ಕರಾವಳಿ

ಮಕ್ಕಳ ಕಲಾ ಲೋಕದಿಂದ ಸಾಮಾಜಿಕ ಸ್ವಚ್ಛತಾ ಅಭಿಯಾನ ಆರಂಭ


ಬಂಟ್ವಾಳ ಡಿ 3, ಬಂಟ್ವಾಳ ತಾಲೂಕು ಮಕ್ಕಳ ಕಲಾ ಲೋಕದ ವತಿಯಿಂದ ವಿಶ್ವಶಾಂತಿಗಾಗಿ ಸಾಮಾಜಿಕ ಸ್ವಚ್ಛತಾ ಅಭಿಯಾನ ಎಂಬ ವಿನೂತನ ಕಾರ್ಯಕ್ರಮ ಬಿ.ಸಿ. ರೋಡಿನ ಕನ್ನಡ ಭವನದಲ್ಲಿ ಯುವ ಸಾಹಿತಿ ಮಂಗಳೂರು ಯುನಿವರ್ಸಿಟಿ ಕಾಲೇಜಿನ ಪ್ರಥಮ ಎಂ ಎ ವಿದ್ಯಾರ್ಥಿ ಶಿವ ಪ್ರಸಾದ್ ಬೋಳಂತೂರು ಶಾಂತಿಯ ಸಂಕೇತವಾದ ಪಾರಿವಾಳಗಳನ್ನು ಹಾರಿ ಬಿಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಪರಿಸರ ಸ್ವಚ್ಛತೆಯಂತೆ ಸಾಮಾಜಿಕ ಸ್ವಚ್ಛತೆಯನ್ನೂ ಮಾಡಲೇ ಬೇಕಾದ ಕಾಲಘಟ್ಟವಿದು. ಪರಸ್ಪರ ಹೊಂದಾಣಿಕೆ, ಸ್ನೇಹ, ಸಹಜೀವನ, ಸಹಕಾರ, ಪ್ರೀತಿ, ಸಮಯ ಪಾಲನೆ ಮುಂತಾದ ಬದುಕಿನ ಅನಿವಾರ್ಯ ಅಂಶಗಳ ಕೊರತೆಯನ್ನು ನೀಗಿ, ಸದ್ಭಾವ ಪೂರ್ಣ, ಶಾಂತ ಮನಸ್ಕ ಸಮಾಜ ನಿರ್ಮಾಣದಲ್ಲಿ ಸಾಮಾಜಿಕ ಸ್ವಚ್ಛತಾ ಅಭಿಯಾನ ಬೆಂಬಲವಾಗಿ ಕೂಡಿ ಬರಲಿ ಎಂದರು.


ಈ ಸಂದರ್ಭದಲ್ಲಿ ಸಾಹಿತಿ ಭಾಸ್ಕರ ಅಡ್ವಳ ವಿರಚಿತ ಘಮ ಘಮಿಸುವ ಗುಟ್ಟು ಎಂಬ ಜೀವನ ಮೌಲ್ಯಗಳ ಚಿಂತನಾ ಕೃತಿಯನ್ನು ಓಜಾಲ ಸ.ಹಿ.ಪ್ರಾ ಶಾಲಾ 7ನೇ ತರಗತಿ ವಿದ್ಯಾರ್ಥಿನಿ, ಎಳೆಯ ಸಾಹಿತಿ ಕುಮಾರಿ ಶ್ರುತಿಕಾ ಬಾಕಿಮಾರು ಅನಾವರಣಗೊಳಿಸಿದರು. ಈ ಕೃತಿಯು ಸಾಮಾಜಿಕ ಸ್ವಚ್ಛತಾ ಅಭಿಯಾನ ಕಾರ್ಯಕ್ರಮಕ್ಕೆ ಪೂರಕ ಉಪಕರಣದಂತಿದೆ ಎಂದು ಕು.ಶ್ರುತಿಕಾ ಹೇಳಿದರು.


