ಲಯನ್ಸ್ ಕ್ಲಬ್ ಮಂಚಿ ಇದರ ಆಶ್ರಯದಲ್ಲಿ ಸಾಲೆತ್ತೂರು ವಲಯದ ಶೌರ್ಯ ತಂಡ ಮತ್ತು ಇತರೇ ಸಂಘ ಸಂಸ್ಥೆಗಳ ಆಶ್ರಯದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಸಾಲೆತ್ತೂರು ವಲಯದ ಕುಡ್ತಮುಗೇರು -ಸಾಲೆತ್ತೂರು ಶೌರ್ಯ ಘಟಕದ ಸದಸ್ಯರು ವಲಯದ ಮೇಲ್ವಿಚಾರಕರಾದ ಮೋಹಿನಿಯವರ ಮಾರ್ಗದರ್ಶನದಲ್ಲಿ ಅಧ್ಯಕ್ಷ ಪುರುಷೋತ್ತಮ್ರವರ ಉಪಸ್ಥಿತಿಯಲ್ಲಿ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು.
ನವೀನ್ ಕಜೆ, ಗಣೇಶ್ ಶೆಟ್ಟಿ, ಜಯಶ್ರೀ, ಪುರುಷೋತ್ತಮ್, ರಂಜಿತ್ ಪೂಜಾರಿ, ರಾಮಣ್ಣ ಮೂಲ್ಯ, ಗಣೇಶ್ ಆಚಾರ್ಯ, ನವೀನ್, ಪುರುಷೋತ್ತಮ್ ಕಜೆ, ಯಶೋಧರ ಆಚಾರ್ಯ,ಚಿನ್ನಪ್ಪ ಗೌಡ, ನರೇಶ ರಕ್ತದಾನ ಮಾಡಿ ಸಹಕರಿಸಿದ್ದಾರೆ. ಈ ಸಂದರ್ಭದಲ್ಲಿ ಸಾಲೆತ್ತೂರು ವಲಯಾಧ್ಯಕ್ಷರಾದ ದಿನೇಶ್ ಶೆಟ್ಟಿ ಸಾಲೆತ್ತೂರು, ಒಕ್ಕೂಟದ ಅಧ್ಯಕ್ಷರುಗಳಾದ ದಿವಾಕರ ನಾಯಕ್, ಸುಧಾಕರ್ ಸಂಯೋಜಕಿ ಕುಶಾಲ, ಒಕ್ಕೂಟದ ಉಪಾಧ್ಯಕ್ಷೆ ಸಾರಮ್ಮ, ಸೇವಾಪ್ರತಿನಿಧಿಗಳಾದ ಚಂಚಲಾಕ್ಷಿ, ಮನೋಹರಿ ಸಹಕರಿಸಿದರು. ಇದೇ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ನ ಪದಾಧಿಕಾರಿಗಳು ಶೌರ್ಯ ತಂಡ ನೀಡಿದ ಸಹಕಾರಕ್ಕೆ ಅಭಿನಂದನೆಗಳನ್ನು ಸಲ್ಲಿಸಿದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…