ಜನ ಮನದ ನಾಡಿ ಮಿಡಿತ

Advertisement

ಮಕ್ಕಳ ಕಲಾ ಲೋಕದಿಂದ ಸಾಮಾಜಿಕ ಸ್ವಚ್ಛತಾ ಅಭಿಯಾನ ಆರಂಭ


ಬಂಟ್ವಾಳ ಡಿ 3, ಬಂಟ್ವಾಳ ತಾಲೂಕು ಮಕ್ಕಳ ಕಲಾ ಲೋಕದ ವತಿಯಿಂದ ವಿಶ್ವಶಾಂತಿಗಾಗಿ ಸಾಮಾಜಿಕ ಸ್ವಚ್ಛತಾ ಅಭಿಯಾನ ಎಂಬ ವಿನೂತನ ಕಾರ್ಯಕ್ರಮ ಬಿ.ಸಿ. ರೋಡಿನ ಕನ್ನಡ ಭವನದಲ್ಲಿ ಯುವ ಸಾಹಿತಿ ಮಂಗಳೂರು ಯುನಿವರ್ಸಿಟಿ ಕಾಲೇಜಿನ ಪ್ರಥಮ ಎಂ ಎ ವಿದ್ಯಾರ್ಥಿ ಶಿವ ಪ್ರಸಾದ್ ಬೋಳಂತೂರು ಶಾಂತಿಯ ಸಂಕೇತವಾದ ಪಾರಿವಾಳಗಳನ್ನು ಹಾರಿ ಬಿಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಪರಿಸರ ಸ್ವಚ್ಛತೆಯಂತೆ ಸಾಮಾಜಿಕ ಸ್ವಚ್ಛತೆಯನ್ನೂ ಮಾಡಲೇ ಬೇಕಾದ ಕಾಲಘಟ್ಟವಿದು. ಪರಸ್ಪರ ಹೊಂದಾಣಿಕೆ, ಸ್ನೇಹ, ಸಹಜೀವನ, ಸಹಕಾರ, ಪ್ರೀತಿ, ಸಮಯ ಪಾಲನೆ ಮುಂತಾದ ಬದುಕಿನ ಅನಿವಾರ್ಯ ಅಂಶಗಳ ಕೊರತೆಯನ್ನು ನೀಗಿ, ಸದ್ಭಾವ ಪೂರ್ಣ, ಶಾಂತ ಮನಸ್ಕ ಸಮಾಜ ನಿರ್ಮಾಣದಲ್ಲಿ ಸಾಮಾಜಿಕ ಸ್ವಚ್ಛತಾ ಅಭಿಯಾನ ಬೆಂಬಲವಾಗಿ ಕೂಡಿ ಬರಲಿ ಎಂದರು.


ಈ ಸಂದರ್ಭದಲ್ಲಿ ಸಾಹಿತಿ ಭಾಸ್ಕರ ಅಡ್ವಳ ವಿರಚಿತ ಘಮ ಘಮಿಸುವ ಗುಟ್ಟು ಎಂಬ ಜೀವನ ಮೌಲ್ಯಗಳ ಚಿಂತನಾ ಕೃತಿಯನ್ನು ಓಜಾಲ ಸ.ಹಿ.ಪ್ರಾ ಶಾಲಾ 7ನೇ ತರಗತಿ ವಿದ್ಯಾರ್ಥಿನಿ, ಎಳೆಯ ಸಾಹಿತಿ ಕುಮಾರಿ ಶ್ರುತಿಕಾ ಬಾಕಿಮಾರು ಅನಾವರಣಗೊಳಿಸಿದರು. ಈ ಕೃತಿಯು ಸಾಮಾಜಿಕ ಸ್ವಚ್ಛತಾ ಅಭಿಯಾನ ಕಾರ್ಯಕ್ರಮಕ್ಕೆ ಪೂರಕ ಉಪಕರಣದಂತಿದೆ ಎಂದು ಕು.ಶ್ರುತಿಕಾ ಹೇಳಿದರು.


