ಜನ ಮನದ ನಾಡಿ ಮಿಡಿತ

Advertisement

“ರಂಗಚಾವಡಿ” ವರ್ಷದ ಹಬ್ಬ, ಹಿರಿಯ ರಂಗಕರ್ಮಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ರಿಗೆ “ರಂಗಚಾವಡಿ-2023” ಪ್ರಶಸ್ತಿ ಪ್ರದಾನ

“ಕಲಾವಿದರನ್ನು ಗುರುತಿಸುವ ರಂಗಚಾವಡಿಯ ಉದ್ದೇಶ ಶ್ಲಾಘನೀಯ” -ಕನ್ಯಾನ ಸದಾಶಿವ ಶೆಟ್ಟಿ

ಸುರತ್ಕಲ್: “ರಂಗಚಾವಡಿ” ಮಂಗಳೂರು ಇದರ ಆಶ್ರಯದಲ್ಲಿ ಸುಭಾಷಿತನಗರ ರೆಸಿಡೆಂಟ್ಸ್ ವೆಲ್‌ ಫೇರ್‌ ಅಸೋಸಿಯೇಶನ್ ಸುರತ್ಕಲ್ ಸಹಯೋಗದೊಂದಿಗೆ ರಂಗಚಾವಡಿ ವರ್ಷದ ಹಬ್ಬ ಹಾಗೂ ರಂಗಚಾವಡಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಸುರತ್ಕಲ್ ಬಂಟರ ಭವನದಲ್ಲಿ ಜರುಗಿತು.
ಖ್ಯಾತ ರಂಗಕರ್ಮಿ, ನಾಟಕ ರಚನೆಕಾರ-ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ದಂಪತಿಯನ್ನು ವೇದಿಕೆಯಲ್ಲಿ ಅತಿಥಿಗಳು ಸನ್ಮಾನಿಸಿ ಗೌರವಿಸಿದರು. ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರಿಗೆ “ರಂಗಚಾವಡಿ-2023” ಪ್ರಶಸ್ತಿ ಪ್ರದಾನ ಮಾಡಲಾಯಿತು.

ಉದ್ಘಾಟನೆ ನೆರವೇರಿಸಿ ಮಾತಾಡಿದ ಹೇರಂಭ ಇಂಡಸ್ಟ್ರೀಸ್ ಮುಂಬೈ ಇದರ ಆಡಳಿತ ನಿರ್ದೇಶಕ ಕನ್ಯಾನ ಸದಾಶಿವ ಶೆಟ್ಟಿ ಅವರು, “ರಂಗಚಾವಡಿ ಸಂಘಟನೆ ಹಿರಿಯ ಕಲಾವಿದರನ್ನು ಗುರುತಿಸಿ ಸನ್ಮಾನಿಸುವುದು ಶ್ಲಾಘನೀಯ ವಿಚಾರ. ಇಂದು ಸನ್ಮಾನಿಸಲ್ಪಟ್ಟಿರುವ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರ ಸಾಧನೆ ಹಾಗೂ ಮಹಾ ವ್ಯಕ್ತಿತ್ವ ಮೆಚ್ಚುವಂತದ್ದು. ರಂಗಚಾವಡಿ ಮಂಗಳೂರು ಸಂಸ್ಥೆ ಬಹಳಷ್ಟು ಒಳ್ಳೆಯ ಕೆಲಸ ಮಾಡುತ್ತಿದೆ. ಅತ್ಯಂತ ಯೋಗ್ಯ ವ್ಯಕ್ತಿಯನ್ನು ಸನ್ಮಾನಿಸಿರುವುದು ಖುಷಿ ತಂದಿದೆ. ದೇವರು ಕೊಡಿಯಾಲ್ ಬೈಲ್ ರ ಕಲೆಯನ್ನು ಇನ್ನಷ್ಟು ಆಶೀರ್ವದಿಸಲಿ” ಎಂದರು.


