ಜನ ಮನದ ನಾಡಿ ಮಿಡಿತ

Advertisement

ದಿ. ನಾರಾಯಣ ಶೆಟ್ಟರು ಅಭಿವೃದ್ಧಿಯ ಹರಿಕಾರ ಸಹಿತ ಕೊಡುಗೈ ದಾನಿ ಯಾಗಿದ್ದರು-ಲಕ್ಷ್ಮೀನಾರಾಯಣ ಆಸ್ರಣ್ಣ

ಮುಲ್ಕಿ: ದಿ. ನಾರಾಯಣ ಶೆಟ್ಟರು ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸಿ ಶ್ರೀದೇವಿಯ ಆರಾಧನೆ ಮೂಲಕ ಪರಮ ಭಕ್ತರಾಗಿದ್ದರು ಎಂದು ಕಟೀಲು ಕ್ಷೇತ್ರದ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ಹೇಳಿದರು.


ಅವರು ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಜ್ಞಾನ ಮಂದಿರದಲ್ಲಿ ನಡೆದ ಕ್ಷೇತ್ರದ ಬ್ರಹ್ಮಕಲಶೋತ್ಸವ ಹಾಗೂ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದಿ. ನಾರಾಯಣ ಶೆಟ್ಟರ ಶೃದ್ಧಾಂಜಲಿ ಸಭೆಯಲ್ಲಿ ಮಾತನಾಡಿ ಅವರು ಅಭಿವೃದ್ಧಿಯ ಹರಿಕಾರ ಸಹಿತ ಕೊಡುಗೈ ದಾನಿಯಾಗಿದ್ದು ಅವರ ಆದರ್ಶಗಳನ್ನು ಹಾಗೂ ಕ್ಷೇತ್ರದ ಅಭಿವೃದ್ಧಿಯನ್ನು ಮುಂದುವರೆಸಿಕೊಂಡು ಹೋಗುವ ಕಾರ್ಯವಾಗಬೇಕು ಎಂದರು.


ಸಭೆಯಲ್ಲಿ ಕ್ಷೇತ್ರದ ಅರ್ಚಕರಾದ ಶ್ರೀಪತಿ ಉಪಾಧ್ಯಾಯ, ನರಸಿಂಹ ಭಟ್, ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತರು, ಶಾಸಕ ಉಮಾನಾಥ ಕೋಟ್ಯಾನ್ ,ಮಾಜೀ ಸಚಿವ ಅಭಯ ಚಂದ್ರ ಜೈನ್, ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಭುವನಾಭಿರಾಮ ಉಡುಪ, ಗೋಪಾಲಕೃಷ್ಣ ಭಟ್ ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಯದು ನಾರಾಯಣಶೆಟ್ಟಿ, ಅವಿನಾಶ್ ಕೋಟ್ಯಾನ್, ಉದ್ಯಮಿ ಜೀವನ್ ಶೆಟ್ಟಿ ಕಾರ್ನಾಡ್, ಸುನಿಲ್ ಆಳ್ವ, ಸಂಜೀವ ದೇವಾಡಿಗ ಬಪ್ಪನಾಡು, ಕರುಣಾಕರ ಶೆಟ್ಟಿ, ಕಿಶೋರ್ ಶೆಟ್ಟಿ ಬಪ್ಪನಾಡು, ಸುರೇಶ್ ಬಂಗೇರ ಸಸಿಹಿತ್ಲು ಉದಯಕುಮಾರ್ ಶೆಟ್ಟಿ ಆದಿಧನ್, ಅಬ್ದುಲ್ ರಜಾಕ್, ಶಿವರಾಮ್ ಜಿ ಅಮೀನ್, ದಿ.ನಾರಾಯಣಶೆಟ್ಟಿ ಮನೆಯವರು ಉಪಸ್ಥಿತರಿದ್ದರು. ದಿನೇಶ್ ಕೊಲ್ನಾಡು ನಿರೂಪಿಸಿದರು.


ಬಳಿಕ ಮೌನ ಪ್ರಾರ್ಥನೆ ಸಲ್ಲಿಸಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಮೂಲಕ ಶೃದ್ಧಾಂಜಲಿ ಅರ್ಪಿಸಲಾಯಿತು

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!