ಮುಲ್ಕಿ: ಇಲ್ಲಿಗೆ ಸಮೀಪದ ಅಂಗರಗುಡ್ಡೆ ಶ್ರೀರಾಮ್ ಫ್ರೆಂಡ್ಸ್ ವತಿಯಿಂದ ಬಿಜೆಪಿ ನಾಯಕ ದಿ. ಸುಖಾನಂದ ಶೆಟ್ಟಿ ಸ್ಮರಣಾರ್ಥ ಸುಮಾರು ನೂರಕ್ಕಿಂತಲೂ ಹೆಚ್ಚು ಅಶಕ್ತ ಕುಟುಂಬಗಳಿಗೆ ಸಹಾಯ ಹಸ್ತ ಹಾಗೂ ಹಗ್ಗ ಜಗ್ಗಾಟ ಪಂದ್ಯಾಟ ಶ್ರೀರಾಮ ಭಜನಾ ಮಂದಿರ ಅಂಗರಗುಡ್ಡೆಯಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ವಹಿಸಿದ್ದರು .
ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲು ಮಾತನಾಡಿ ಹಿಂದೂ ಸಮಾಜದ ರಕ್ಷಣೆಗೆ ಹೋರಾಟ ನಡೆಸಿದ ದಿ. ಸುಖಾನಂದ ಶೆಟ್ಟಿ ರವರ ಆದರ್ಶಗಳು ನಮಗೆಲ್ಲ ಮಾದರಿಯಾಗಿದ್ದು ಅವರ ನೆನಪಿನಲ್ಲಿ ಅಸಹಾಯಕರಿಗೆ ಸಹಾಯ ಹಸ್ತ ಅಭಿನಂದನೀಯ ಎಂದರು.
ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಜಿಲ್ಲಾ ಬಿಜೆಪಿ ಅಧ್ಯಕ್ಷ ಕೆ ಪಿ ಸುದರ್ಶನ್,ಮಂಡಲಾಧ್ಯಕ್ಷ ಸುನಿಲ್ ಆಳ್ವ, ಬಿಜೆಪಿ ನಾಯಕರಾದ ಈಶ್ವರ ಕಟೀಲು, ಕಸ್ತೂರಿ ಪಂಜ, ಭುವನಾಭಿರಾಮ ಉಡುಪ , ಕೇಶವ ಕರ್ಕೇರಾ, ಜಯಾನಂದ್ ಮುಲ್ಕಿ , ವಿನೋದ್ ಸಾಲ್ಯಾನ್ ಬೆಳ್ಳಾಯರು, ಅತಿಕಾರಿಬೆಟ್ಟು ಗ್ರಾ.ಪಂ. ಅಧ್ಯಕ್ಷ ಮನೋಹರ ಕೋಟ್ಯಾನ್ , ಸದಸ್ಯ ಕೃಷ್ಣ ಶೆಟ್ಟಿಗಾರ್, ಮುಲ್ಕಿ ನ.ಪಂ. ಸದಸ್ಯರಾದ ಸುಭಾಷ್ ಶೆಟ್ಟಿ, ಸತೀಶ್ ಅಂಚನ್, ಶೈಲೇಶ್,ಮಾಜೀ ತಾ.ಪಂ.ಸದಸ್ಯ ದಿವಾಕರ್ ಕರ್ಕೇರ,ಉದ್ಯಮಿ ಸ್ಟ್ಯಾನಿ ಪಿಂಟೋ ಕಟೀಲು, ಪ್ರವೀಣ್ ಆರ್ ಶೆಟ್ಟಿ, ಮುಂಬೈ, ಕಾರ್ಯಕ್ರಮ ಸಂಘಟಕ ಜೀವನ್ ಶೆಟ್ಟಿ, ಸುಧೀರ್ ಶೆಟ್ಟಿ ಅಂಗರಗುಡ್ಡೆ ಮತ್ತಿತರರು ಉಪಸ್ಥಿತರಿದ್ದರು ನಿತೇಶ್ ಶೆಟ್ಟಿ ಎಕ್ಕಾರು ನಿರೂಪಿಸಿದರು.
ಕಾರ್ಯಕ್ರಮದಲ್ಲಿ ನೂರಕ್ಕೂ ಹೆಚ್ಚು ಅಸಹಾಯಕ ಕುಟುಂಬಗಳಿಗೆ ಸಹಾಯ ಹಸ್ತ ನೀಡಲಾಯಿತು
ಬಳಿಕ ಹಗ್ಗ ಜಗ್ಗಾಟ ಪಂದ್ಯಾಟ ನಡೆಯಿತು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…