ಮುಲ್ಕಿ: ದಿ. ನಾರಾಯಣ ಶೆಟ್ಟರು ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸಿ ಶ್ರೀದೇವಿಯ ಆರಾಧನೆ ಮೂಲಕ ಪರಮ ಭಕ್ತರಾಗಿದ್ದರು ಎಂದು ಕಟೀಲು ಕ್ಷೇತ್ರದ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ಹೇಳಿದರು.
ಅವರು ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಜ್ಞಾನ ಮಂದಿರದಲ್ಲಿ ನಡೆದ ಕ್ಷೇತ್ರದ ಬ್ರಹ್ಮಕಲಶೋತ್ಸವ ಹಾಗೂ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದಿ. ನಾರಾಯಣ ಶೆಟ್ಟರ ಶೃದ್ಧಾಂಜಲಿ ಸಭೆಯಲ್ಲಿ ಮಾತನಾಡಿ ಅವರು ಅಭಿವೃದ್ಧಿಯ ಹರಿಕಾರ ಸಹಿತ ಕೊಡುಗೈ ದಾನಿಯಾಗಿದ್ದು ಅವರ ಆದರ್ಶಗಳನ್ನು ಹಾಗೂ ಕ್ಷೇತ್ರದ ಅಭಿವೃದ್ಧಿಯನ್ನು ಮುಂದುವರೆಸಿಕೊಂಡು ಹೋಗುವ ಕಾರ್ಯವಾಗಬೇಕು ಎಂದರು.
ಸಭೆಯಲ್ಲಿ ಕ್ಷೇತ್ರದ ಅರ್ಚಕರಾದ ಶ್ರೀಪತಿ ಉಪಾಧ್ಯಾಯ, ನರಸಿಂಹ ಭಟ್, ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತರು, ಶಾಸಕ ಉಮಾನಾಥ ಕೋಟ್ಯಾನ್ ,ಮಾಜೀ ಸಚಿವ ಅಭಯ ಚಂದ್ರ ಜೈನ್, ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಭುವನಾಭಿರಾಮ ಉಡುಪ, ಗೋಪಾಲಕೃಷ್ಣ ಭಟ್ ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಯದು ನಾರಾಯಣಶೆಟ್ಟಿ, ಅವಿನಾಶ್ ಕೋಟ್ಯಾನ್, ಉದ್ಯಮಿ ಜೀವನ್ ಶೆಟ್ಟಿ ಕಾರ್ನಾಡ್, ಸುನಿಲ್ ಆಳ್ವ, ಸಂಜೀವ ದೇವಾಡಿಗ ಬಪ್ಪನಾಡು, ಕರುಣಾಕರ ಶೆಟ್ಟಿ, ಕಿಶೋರ್ ಶೆಟ್ಟಿ ಬಪ್ಪನಾಡು, ಸುರೇಶ್ ಬಂಗೇರ ಸಸಿಹಿತ್ಲು ಉದಯಕುಮಾರ್ ಶೆಟ್ಟಿ ಆದಿಧನ್, ಅಬ್ದುಲ್ ರಜಾಕ್, ಶಿವರಾಮ್ ಜಿ ಅಮೀನ್, ದಿ.ನಾರಾಯಣಶೆಟ್ಟಿ ಮನೆಯವರು ಉಪಸ್ಥಿತರಿದ್ದರು. ದಿನೇಶ್ ಕೊಲ್ನಾಡು ನಿರೂಪಿಸಿದರು.
ಬಳಿಕ ಮೌನ ಪ್ರಾರ್ಥನೆ ಸಲ್ಲಿಸಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಮೂಲಕ ಶೃದ್ಧಾಂಜಲಿ ಅರ್ಪಿಸಲಾಯಿತು
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…