ಕಾರ್ಯಕ್ರಮಗಳ ಅಧ್ಯಕ್ಷತೆ ವಹಿಸಿದ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಶ್ರೀನಾಥ ಉಜಿರೆಯವರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, “ಮಕ್ಕಳೆಡೆಗೆ ಸಾಹಿತ್ಯ” ಅಭಿಯಾನವನ್ನು ಆಯೋಜಿಸಿದೆ. ಸಮಾಜದ ಸ್ವಚ್ಛತೆ ಮತ್ತು ವಿಶ್ವ ಶಾಂತಿಯ ಸ್ಥಾಪನೆಗೆ ಪೂರಕವಾದ ಹೊಸ ಹೊಸ ಕೃತಿಗಳು ಪ್ರಕಟಗೊಳ್ಳಬೇಕು. ಮಕ್ಕಳ ಕಲಾ ಲೋಕ ಪ್ರಕಾಶಿತ ಕೃತಿ ಘಮ ಘಮಿಸುವ ಗುಟ್ಟು. ಕಿರಿಯರು, ಯುವಕರು ಮತ್ತು ಹಿರಿಯರು ಒಟ್ಟುಗೂಡಿ ಮಾಡುವ ಆದರ್ಶ ಚಿಂತನೆಗಳು ಸಮಷ್ಠಿಯ ಹಿತಕ್ಕೆ ಅನುಕೂಲವಾಗುತ್ತವೆ. ಬಂಟ್ವಾಳ ತಾಲೂಕಿನ ವ್ಯಾಪ್ತಿಯಲ್ಲಿರುವ ಮಕ್ಕಳ ಕಲಾ ಲೋಕದ ಚಟುವಟಿಕೆಗಳು ಜಿಲ್ಲಾ ಹಂತಕ್ಕೆ ವಿಸ್ತರಣೆಯಾಗಬೇಕು. ಪರಿಷತ್ತು ಮಕ್ಕಳ ಕಲಾ ಲೋಕದ ಎಲ್ಲ ಚಟುವಟಿಕೆಗಳನ್ನು ಬೆಂಬಲಿಸುತ್ತದೆ ಎಂದರು.


ಮುಖ್ಯ ಅತಿಥಿಯಾಗಿ ಭಾಗವಹಿಸಿದ ಹಿರಿಯ ಸಾಹಿತಿ ವಿ.ಬಿ. ಕುಳಮರ್ವ ಕುಂಬಳೆಯವರು ಸಮಯ ಕ್ಲಪ್ತತೆಗೆ ಹೆಸರಾದ ಮಕ್ಕಳ ಕಲಾಲೋಕ ಸಾಮಾಜಿಕ ಸ್ವಚ್ಛತೆಯ ಮೂಲಕ ವಿಶ್ವಶಾಂತಿಯ ಕನಸನ್ನು ಕಾಣಿತ್ತಿದೆ. ಅದರ ಕನಸು ನನಸಾಗಲು ಪ್ರತಿಯೊಬ್ಬರೂ ಹೆಗಲಾಗಬೇಕು. ಮಕ್ಕಳು ಬೆಳಗಿದರೆ ಸಮಾಜ ಬೆಳಗುತ್ತದೆ ಎಂಬ ಕಲಾಲೋಕದ ನಡೆ ಅಭಿನಂದನೀಯ ಎಂದರು.
ಸಾಹಿತಿ ಭಾಸ್ಕರ ಅಡ್ವಳರು ವಿಶ್ವಶಾಂತಿಗಾಗಿ ಸಾಮಾಜಿಕ ಸ್ವಚ್ಚತೆ ಅಭಿಯಾನದ ಯಶಸ್ಸಿಗೆ ಎಲ್ಲರ ಸಹಕಾರ ಕೋರಿದರು. ಬಂಟ್ವಾಳ ತಾಲೂಕು ಕ.ಸಾ.ಪ. ಅಧ್ಯಕ್ಷರಾದ ವಿಶ್ವನಾಥ ಬಂಟ್ವಾಳ ಉಪಸ್ಥಿತರಿದ್ದರು.
ಕಲ್ಲಂಗಳ ಕೇಪು ಪ್ರೌಢ ಶಾಲಾ ವಿದ್ಯಾರ್ಥಿನಿಯರಾದ ಅಕ್ಷಿತಾ ಮುಳಿಯ, ಹರ್ಷಿತಾ ಮಣಿಯಾರ ಪಾದೆ ಮತ್ತು ಪೃಥ್ವಿ ಉಬರು ಸ್ಫರ್ತಿ ಗೀತೆ ಹಾಡಿ, ಪುತ್ತೂರು ವಿವೇಕಾನಂದ ಕಾಲೇಜು ವಿದ್ಯಾರ್ಥಿನಿ ಸಹನಾ ಕೋಲ್ಪೆ ಸ್ವಾಗತಿಸಿದರು. ಮಕ್ಕಳ ಕಲಾ ಲೋಕದ ಅಧ್ಯಕ್ಷರಾದ ರಮೇಶ ಎಂ.ಬಾಯಾರು ಪ್ರಾಸ್ತಾವಿಸಿ, ಕಲ್ಲಡ್ಕ ಸರಕಾರಿ ಮಾ.ಹಿ.ಪ್ರಾ ಶಾಲಾ ವಿದ್ಯಾರ್ಥಿನಿ ಸ್ಫೂರ್ತಿ ವಂದಿಸಿದರು. ಸುರಿಬೈಲು ದಾರುಲ್ ಅಶ್ ಅರಿಯ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ಮುಹಮ್ಮದ್ ಸಾಬಿತ್ ಕಾರ್ಯಕ್ರಮನಿರೂಪಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!