ಬಪ್ಪನಾಡು ಮುಚ್ಚೂರು ಲಯನ್ಸ್ ಕ್ಲಬ್ ಮುಚ್ಚುರು ನೀರುಡೆಯ ಆತಿಥ್ಯದಲ್ಲಿ ಜರಗಿದ ಪ್ರಾಂತ್ಯ 12,ವಲಯ 1 ರ ಲಯನ್ಸ್ ಕ್ಲಬ್ ಗಳಿಗೆ ಪ್ರಾಂತ್ಯ ಅಧ್ಯಕ್ಷರ ಅಧಿಕೃತ ಬೇಟಿ ಕಾರ್ಯಕ್ರಮ ಮುಚ್ಚುರಿನ ಮಿಥಿಲಸಭಾ ಭವನದಲ್ಲಿ ಜರುಗಿತು.
ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ ಫಯರ್ ಲಯನ್ಸ್ ಕ್ಲಬ್ ಮುಚ್ಚೂರು ನೀರುಡೆ, ಲಯನ್ಸ್ ಕ್ಲಬ್ ಗುರುಪುರ ಕೈಕಂಬ, ಲಯನ್ಸ್ ಕ್ಲಬ್ ಬೆಳುವಾಯಿಗಳಿಗೆ ಪ್ರಾಂತ್ಯ ಅಧ್ಯಕ್ಷರಾದ ಹೆರಾಲ್ಡ್ ತೌರೊ ರವರ ಅಧಿಕೃತ ಭೇಟಿ ಸಮಾರಂಭವು ಜರುಗಿತು. ಸಮಾರಂಭದ ಆಥಿತ್ಯವಹಿಸಿಕೊಂಡ ಮುಚ್ಚೂರು ಅಧ್ಯಕ್ಷರಾದ ರಾಯನ್ ರೋಶನ್ ಡಿಸೋಜಾ ಸ್ವಾಗತಿಸಿದರು. ಮೇಲ್ವಿನ್ ಸಲ್ದನ ರವರು ಪ್ರಾಂತ್ಯ ಅಧ್ಯಕ್ಷರ ಪರಿಚಯವನ್ನು ಸಭೆಯ ಮುಂದೆ ಇಟ್ಟರು ತರುವಾಯ ಮಾತನಾಡಿದ ಪ್ರಾಂತ್ಯ ಅಧ್ಯಕ್ಷರು ಗ್ರಾಮೀಣ ಪ್ರದೇಶದ ಕ್ಲಬ್ ಗಳು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಹಾಗೂ ಆರೋಗ್ಯ ಶಿಬಿರ , ನೇತ್ರ ತಪಾಸಣಾ ಶಿಬಿರ ,ಮುಂತಾದ ಕಾರ್ಯಕ್ರಮಗಳ ಮೂಲಕ ಗ್ರಾಮೀಣ ಪ್ರದೇಶದ ಅದರಲ್ಲೂ ಆರ್ಥಿಕವಾಗಿ ಹಿಂದುಳಿದ ಜನರ ಕಷ್ಟಕ್ಕೆ ಸ್ಪಂದಿಸಿ ಪರಿಸರದಲ್ಲಿ ಮನೆಮಾತಾಗಿದೆ ಈ ಮೂಲಕ ಅಂತಾರಾಷ್ಟ್ರೀಯ ಸಂಸ್ಥೆಯ ಹೆಸರು ಉತ್ತುಂಗಕ್ಕೇರಿದೆ ಎಂದರು. ಬಳಿಕ ಬಪ್ಪನಾಡಿನ ಸೇವಾ ಕಾರ್ಯಕ್ರಮ ಅಂಗವಾಗಿ ಓರ್ವ ವಿದ್ಯಾರ್ಥಿನಿಗೆ ಲ್ಯಾಪ್ಟಾಪ್ ಹಾಗೂ ಮೂರು ಜನ ವಿದ್ಯಾರ್ಥಿಗಳಿಗೆ ಶಾಲಾ ಶುಲ್ಕವನ್ನು ಪಾವತಿಸಲು ಸಹಯಧನ ನೀಡಲಾಯಿತು , ವಲಯ ಅಧ್ಯಕ್ಷೆ ಪ್ರತಿಭಾ ಹೆಬ್ಬಾರ್ ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಪೈರ್ ಸ್ಥಾಪಕ ಅಧ್ಯಕ್ಷರಾದ ವೆಂಕಟೇಶ ಹೆಬ್ಬಾರ್ ಅಧ್ಯಕ್ಷ ಸುಧೀರ್ ಬಾಳಿಗ ರಾಯನ್ ರೋಶನ್ ಡಿಸೋಜ, ಸುನಿಲ್ ಲಾಯ್ಡ್ ಡಿ ಮೇಲ್ಲೊ ಮೊದಲಾದವರು ಉಪಸ್ಥಿತರಿದ್ದರು
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…