ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರು ಐಕಳ ಹರೀಶ್ ಶೆಟ್ಟಿ ಅವರು ಜಗನ್ನಾಥ ಶೆಟ್ಟಿ ಬಾಳ ಅವರ ನೇತೃತ್ವದ ರಂಗಚಾವಡಿಯ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾದಾನಿಗಳಾದ ಕನ್ಯಾನ ಸದಾಶಿವ ಶೆಟ್ಟಿ ಅವರು ಉದ್ಘಾಟಿಸಿದರು.



ಕಾರ್ಯಕ್ರಮದಲ್ಲಿ ಖ್ಯಾತ ರಂಗ ನಿರ್ದೇಶಕ, ಸಿನಿಮಾ ನಿರ್ದೇಶಕ ಹಾಗೂ ನಟ ಶಿವಧೂತೇ ಗುಳಿಗ ನಾಟಕದ ಯಶಸ್ವಿ ಸಂಯೋಜಕರಾದ ವಿಜಯ್ ಕುಮಾರ್ ಕೋಡಿಯಾಲ್ ಬೈಲ್ ದಂಪತಿಗಳನ್ನು ರಂಗಚಾವಡಿ ಪ್ರಶಸ್ತಿಯೊಂದಿಗೆ ಗೌರವಿಸಿ ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಚಲನಚಿತ್ರ ನಿರ್ಮಾಪಕ ಡಾ.ಸಂಜೀವ ದಂಡೆಕೇರಿ, ಮನಪಾ ಸದಸ್ಯ ವರುಣ್ ಚೌಟ, ಬಂಟರ ಮಾತೃಸಂಘ ತಾಲೂಕು ಸಮಿತಿ ಸಂಚಾಲಕ ವಸಂತ ಶೆಟ್ಟಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ಅಧ್ಯಕ್ಷ ಸುಧಾಕರ ಎಸ್ ಪೂಂಜ, ಸುಭಾಷಿತನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷ ರಮೇಶ್ ಶೆಟ್ಟಿ,ಯಥಾಥ್೯ ಸೋಶಿಯಲ್ ಮಂಗಳೂರು ಇದರ ಸ್ಥಾಪಕ ಈಶ್ವರ್ ಪ್ರಸಾದ್ ಶೆಟ್ಟಿ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ, ಉಪಸ್ಥಿತರಿದ್ದರು.






