ಲಯನ್ಸ್ ಕ್ಲಬ್ ಮಂಚಿ ಇದರ ಆಶ್ರಯದಲ್ಲಿ ಸಾಲೆತ್ತೂರು ವಲಯದ ಶೌರ್ಯ ತಂಡ ಮತ್ತು ಇತರೇ ಸಂಘ ಸಂಸ್ಥೆಗಳ ಆಶ್ರಯದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಸಾಲೆತ್ತೂರು ವಲಯದ ಕುಡ್ತಮುಗೇರು -ಸಾಲೆತ್ತೂರು ಶೌರ್ಯ ಘಟಕದ ಸದಸ್ಯರು ವಲಯದ ಮೇಲ್ವಿಚಾರಕರಾದ ಮೋಹಿನಿಯವರ ಮಾರ್ಗದರ್ಶನದಲ್ಲಿ ಅಧ್ಯಕ್ಷ ಪುರುಷೋತ್ತಮ್ರವರ ಉಪಸ್ಥಿತಿಯಲ್ಲಿ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು.
ನವೀನ್ ಕಜೆ, ಗಣೇಶ್ ಶೆಟ್ಟಿ, ಜಯಶ್ರೀ, ಪುರುಷೋತ್ತಮ್, ರಂಜಿತ್ ಪೂಜಾರಿ, ರಾಮಣ್ಣ ಮೂಲ್ಯ, ಗಣೇಶ್ ಆಚಾರ್ಯ, ನವೀನ್, ಪುರುಷೋತ್ತಮ್ ಕಜೆ, ಯಶೋಧರ ಆಚಾರ್ಯ,ಚಿನ್ನಪ್ಪ ಗೌಡ, ನರೇಶ ರಕ್ತದಾನ ಮಾಡಿ ಸಹಕರಿಸಿದ್ದಾರೆ. ಈ ಸಂದರ್ಭದಲ್ಲಿ ಸಾಲೆತ್ತೂರು ವಲಯಾಧ್ಯಕ್ಷರಾದ ದಿನೇಶ್ ಶೆಟ್ಟಿ ಸಾಲೆತ್ತೂರು, ಒಕ್ಕೂಟದ ಅಧ್ಯಕ್ಷರುಗಳಾದ ದಿವಾಕರ ನಾಯಕ್, ಸುಧಾಕರ್ ಸಂಯೋಜಕಿ ಕುಶಾಲ, ಒಕ್ಕೂಟದ ಉಪಾಧ್ಯಕ್ಷೆ ಸಾರಮ್ಮ, ಸೇವಾಪ್ರತಿನಿಧಿಗಳಾದ ಚಂಚಲಾಕ್ಷಿ, ಮನೋಹರಿ ಸಹಕರಿಸಿದರು. ಇದೇ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ನ ಪದಾಧಿಕಾರಿಗಳು ಶೌರ್ಯ ತಂಡ ನೀಡಿದ ಸಹಕಾರಕ್ಕೆ ಅಭಿನಂದನೆಗಳನ್ನು ಸಲ್ಲಿಸಿದರು.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…