ಸನ್ಮಾನ ಸ್ವೀಕರಿಸಿ ಮಾತಾಡಿದ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು, “ಇದು ಅರ್ಜಿ ಹಾಕದೇ ಸಿಗುತ್ತಿರುವ ಪ್ರಶಸ್ತಿ. ಯಾವುದೇ ಲಾಬಿಯಿಲ್ಲದೆ ಕಲಾವಿದರ ಶ್ರಮವನ್ನು ಗುರುತಿಸಿ ರಂಗ ಚಾವಡಿ ಸಂಘಟನೆ ಪ್ರಶಸ್ತಿ ನೀಡುತ್ತಿರುವ ಕಾರಣ ಇದಕ್ಕೆ ಮೌಲ್ಯ ಜಾಸ್ತಿ. ಹೀಗಾಗಿ ಬೇರೆ ಪ್ರಶಸ್ತಿಗಿಂತ ಇದನ್ನು ಪಡೆಯುವಾಗ ಆಗುತ್ತಿರುವ ಖುಷಿಯೇ ಬೇರೆ. ರಂಗಭೂಮಿಯಲ್ಲಿ ವಿಭಿನ್ನ, ವಿನೂತನ ಪ್ರಯೋಗ ಮಾಡುತ್ತಿರುವ ನನಗೆ ನಿಮ್ಮೆಲ್ಲರ ಪ್ರೀತಿ ತುಂಬಿದ ಸಹಕಾರ ಇದೇ ರೀತಿ ಇರಲಿ” ಎಂದರು.
ಕೊಡಿಯಾಲ್ ಬೈಲ್ ಸಾಧನೆ ಅಭೂತಪೂರ್ವ: ಐಕಳ
ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು “ತುಳುನಾಡಿನಲ್ಲಿ ವಿಜಯ ಕುಮಾರ್ ಕೊಡಿಯಾಲ್ ಬೈಲ್ ಮಾಡಿರುವ ಸಾಧನೆ ಅಭೂತಪೂರ್ವವಾದುದು. ಶಿವದೂತೆ ಗುಳಿಗೆ ನಾಟಕ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಅವರಿಗೆ 2023 ರ ಸಾಲಿನ ರಂಗಚಾವಡಿ ಪ್ರಶಸ್ತಿ ನೀಡುವ ಮೂಲಕ ಪ್ರಶಸ್ತಿಯ ಗೌರವ ಹೆಚ್ಚಾಗಿದೆ. ಸಮಾಜದಲ್ಲಿ ಎಲ್ಲರೂ ಶ್ರೀಮಂತರಿರುವುದಿಲ್ಲ. ಬಡವರನ್ನು ಪ್ರೀತಿಯಿಂದ ಕಾಣಬೇಕು. ಹಣವನ್ನು ಕೂಡಿಡುವ ಬದಲು ಯೋಗ್ಯರಿಗೆ ದಾನ ಮಾಡಬೇಕು. ಆಗ ನಮ್ಮ ಬದುಕು ಸಾರ್ಥಕವಾಗುತ್ತದೆ” ಎಂದರು.


ಶ್ರೀ ಡೆವಲಪರ್ಸ್ ಕಟೀಲು ಇದರ ಆಡಳಿತ ನಿರ್ದೇಶಕ ಗಿರೀಶ್ ಎಂ ಶೆಟ್ಟಿ ಕಟೀಲು ಮಾತನಾಡಿ ವಿಜಯಕುಮಾರ್ ಕೊಡಿಯಾಲ್ ಬೈಲ್ ರ ನಾಟಕ ತಂಡದಿಂದ ಅನೇಕ ಯಶಸ್ವಿ ನಾಟಕಗಳ ಪ್ರದರ್ಶನ ಆಗಿದೆ. ಶಿವದೂತೆ ಗುಳಿಗೆ ಚಾರಿತ್ರಿಕ ದಾಖಲೆ ನಿರ್ಮಿಸಿದೆ. ಇದೀಗ ಮೈತಿದಿ ಹೊಸತನದಿಂದ ಕೂಡಿದ್ದು ಪ್ರೇಕ್ಷಕರ ಮನಗೆದ್ದಿದೆ ಎಂದರು.
ವೇದಿಕೆಯಲ್ಲಿ ಚಲನಚಿತ್ರ ನಿರ್ಮಾಪಕ ಡಾ.ಸಂಜೀವ ದಂಡೆಕೇರಿ, ಮನಪಾ ಸದಸ್ಯ ವರುಣ್ ಚೌಟ, ಬಂಟರ ಮಾತೃಸಂಘ ತಾಲೂಕು ಸಮಿತಿ ಸಂಚಾಲಕ ವಸಂತ ಶೆಟ್ಟಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ಅಧ್ಯಕ್ಷ ಸುಧಾಕರ ಎಸ್ ಪೂಂಜ, ಸುಭಾಷಿತನಗರ ರೆಸಿಡೆಂಟ್ಸ್ ವೆಲ್‌ಫೇರ್‌ ಅಸೋಸಿಯೇಶನ್ ಅಧ್ಯಕ್ಷ ರಮೇಶ್ ಶೆಟ್ಟಿ,ಯಥಾಥ್೯ ಸೋಶಿಯಲ್ ಮಂಗಳೂರು ಇದರ ಸ್ಥಾಪಕ ಈಶ್ವರ್ ಪ್ರಸಾದ್ ಶೆಟ್ಟಿ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ, ಉಪಸ್ಥಿತರಿದ್ದರು. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್ ಅಭಿನಂದನಾ ಭಾಷಣ ಮಾಡಿದರು.
ನಿತೇಶ್ ಶೆಟ್ಟಿ ಎಕ್ಕಾರ್, ರಾಜೇಶ್ವರಿ ಡಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ವಿಜಯಕುಮಾರ್ ಕೊಡಿಯಾಲ್ ಬೈಲ್ ರವರ ಮೈತಿದಿ ನಾಟಕ ಪ್ರದರ್ಶನಗೊಂಡಿತು.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!