ಅಕ್ಷಯಪಾತ್ರದಿಂದ ಹಸಿವು ನೀಗುವುದರ ಜೊತೆ ಪುಣ್ಯ ಬಂಟ್ವಾಳ : ಅಕ್ಷಯಪಾತ್ರ ಫೌಂಡೇಶನ್ ವತಿಯಿಂದ ಕೃಷ್ಣನ ಪ್ರಸಾದವನ್ನು ಮಕ್ಕಳಿಗೆ ವಿತರಿಸುವ ಸತ್ಕಾರ್ಯವನ್ನು ಹಲವು ವರ್ಷಗಳಿಂದ ನಡೆಯುತ್ತಿದೆ. ಇಸ್ಕಾನ್ ಫೌಂಡೇಶನ್ ಮೂಲಕ ಇಡೀ ದೇಶದಲ್ಲಿ 23 ಲಕ್ಷ ಮಂದಿಗೆ ಮಧ್ಯಾಹ್ನದ ಊಟ ತಲುಪುತ್ತಿದ್ದು, ಇದು ಅತ್ಯಂತ ಶ್ಲಾಘನೀಯ ಕೆಲಸವಾಗಿದೆ. ಅಕ್ಷಯಪಾತ್ರ ನೀಡುವ ಸಾತ್ವಿಕ ಆಹಾರದ ಮೂಲಕ ಮಕ್ಕಳಿಗೆ ಆದ್ಯಾತ್ಮಿಕ ಸಾಧನೆಯನ್ನು ನೀಡುವ ಕಾರ್ಯವನ್ನು ಇಸ್ಕಾನ್ ನಡೆಸುತ್ತಿದೆ. ಗ್ರಾಮೀಣ ಭಾಗದಲ್ಲಿ ತಲೆ ಎತ್ತಿನಿಂತಿರುವ ಈ ಘಟಕ ಯಶಸ್ವಿಯಾಗಿ ನಡೆಯಲಿ. ಇಸ್ಕಾನ್ ಮೂಲಕ ಕೃಷ್ಣನ ಪ್ರಸಾದದ ರವಾನೆ ಇಡೀ ಪ್ರಪಂಚಾದಾದ್ಯಂತ ನಡೆಯಲಿ ಎಂದು ಶುಭಹಾರೈಸುತ್ತೇನೆ ಎಂದು ಉಡುಪಿಯ ಪುತ್ತಿಗೆ ಮಠದ ಜಗದ್ಗುರು ಶ್ರೀ ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರು ಹೇಳಿದರು.
ಅವರು ಬಂಟ್ವಾಳದ ಬೆಂಜನಪದವಿನಲ್ಲಿ ನಿರ್ಮಿಸಿರುವ ಕೇಂದ್ರೀಕೃತ ಅಡುಗೆಮನೆಗೆ ಚಾಲನೆ ನೀಡಿ ಆಶೀರ್ವಚನ ನೀಡಿದರು.
ಅಕ್ಷಯ ಪಾತ್ರ ಫೌಂಡೇಶನ್ನಿನ ಅಧ್ಯಕ್ಷ ಮಧು ಪಂಡಿತ್ದಾಸ ಮಾತನಾಡಿ ಮಂಗಳೂರಿನಲ್ಲಿ ನಮ್ಮ ಅತ್ಯಾಧುನಿಕ ಅಡುಗೆಮನೆಯ ಪ್ರಾರಂಭವು ಅಕ್ಷಯ ಪಾತ್ರ ಫೌಂಡೇಶನ್ನ ಪ್ರಗತಿಯನ್ನು ಸೂಚಿಸುತ್ತದೆ. ಮಕ್ಕಳ ಕಲ್ಯಾಣ ಮತ್ತು ಸಮುದಾಯದ ಅಭಿವೃದ್ಧಿಯಲ್ಲಿ ನಮ್ಮ ಬದ್ಧತೆ ಪ್ರತಿಬಿಂಬವಾಗಿದೆ. ಕೇಂದ್ರ ಸರ್ಕಾರ, ಕರ್ನಾಟಕ ಸರ್ಕಾರ ಮತ್ತು ಶಿಕ್ಷಣ ಸಚಿವಾಲಯ, ಸರ್ಕಾರದಿಂದ ನಿರಂತರ ಬೆಂಬಲಕ್ಕಾಗಿ ನಾವು ಕೃತಜ್ಞರಾಗಿರುತ್ತೇವೆ ಎಂದು ತಿಳಿಸಿದರು.
ಮಂಗಳೂರು ಅಧ್ಯಕ್ಷ ಗುಣಕರ ರಾಮದಾಸ್ ನೂತನವಾದ ಅಡುಗೆ ಕೋಣೆಯು124 ಸರ್ಕಾರಿ ಮತ್ತು 41 ಸರ್ಕಾರಿ ಅನುದಾನಿತ ಸಂಸ್ಥೆಗಳು ಸೇರಿದಂತೆ 165ಕ್ಕೂ ಹೆಚ್ಚು ಶಾಲೆಗಗಳಿಗೆ ಅಗತ್ಯ ಪೌಷ್ಟಿಕಯುತವಾದ 25, 000ಊಟವನ್ನು ಉತ್ಪಾದಿಸುವ ಸಾಮರ್ಥ್ಯದೊಂದಿಗೆ ಈ ಅಡುಗೆಕೋಣೆ ರೂಪುಗೊಂಡಿದೆ. ಅಡುಗೆಮನೆಯ ವೈವಿಧ್ಯಮಯ ಮೆನುವು ಸಮತೋಲಿತ ಪೋಷಣೆಯನ್ನು ಖಾತ್ರಿಗೊಳಿಸುತ್ತದೆ. ಸೌರಶಕ್ತಿ ಮತ್ತು ಸ್ವಚ್ಛ LPG ಯೊಂದಿಗೆ ಪರಿಸರಸ್ನೇಹಿ ಅಡುಗೆಮನೆ ಇದಾಗಿದೆ ಎಂದು ತಿಳಿಸಿದರು.
ವೇದಿಕೆಯಲ್ಲಿ ಅಕ್ಷಯ ಪಾತ್ರ ಫೌಂಡೇಶನ್ನ ಉಪಾಧ್ಯಕ್ಷ ಚಂಚಲಪತಿ ದಾಸ, ಐಸ್ಕಾನ್ ಕೊಡಚಾದ್ರಿ ಗುರುಕುಲದ ಉಸ್ತುವಾರಿ ತತ್ವದರ್ಶನ ಸ್ವಾಮಿಜಿ, ಮೇರೆಮಜಲು ಗ್ರಾಮಪಂಚಾಯತ್ ಅಧ್ಯಕ್ಷ ಸತೀಶ್ ನಾಯ್ಕ್, ಉಪಾಧ್ಯಕ್ಷ ರಾಧಾಕೃಷ್ಣ ತಂತ್ರಿ ಉಪಸ್ಥಿತರಿದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…