ಕಾರ್ಯಕ್ರಮಗಳ ಅಧ್ಯಕ್ಷತೆ ವಹಿಸಿದ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಶ್ರೀನಾಥ ಉಜಿರೆಯವರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, “ಮಕ್ಕಳೆಡೆಗೆ ಸಾಹಿತ್ಯ” ಅಭಿಯಾನವನ್ನು ಆಯೋಜಿಸಿದೆ. ಸಮಾಜದ ಸ್ವಚ್ಛತೆ ಮತ್ತು ವಿಶ್ವ ಶಾಂತಿಯ ಸ್ಥಾಪನೆಗೆ ಪೂರಕವಾದ ಹೊಸ ಹೊಸ ಕೃತಿಗಳು ಪ್ರಕಟಗೊಳ್ಳಬೇಕು. ಮಕ್ಕಳ ಕಲಾ ಲೋಕ ಪ್ರಕಾಶಿತ ಕೃತಿ ಘಮ ಘಮಿಸುವ ಗುಟ್ಟು. ಕಿರಿಯರು, ಯುವಕರು ಮತ್ತು ಹಿರಿಯರು ಒಟ್ಟುಗೂಡಿ ಮಾಡುವ ಆದರ್ಶ ಚಿಂತನೆಗಳು ಸಮಷ್ಠಿಯ ಹಿತಕ್ಕೆ ಅನುಕೂಲವಾಗುತ್ತವೆ. ಬಂಟ್ವಾಳ ತಾಲೂಕಿನ ವ್ಯಾಪ್ತಿಯಲ್ಲಿರುವ ಮಕ್ಕಳ ಕಲಾ ಲೋಕದ ಚಟುವಟಿಕೆಗಳು ಜಿಲ್ಲಾ ಹಂತಕ್ಕೆ ವಿಸ್ತರಣೆಯಾಗಬೇಕು. ಪರಿಷತ್ತು ಮಕ್ಕಳ ಕಲಾ ಲೋಕದ ಎಲ್ಲ ಚಟುವಟಿಕೆಗಳನ್ನು ಬೆಂಬಲಿಸುತ್ತದೆ ಎಂದರು.


ಮುಖ್ಯ ಅತಿಥಿಯಾಗಿ ಭಾಗವಹಿಸಿದ ಹಿರಿಯ ಸಾಹಿತಿ ವಿ.ಬಿ. ಕುಳಮರ್ವ ಕುಂಬಳೆಯವರು ಸಮಯ ಕ್ಲಪ್ತತೆಗೆ ಹೆಸರಾದ ಮಕ್ಕಳ ಕಲಾಲೋಕ ಸಾಮಾಜಿಕ ಸ್ವಚ್ಛತೆಯ ಮೂಲಕ ವಿಶ್ವಶಾಂತಿಯ ಕನಸನ್ನು ಕಾಣಿತ್ತಿದೆ. ಅದರ ಕನಸು ನನಸಾಗಲು ಪ್ರತಿಯೊಬ್ಬರೂ ಹೆಗಲಾಗಬೇಕು. ಮಕ್ಕಳು ಬೆಳಗಿದರೆ ಸಮಾಜ ಬೆಳಗುತ್ತದೆ ಎಂಬ ಕಲಾಲೋಕದ ನಡೆ ಅಭಿನಂದನೀಯ ಎಂದರು.
ಸಾಹಿತಿ ಭಾಸ್ಕರ ಅಡ್ವಳರು ವಿಶ್ವಶಾಂತಿಗಾಗಿ ಸಾಮಾಜಿಕ ಸ್ವಚ್ಚತೆ ಅಭಿಯಾನದ ಯಶಸ್ಸಿಗೆ ಎಲ್ಲರ ಸಹಕಾರ ಕೋರಿದರು. ಬಂಟ್ವಾಳ ತಾಲೂಕು ಕ.ಸಾ.ಪ. ಅಧ್ಯಕ್ಷರಾದ ವಿಶ್ವನಾಥ ಬಂಟ್ವಾಳ ಉಪಸ್ಥಿತರಿದ್ದರು.
ಕಲ್ಲಂಗಳ ಕೇಪು ಪ್ರೌಢ ಶಾಲಾ ವಿದ್ಯಾರ್ಥಿನಿಯರಾದ ಅಕ್ಷಿತಾ ಮುಳಿಯ, ಹರ್ಷಿತಾ ಮಣಿಯಾರ ಪಾದೆ ಮತ್ತು ಪೃಥ್ವಿ ಉಬರು ಸ್ಫರ್ತಿ ಗೀತೆ ಹಾಡಿ, ಪುತ್ತೂರು ವಿವೇಕಾನಂದ ಕಾಲೇಜು ವಿದ್ಯಾರ್ಥಿನಿ ಸಹನಾ ಕೋಲ್ಪೆ ಸ್ವಾಗತಿಸಿದರು. ಮಕ್ಕಳ ಕಲಾ ಲೋಕದ ಅಧ್ಯಕ್ಷರಾದ ರಮೇಶ ಎಂ.ಬಾಯಾರು ಪ್ರಾಸ್ತಾವಿಸಿ, ಕಲ್ಲಡ್ಕ ಸರಕಾರಿ ಮಾ.ಹಿ.ಪ್ರಾ ಶಾಲಾ ವಿದ್ಯಾರ್ಥಿನಿ ಸ್ಫೂರ್ತಿ ವಂದಿಸಿದರು. ಸುರಿಬೈಲು ದಾರುಲ್ ಅಶ್ ಅರಿಯ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ಮುಹಮ್ಮದ್ ಸಾಬಿತ್ ಕಾರ್ಯಕ್ರಮನಿರೂಪಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಇರಾನ್‌ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…

9 hours ago

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಥೈಲ್ಯಾಂಡ್‌ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…

10 hours ago

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…

11 hours ago

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…

11 hours ago

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಬಿ.ಸಿ.ರೋಡ್‌ನ ಎನ್.ಜಿ. ಸರ್ಕಲ್‌ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…

11 hours ago

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…

1 day ago