ಕ್ರೀಡೆ

ಆರ್​ಸಿಬಿಗೆ ಮತ್ತೆ ಮರಳುವ ಬಗ್ಗೆ ಮುನ್ಸೂಚನೆ ನೀಡಿದ ಎಬಿ ಡಿವಿಲಿಯರ್ಸ್, ಆದರೆ..!??

ಮತ್ತೆ ಬೆಂಗಳೂರು ರಾಯಲ್ ಚಾಲೆಂಜರ್ಸ್​ ಬಣ್ಣ (ಜರ್ಸಿ)ದಲ್ಲಿ ನನ್ನನ್ನು ನಾನು ನೋಡಲು ಇಷ್ಟಪಡುತ್ತೇನೆ ಎಂದು ದಕ್ಷಿಣ ಆಫ್ರಿಕಾದ ದಂತಕತೆ, ಆರ್​ಸಿಬಿ ತಂಡದ ಮಾಜಿ ಸ್ಟಾರ್ ಎಬಿ ಡಿವಿಲಿಯರ್ಸ್ ಆಸೆ ಪಟ್ಟಿದ್ದಾರೆ. ​

ಮಾಧ್ಯಮವೊಂದು ನಡೆಸಿ ವಿಶೇಷ ಸಂದರ್ಶನದಲ್ಲಿ ಮಾತನಾಡಿರುವ ಎಬಿಡಿ.. ನನ್ನ ಹೃದಯ RCB ಜೊತೆಗಿದೆ. ನಾನು ಆರ್​ಸಿಬಿ ಫ್ರಾಂಚೈಸಿ ಜೊತೆ ಹಲವು ವರ್ಷಗಳಿಂದ ಆಡಿದ್ದೇನೆ. ಬೆಂಗಳೂರಿನ ಅಭಿಮಾನಿಗಳೊಂದಿಗೆ ಉತ್ತಮ ಸಂಪರ್ಕ ಹೊಂದಿದ್ದೇನೆ. ನಾನು ಅವರಿಗೆ ಯಾವಾಗಲೂ ಕೃತಜ್ಞನಾಗಿರುತ್ತೇನೆ ಎಂದಿದ್ದಾರೆ.

ನನಗೆ ಆರ್​ಸಿಬಿ ಮತ್ತು ಆ ತಂಡದ ಅಭಿಮಾನಿಗಳಿಂದ ಅಪಾರ ಬೆಂಬಲ ಸಿಕ್ಕಿದೆ. ಮತ್ತೆ ನಾನು ಆರ್​ಸಿಬಿ ಸೇರಿಕೊಳ್ಳುವ ಬಗ್ಗೆ ಈಗ ಯಾವುದನ್ನೂ ಖಾತರಿ ಪಡಿಸಲು ಸಾಧ್ಯವಿಲ್ಲ. ಭವಿಷ್ಯದಲ್ಲಿ ಮತ್ತೆ RCB ಜರ್ಸಿಯಲ್ಲಿ ನನ್ನನ್ನು ನೋಡಲು ನಾನು ಸಂಪೂರ್ಣವಾಗಿ ಇಷ್ಟಪಡುತ್ತೇನೆ ಎಂದಿದ್ದಾರೆ. ಎಬಿಡಿ ಈ ಹೇಳಿಕೆ ಬೆನ್ನಲ್ಲೇ ಆರ್​ಸಿಬಿ ಅಭಿಮಾನಿಗಳ ನಿರೀಕ್ಷೆ ಮತ್ತಷ್ಟು ದುಪ್ಪಟ್ಟಾಗಿದೆ. ಎಬಿಡಿ ಆರ್​ಸಿಬಿ ತಂಡದ ಕೋಚ್​ ಆಗಿ ಮತ್ತೆ ಮರಳಲಿ ಅನ್ನೋದು ಒತ್ತಾಯ ಆಗಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…

2 hours ago

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…

2 hours ago

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…

2 hours ago

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…

2 hours ago

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…

2 days ago

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…

2 days ago