ಜನ ಮನದ ನಾಡಿ ಮಿಡಿತ

Advertisement

4 ತಿಂಗಳ ಹಸುಗೂಸನ್ನು ಕೊಂದು ತಾನು ಆತ್ಯಹತ್ಯೆಗೆ ಶರಣಾದ ಹೆತ್ತಮ್ಮ..!!

ಮಾನಸಿಕ ಖಿನ್ನತೆಗೊಳಗಾದ ಬಾಣಂತಿ ಗೃಹಿಣಿಯೊಬ್ಬರು ತನ್ನ 4 ತಿಂಗಳ ಶಿಶುವನ್ನು ಟಬ್ ನೀರಿನಲ್ಲಿ ಮುಳುಗಿಸಿ ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಗರದ ಗುಜ್ಜರಕೆರೆ ಬಳಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ನಡೆದಿದೆ.


ಗುಜ್ಜರಕೆರೆ ಸಮೀಪದ ಅಪಾರ್ಟ್ ಮೆಂಟ್ ನ ನಿವಾಸಿಯಾದ ಫಾತಿಮಾ(23) ಎಂಬ ಬಾಣಂತಿ ಯುವತಿ ಶಿಶುವನ್ನು ಕೊಂದು ಸಾವಿಗೆ ಶರಣಾದವರು ಎಂದು ತಿಳಿದು ಬಂದಿದೆ. ಫಾತಿಮಾ ಅವರು ಎರಡು ವರ್ಷಗಳ ಹಿಂದೆ ಹುಸೈನ್ ಎಂಬವರನ್ನು ವಿವಾಹವಾಗಿದ್ದರು. ಈ ದಂಪತಿಗೆ 4 ತಿಂಗಳ ಗಂಡು ಮಗು ಇದೆ.

ಫಾತಿಮಾ ಅವರು ಹೆರಿಗೆ ಬಳಿಕ ಮಾನಸಿಕ ಖಿನ್ನತೆಗೊಳಗಾದರು. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಆಗಾಗ ಹೇಳುತ್ತಿದ್ದರು. ಅವರಿಗೆ ವೈದ್ಯರಲ್ಲಿ ಚಿಕಿತ್ಸೆ ಕೂಡ ನಡೆಯುತ್ತಿತ್ತು. ಆದರೆ ನಿನ್ನೆ ದಿನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಫಾತಿಮಾ ತನ್ನ 4 ತಿಂಗಳ ಮಗುವನ್ನು ನೀರಿನಲ್ಲಿ ಮುಳುಗಿಸಿ ಸಾಯಿಸಿ, ನಂತರ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ ಆಯೋಜನೆ..!

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

error: Content is protected !!