆರ್.ಪಿ. ಅಶ್ರಫ್, ಮಂಜುನಾಥ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!