ಮತ್ತೆ ಬೆಂಗಳೂರು ರಾಯಲ್ ಚಾಲೆಂಜರ್ಸ್ ಬಣ್ಣ (ಜರ್ಸಿ)ದಲ್ಲಿ ನನ್ನನ್ನು ನಾನು ನೋಡಲು ಇಷ್ಟಪಡುತ್ತೇನೆ ಎಂದು ದಕ್ಷಿಣ ಆಫ್ರಿಕಾದ ದಂತಕತೆ, ಆರ್ಸಿಬಿ ತಂಡದ ಮಾಜಿ ಸ್ಟಾರ್ ಎಬಿ ಡಿವಿಲಿಯರ್ಸ್ ಆಸೆ ಪಟ್ಟಿದ್ದಾರೆ.
ಮಾಧ್ಯಮವೊಂದು ನಡೆಸಿ ವಿಶೇಷ ಸಂದರ್ಶನದಲ್ಲಿ ಮಾತನಾಡಿರುವ ಎಬಿಡಿ.. ನನ್ನ ಹೃದಯ RCB ಜೊತೆಗಿದೆ. ನಾನು ಆರ್ಸಿಬಿ ಫ್ರಾಂಚೈಸಿ ಜೊತೆ ಹಲವು ವರ್ಷಗಳಿಂದ ಆಡಿದ್ದೇನೆ. ಬೆಂಗಳೂರಿನ ಅಭಿಮಾನಿಗಳೊಂದಿಗೆ ಉತ್ತಮ ಸಂಪರ್ಕ ಹೊಂದಿದ್ದೇನೆ. ನಾನು ಅವರಿಗೆ ಯಾವಾಗಲೂ ಕೃತಜ್ಞನಾಗಿರುತ್ತೇನೆ ಎಂದಿದ್ದಾರೆ.
ನನಗೆ ಆರ್ಸಿಬಿ ಮತ್ತು ಆ ತಂಡದ ಅಭಿಮಾನಿಗಳಿಂದ ಅಪಾರ ಬೆಂಬಲ ಸಿಕ್ಕಿದೆ. ಮತ್ತೆ ನಾನು ಆರ್ಸಿಬಿ ಸೇರಿಕೊಳ್ಳುವ ಬಗ್ಗೆ ಈಗ ಯಾವುದನ್ನೂ ಖಾತರಿ ಪಡಿಸಲು ಸಾಧ್ಯವಿಲ್ಲ. ಭವಿಷ್ಯದಲ್ಲಿ ಮತ್ತೆ RCB ಜರ್ಸಿಯಲ್ಲಿ ನನ್ನನ್ನು ನೋಡಲು ನಾನು ಸಂಪೂರ್ಣವಾಗಿ ಇಷ್ಟಪಡುತ್ತೇನೆ ಎಂದಿದ್ದಾರೆ. ಎಬಿಡಿ ಈ ಹೇಳಿಕೆ ಬೆನ್ನಲ್ಲೇ ಆರ್ಸಿಬಿ ಅಭಿಮಾನಿಗಳ ನಿರೀಕ್ಷೆ ಮತ್ತಷ್ಟು ದುಪ್ಪಟ್ಟಾಗಿದೆ. ಎಬಿಡಿ ಆರ್ಸಿಬಿ ತಂಡದ ಕೋಚ್ ಆಗಿ ಮತ್ತೆ ಮರಳಲಿ ಅನ್ನೋದು ಒತ್ತಾಯ ಆಗಿದೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…