ಮುಲ್ಕಿ: ದಿ. ನಾರಾಯಣ ಶೆಟ್ಟರು ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸಿ ಶ್ರೀದೇವಿಯ ಆರಾಧನೆ ಮೂಲಕ ಪರಮ ಭಕ್ತರಾಗಿದ್ದರು ಎಂದು ಕಟೀಲು ಕ್ಷೇತ್ರದ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ಹೇಳಿದರು.

ಅವರು ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಜ್ಞಾನ ಮಂದಿರದಲ್ಲಿ ನಡೆದ ಕ್ಷೇತ್ರದ ಬ್ರಹ್ಮಕಲಶೋತ್ಸವ ಹಾಗೂ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದಿ. ನಾರಾಯಣ ಶೆಟ್ಟರ ಶೃದ್ಧಾಂಜಲಿ ಸಭೆಯಲ್ಲಿ ಮಾತನಾಡಿ ಅವರು ಅಭಿವೃದ್ಧಿಯ ಹರಿಕಾರ ಸಹಿತ ಕೊಡುಗೈ ದಾನಿಯಾಗಿದ್ದು ಅವರ ಆದರ್ಶಗಳನ್ನು ಹಾಗೂ ಕ್ಷೇತ್ರದ ಅಭಿವೃದ್ಧಿಯನ್ನು ಮುಂದುವರೆಸಿಕೊಂಡು ಹೋಗುವ ಕಾರ್ಯವಾಗಬೇಕು ಎಂದರು.

ಸಭೆಯಲ್ಲಿ ಕ್ಷೇತ್ರದ ಅರ್ಚಕರಾದ ಶ್ರೀಪತಿ ಉಪಾಧ್ಯಾಯ, ನರಸಿಂಹ ಭಟ್, ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತರು, ಶಾಸಕ ಉಮಾನಾಥ ಕೋಟ್ಯಾನ್ ,ಮಾಜೀ ಸಚಿವ ಅಭಯ ಚಂದ್ರ ಜೈನ್, ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಭುವನಾಭಿರಾಮ ಉಡುಪ, ಗೋಪಾಲಕೃಷ್ಣ ಭಟ್ ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಯದು ನಾರಾಯಣಶೆಟ್ಟಿ, ಅವಿನಾಶ್ ಕೋಟ್ಯಾನ್, ಉದ್ಯಮಿ ಜೀವನ್ ಶೆಟ್ಟಿ ಕಾರ್ನಾಡ್, ಸುನಿಲ್ ಆಳ್ವ, ಸಂಜೀವ ದೇವಾಡಿಗ ಬಪ್ಪನಾಡು, ಕರುಣಾಕರ ಶೆಟ್ಟಿ, ಕಿಶೋರ್ ಶೆಟ್ಟಿ ಬಪ್ಪನಾಡು, ಸುರೇಶ್ ಬಂಗೇರ ಸಸಿಹಿತ್ಲು ಉದಯಕುಮಾರ್ ಶೆಟ್ಟಿ ಆದಿಧನ್, ಅಬ್ದುಲ್ ರಜಾಕ್, ಶಿವರಾಮ್ ಜಿ ಅಮೀನ್, ದಿ.ನಾರಾಯಣಶೆಟ್ಟಿ ಮನೆಯವರು ಉಪಸ್ಥಿತರಿದ್ದರು. ದಿನೇಶ್ ಕೊಲ್ನಾಡು ನಿರೂಪಿಸಿದರು.
ಬಳಿಕ ಮೌನ ಪ್ರಾರ್ಥನೆ ಸಲ್ಲಿಸಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಮೂಲಕ ಶೃದ್ಧಾಂಜಲಿ ಅರ್ಪಿಸಲಾಯಿತು



