ಮುಲ್ಕಿ: ದಿ. ನಾರಾಯಣ ಶೆಟ್ಟರು ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸಿ ಶ್ರೀದೇವಿಯ ಆರಾಧನೆ ಮೂಲಕ ಪರಮ ಭಕ್ತರಾಗಿದ್ದರು ಎಂದು ಕಟೀಲು ಕ್ಷೇತ್ರದ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ಹೇಳಿದರು.
ಅವರು ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಜ್ಞಾನ ಮಂದಿರದಲ್ಲಿ ನಡೆದ ಕ್ಷೇತ್ರದ ಬ್ರಹ್ಮಕಲಶೋತ್ಸವ ಹಾಗೂ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದಿ. ನಾರಾಯಣ ಶೆಟ್ಟರ ಶೃದ್ಧಾಂಜಲಿ ಸಭೆಯಲ್ಲಿ ಮಾತನಾಡಿ ಅವರು ಅಭಿವೃದ್ಧಿಯ ಹರಿಕಾರ ಸಹಿತ ಕೊಡುಗೈ ದಾನಿಯಾಗಿದ್ದು ಅವರ ಆದರ್ಶಗಳನ್ನು ಹಾಗೂ ಕ್ಷೇತ್ರದ ಅಭಿವೃದ್ಧಿಯನ್ನು ಮುಂದುವರೆಸಿಕೊಂಡು ಹೋಗುವ ಕಾರ್ಯವಾಗಬೇಕು ಎಂದರು.
ಸಭೆಯಲ್ಲಿ ಕ್ಷೇತ್ರದ ಅರ್ಚಕರಾದ ಶ್ರೀಪತಿ ಉಪಾಧ್ಯಾಯ, ನರಸಿಂಹ ಭಟ್, ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತರು, ಶಾಸಕ ಉಮಾನಾಥ ಕೋಟ್ಯಾನ್ ,ಮಾಜೀ ಸಚಿವ ಅಭಯ ಚಂದ್ರ ಜೈನ್, ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಭುವನಾಭಿರಾಮ ಉಡುಪ, ಗೋಪಾಲಕೃಷ್ಣ ಭಟ್ ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಯದು ನಾರಾಯಣಶೆಟ್ಟಿ, ಅವಿನಾಶ್ ಕೋಟ್ಯಾನ್, ಉದ್ಯಮಿ ಜೀವನ್ ಶೆಟ್ಟಿ ಕಾರ್ನಾಡ್, ಸುನಿಲ್ ಆಳ್ವ, ಸಂಜೀವ ದೇವಾಡಿಗ ಬಪ್ಪನಾಡು, ಕರುಣಾಕರ ಶೆಟ್ಟಿ, ಕಿಶೋರ್ ಶೆಟ್ಟಿ ಬಪ್ಪನಾಡು, ಸುರೇಶ್ ಬಂಗೇರ ಸಸಿಹಿತ್ಲು ಉದಯಕುಮಾರ್ ಶೆಟ್ಟಿ ಆದಿಧನ್, ಅಬ್ದುಲ್ ರಜಾಕ್, ಶಿವರಾಮ್ ಜಿ ಅಮೀನ್, ದಿ.ನಾರಾಯಣಶೆಟ್ಟಿ ಮನೆಯವರು ಉಪಸ್ಥಿತರಿದ್ದರು. ದಿನೇಶ್ ಕೊಲ್ನಾಡು ನಿರೂಪಿಸಿದರು.
ಬಳಿಕ ಮೌನ ಪ್ರಾರ್ಥನೆ ಸಲ್ಲಿಸಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಮೂಲಕ ಶೃದ್ಧಾಂಜಲಿ ಅರ್ಪಿಸಲಾಯಿತು
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…