ಜನ ಮನದ ನಾಡಿ ಮಿಡಿತ

Advertisement

4 ತಿಂಗಳ ಹಸುಗೂಸನ್ನು ಕೊಂದು ತಾನು ಆತ್ಯಹತ್ಯೆಗೆ ಶರಣಾದ ಹೆತ್ತಮ್ಮ..!!

ಮಾನಸಿಕ ಖಿನ್ನತೆಗೊಳಗಾದ ಬಾಣಂತಿ ಗೃಹಿಣಿಯೊಬ್ಬರು ತನ್ನ 4 ತಿಂಗಳ ಶಿಶುವನ್ನು ಟಬ್ ನೀರಿನಲ್ಲಿ ಮುಳುಗಿಸಿ ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಗರದ ಗುಜ್ಜರಕೆರೆ ಬಳಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ನಡೆದಿದೆ.


ಗುಜ್ಜರಕೆರೆ ಸಮೀಪದ ಅಪಾರ್ಟ್ ಮೆಂಟ್ ನ ನಿವಾಸಿಯಾದ ಫಾತಿಮಾ(23) ಎಂಬ ಬಾಣಂತಿ ಯುವತಿ ಶಿಶುವನ್ನು ಕೊಂದು ಸಾವಿಗೆ ಶರಣಾದವರು ಎಂದು ತಿಳಿದು ಬಂದಿದೆ. ಫಾತಿಮಾ ಅವರು ಎರಡು ವರ್ಷಗಳ ಹಿಂದೆ ಹುಸೈನ್ ಎಂಬವರನ್ನು ವಿವಾಹವಾಗಿದ್ದರು. ಈ ದಂಪತಿಗೆ 4 ತಿಂಗಳ ಗಂಡು ಮಗು ಇದೆ.

ಫಾತಿಮಾ ಅವರು ಹೆರಿಗೆ ಬಳಿಕ ಮಾನಸಿಕ ಖಿನ್ನತೆಗೊಳಗಾದರು. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಆಗಾಗ ಹೇಳುತ್ತಿದ್ದರು. ಅವರಿಗೆ ವೈದ್ಯರಲ್ಲಿ ಚಿಕಿತ್ಸೆ ಕೂಡ ನಡೆಯುತ್ತಿತ್ತು. ಆದರೆ ನಿನ್ನೆ ದಿನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಫಾತಿಮಾ ತನ್ನ 4 ತಿಂಗಳ ಮಗುವನ್ನು ನೀರಿನಲ್ಲಿ ಮುಳುಗಿಸಿ ಸಾಯಿಸಿ, ನಂತರ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣ: ಆರೋಪಿ 4 ದಿನ ಪೊಲೀಸ್ ಕಸ್ಟಡಿಗೆ…!

ಮಂಗಳೂರು: ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ದಿಢೀರ್ ಕಾರ್ಯಾಚರಣೆ…..!

ಟ್ರಿನಿಡಾಡ್: ಪಾಕ್‌ಗೆ 90 ರನ್‌ಗಳ ಸೋಲು; ವಿಂಡೀಸ್‌ಗೆ ಮೊದಲ ಟೆಸ್ಟ್ ಜಯ..!

ವಾಷಿಂಗ್ಟನ್: ಹಾರ್ಮುಜ್ ದಾಳಿಗೆ ಭಾರತದ ಖಂಡನೆ; ವಿಶ್ವಸಂಸ್ಥೆಯಲ್ಲಿ ಶಾಂತಿಗೆ ಕರೆ

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

error: Content is protected !!