ಮಂಗಳೂರು: ರಾಜ್ಯದಲ್ಲಿ ನಡೆದಿರುವ ಭ್ರೂಣ ಹತ್ಯೆ ಪ್ರಕರಣವು ಗಂಭೀರ ಸ್ವರೂಪದ್ದಾಗಿದ್ದು, ಸಿಐಡಿ ಮೂಲಕ ತನಿಖೆ ನಡೆಯುತ್ತಿದೆ.

ಇಂತಹ ಪ್ರಕರಣ ಮತ್ತೆ ಎದುರಾಗದಂತೆ ಮಾಡಲು ಕಾನೂನಿನಲ್ಲಿ ತಿದ್ದುಪಡಿ ಮಾಡುವ ಬಗ್ಗೆ ಚಿಂತನೆ ಮಾಡಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಮಂಗಳೂರಿನಲ್ಲಿ ಶನಿವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹೆಣ್ಣು ಶಿಶುಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಹೆಣ್ಣು- ಗಂಡು ಲಿಂಗಾನುಪಾತದಲ್ಲಿ ಏರುಪೇರು ಆಗುತ್ತಿದೆ. ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು. ಹೆಣ್ಣು ಮಗು ಬೇಡ ಎನ್ನುವವರೂ ಸಮಾಜದಲ್ಲಿದ್ದಾರೆ ಎಂಬುದನ್ನು ಕೇಳುವಾಗ ನೋವಾಗುತ್ತಿದೆ. ಇದನ್ನು ನಿಲ್ಲಿಸಲು ಮತ್ತು ತಪ್ಪಿತಸ್ಥರಿಗೆ ಕಠಿನ ಶಿಕ್ಷೆಯಾಗಲೇ ಬೇಕು ಎಂದರು.



