ಜನ ಮನದ ನಾಡಿ ಮಿಡಿತ

Advertisement

ನರೇಗಾ ಸಾಮಾಜಿಕ ಪರಿಶೋಧನೆ ಅರಿವು ಆಂದೋಲನ

ಬಂಟ್ವಾಳ ತಾಲ್ಲೂಕಿನ ಮಂಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಕ್ಕಾಜೆ ಗ್ರಾಮದಲ್ಲಿ ಸಾಮಾಜಿಕ ಪರಿಶೋಧನೆ ತಂಡ ದಿಂದ ಗ್ರಾಮದ‌ ಕೂಲಿಕಾರ್ಮಿಕ ರಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಕೂಲಿ ಕೇಳುವ ಅಭಿಯಾನ ಮತ್ತು ಸಾಮಾಜಿಕ ಪರಿಶೋಧನೆ ಕುರಿತು ಅರಿವು ಆಂದೋಲನ ಕಾರ್ಯಕ್ರಮ ಕೈಗೊಳ್ಳಲಾಯಿತು.


ಈ ಸಂದರ್ಭದಲ್ಲಿ ಸೂರ್ಯಕಾಂತ್ ಎಕಲಾರ ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಸಾಮಾಜಿಕ ಪರಿಶೋಧನೆ ಬೆಳ್ತಂಗಡಿ ಇವರು ಯೋಜನೆ ಅಡಿಯಲ್ಲಿ ಕ್ರಿಯಾ ಯೋಜನೆ ತಯಾರಿಕೆ, ಯೋಜನೆ ಅಡಿಯಲ್ಲಿ ಕೂಲಿಕಾರ್ಮಿಕರ ನೊಂದಾವಣಿ ಪ್ರಕ್ರಿಯೆ, ಕೆಲಸಕ್ಕಾಗಿ ಬೇಡಿಕೆ ಸಲ್ಲಿಕೆ, ಕಾಮಗಾರಿ ಸ್ಥಳದಲ್ಲಿನ‌ ಸೌಲಭ್ಯಗಳ ಬಗ್ಗೆ, ನೊಂದಾಯಿತ ಕೂಲಿಕಾರ್ಮಿಕರ ಹಕ್ಕು ಮತ್ತು ಬಾಧ್ಯತೆಗಳ ಬಗ್ಗೆ ಮಾಹಿತಿ ನೀಡಿದರು. ನಂತರ ಸಾಮಾಜಿಕ ಪರಿಶೋಧನೆ ನಿರ್ದೇಶನಾಲಯ ಬೆಂಗಳೂರು ಮತ್ತು ಜಿಲ್ಲಾ ಪಂಚಾಯತ ದಕ್ಷಿಣ ಕನ್ನಡ ಇವರ ಆದೇಶ ದಂತೆ ನ. 24 ರಿಂದ ಡಿ. 02 ರವರೆಗೆ ಸಾಮಾಜಿಕ ಪರಿಶೋಧನೆ ನಡೆಯಲಿದ್ದು. 2023-24 ನೇ ಸಾಲಿನ (01/04/2022 ರಿಂದ 31/03/2023ರ ವರೆಗೆ ಕೈಗೊಂಡಿರುವ ಕಾಮಗಾರಿಗಳಿಗೆ ಸಂಬಂಧಿಸಿದಂತೆ 1ನೇ ಸಾಲಿನ ಸಾಮಾಜಿಕ ಪರಿಶೋಧನೆ ತಮ್ಮ ಗ್ರಾಮ ಪಂಚಾಯಿತಿಯಲ್ಲಿ ಕೈಗೊಳ್ಳಲಾಗುತ್ತಿದ್ದು ಸಾಮಾಜಿಕ ಪರಿಶೋಧನೆಯಲ್ಲಿ ಎಲ್ಲರೂ ಸಾಮೂಹಿಕವಾಗಿ ಸ್ವಯಂ ಪ್ರೇರಿತರಾಗಿ ಒಳಗೊಳ್ಳಬೇಕಾಗಿದೆ ಎಂದು ತಿಳಿಸಿದರು. ನಂತರ ಡಿ. 02 ರಂದು ಮಂಚಿ ಗ್ರಾಮ ಪಂಚಾಯತ್ ನಲ್ಲಿ ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ ಪಂಚಾಯಿತಿಯಿಂದ ಆಯೋಜಿಸಲಾಗಿದ್ದು ಎಲ್ಲರು ಭಾಗಿಯಾಗಲು ಕೋರಿದರು.

ಇದೆ ಸಂದರ್ಭದಲ್ಲಿ ಐ ಇ ಸಿ ತಾಲೂಕು ಕೋ ಆಡಿನೆಟರ್ ರಾಜೇಶ್ ಜನರಿಗೆ ನರೇಗಾ ಮತ್ತು 15 ಹಣಕಾಸು ಬಗ್ಗೆ ಮಾಹಿತಿ ಸಂವಹನ ಶಿಕ್ಷಣದ ಬಗ್ಗೆ ಮಾಹಿತಿ ನೀಡುತ್ತಾ ಫಲಾನುಭವಿಗಳು ಯಾವ ಯಾವ ಕಾಮಗಾರಿಗಳು ಮಾಡಿಕೊಳ್ಳಬಹುದೆಂದು ಮಾಹಿತಿ ನೀಡಿದರು. ಇನ್ನು ಇದೇ ಸಂದರ್ಭದಲ್ಲಿ ಗ್ರಾಮ ಸಂಪನ್ಮೂಲ ವ್ಯಕ್ತಿಗಳಾದ ರಾಜಶ್ರೀ. ಅಕ್ಷತಾ. ಪವಿತ್ರ. ಸ್ವಾತಿ. ಉಷಾ. ಪ್ರವೀಕ್ಷ. ಹಾಗೂ ಗ್ರಾಮ ಪಂಚಾಯಿತಿಯ ಅಧ್ಯಕ್ಷರು.ಜಿ. ಎಮ್. ಇಬ್ರಾಹಿಂ. ಪಂಚಾಯತ್ ಅಭಿವೃದ್ಧಿ ಅಧಿಕಾರಿನಿರ್ಮಲ. ಲೆಕ್ಕ ಸಹಾಯಕರು ನವೀನ್ ರಾಬರ್ಟ್. ಗ್ರಾಮ ಪಂಚಾಯತ್ ಸದಸ್ಯರು ಮತ್ತು ಸಿಬ್ಬಂದಿ ವರ್ಗದವರು, ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!