ಜನ ಮನದ ನಾಡಿ ಮಿಡಿತ

Advertisement

ದಿ. ನಾರಾಯಣ ಶೆಟ್ಟರು ಅಭಿವೃದ್ಧಿಯ ಹರಿಕಾರ ಸಹಿತ ಕೊಡುಗೈ ದಾನಿ ಯಾಗಿದ್ದರು-ಲಕ್ಷ್ಮೀನಾರಾಯಣ ಆಸ್ರಣ್ಣ

ಮುಲ್ಕಿ: ದಿ. ನಾರಾಯಣ ಶೆಟ್ಟರು ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸಿ ಶ್ರೀದೇವಿಯ ಆರಾಧನೆ ಮೂಲಕ ಪರಮ ಭಕ್ತರಾಗಿದ್ದರು ಎಂದು ಕಟೀಲು ಕ್ಷೇತ್ರದ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ಹೇಳಿದರು.


ಅವರು ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಜ್ಞಾನ ಮಂದಿರದಲ್ಲಿ ನಡೆದ ಕ್ಷೇತ್ರದ ಬ್ರಹ್ಮಕಲಶೋತ್ಸವ ಹಾಗೂ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದಿ. ನಾರಾಯಣ ಶೆಟ್ಟರ ಶೃದ್ಧಾಂಜಲಿ ಸಭೆಯಲ್ಲಿ ಮಾತನಾಡಿ ಅವರು ಅಭಿವೃದ್ಧಿಯ ಹರಿಕಾರ ಸಹಿತ ಕೊಡುಗೈ ದಾನಿಯಾಗಿದ್ದು ಅವರ ಆದರ್ಶಗಳನ್ನು ಹಾಗೂ ಕ್ಷೇತ್ರದ ಅಭಿವೃದ್ಧಿಯನ್ನು ಮುಂದುವರೆಸಿಕೊಂಡು ಹೋಗುವ ಕಾರ್ಯವಾಗಬೇಕು ಎಂದರು.


ಸಭೆಯಲ್ಲಿ ಕ್ಷೇತ್ರದ ಅರ್ಚಕರಾದ ಶ್ರೀಪತಿ ಉಪಾಧ್ಯಾಯ, ನರಸಿಂಹ ಭಟ್, ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತರು, ಶಾಸಕ ಉಮಾನಾಥ ಕೋಟ್ಯಾನ್ ,ಮಾಜೀ ಸಚಿವ ಅಭಯ ಚಂದ್ರ ಜೈನ್, ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಭುವನಾಭಿರಾಮ ಉಡುಪ, ಗೋಪಾಲಕೃಷ್ಣ ಭಟ್ ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಯದು ನಾರಾಯಣಶೆಟ್ಟಿ, ಅವಿನಾಶ್ ಕೋಟ್ಯಾನ್, ಉದ್ಯಮಿ ಜೀವನ್ ಶೆಟ್ಟಿ ಕಾರ್ನಾಡ್, ಸುನಿಲ್ ಆಳ್ವ, ಸಂಜೀವ ದೇವಾಡಿಗ ಬಪ್ಪನಾಡು, ಕರುಣಾಕರ ಶೆಟ್ಟಿ, ಕಿಶೋರ್ ಶೆಟ್ಟಿ ಬಪ್ಪನಾಡು, ಸುರೇಶ್ ಬಂಗೇರ ಸಸಿಹಿತ್ಲು ಉದಯಕುಮಾರ್ ಶೆಟ್ಟಿ ಆದಿಧನ್, ಅಬ್ದುಲ್ ರಜಾಕ್, ಶಿವರಾಮ್ ಜಿ ಅಮೀನ್, ದಿ.ನಾರಾಯಣಶೆಟ್ಟಿ ಮನೆಯವರು ಉಪಸ್ಥಿತರಿದ್ದರು. ದಿನೇಶ್ ಕೊಲ್ನಾಡು ನಿರೂಪಿಸಿದರು.


ಬಳಿಕ ಮೌನ ಪ್ರಾರ್ಥನೆ ಸಲ್ಲಿಸಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಮೂಲಕ ಶೃದ್ಧಾಂಜಲಿ ಅರ್ಪಿಸಲಾಯಿತು

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!