ಮುಲ್ಕಿ: ಇಲ್ಲಿಗೆ ಸಮೀಪದ ಅಂಗರಗುಡ್ಡೆ ಶ್ರೀರಾಮ್ ಫ್ರೆಂಡ್ಸ್ ವತಿಯಿಂದ ಬಿಜೆಪಿ ನಾಯಕ ದಿ. ಸುಖಾನಂದ ಶೆಟ್ಟಿ ಸ್ಮರಣಾರ್ಥ ಸುಮಾರು ನೂರಕ್ಕಿಂತಲೂ ಹೆಚ್ಚು ಅಶಕ್ತ ಕುಟುಂಬಗಳಿಗೆ ಸಹಾಯ ಹಸ್ತ ಹಾಗೂ ಹಗ್ಗ ಜಗ್ಗಾಟ ಪಂದ್ಯಾಟ ಶ್ರೀರಾಮ ಭಜನಾ ಮಂದಿರ ಅಂಗರಗುಡ್ಡೆಯಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ವಹಿಸಿದ್ದರು .
ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲು ಮಾತನಾಡಿ ಹಿಂದೂ ಸಮಾಜದ ರಕ್ಷಣೆಗೆ ಹೋರಾಟ ನಡೆಸಿದ ದಿ. ಸುಖಾನಂದ ಶೆಟ್ಟಿ ರವರ ಆದರ್ಶಗಳು ನಮಗೆಲ್ಲ ಮಾದರಿಯಾಗಿದ್ದು ಅವರ ನೆನಪಿನಲ್ಲಿ ಅಸಹಾಯಕರಿಗೆ ಸಹಾಯ ಹಸ್ತ ಅಭಿನಂದನೀಯ ಎಂದರು.
ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಜಿಲ್ಲಾ ಬಿಜೆಪಿ ಅಧ್ಯಕ್ಷ ಕೆ ಪಿ ಸುದರ್ಶನ್,ಮಂಡಲಾಧ್ಯಕ್ಷ ಸುನಿಲ್ ಆಳ್ವ, ಬಿಜೆಪಿ ನಾಯಕರಾದ ಈಶ್ವರ ಕಟೀಲು, ಕಸ್ತೂರಿ ಪಂಜ, ಭುವನಾಭಿರಾಮ ಉಡುಪ , ಕೇಶವ ಕರ್ಕೇರಾ, ಜಯಾನಂದ್ ಮುಲ್ಕಿ , ವಿನೋದ್ ಸಾಲ್ಯಾನ್ ಬೆಳ್ಳಾಯರು, ಅತಿಕಾರಿಬೆಟ್ಟು ಗ್ರಾ.ಪಂ. ಅಧ್ಯಕ್ಷ ಮನೋಹರ ಕೋಟ್ಯಾನ್ , ಸದಸ್ಯ ಕೃಷ್ಣ ಶೆಟ್ಟಿಗಾರ್, ಮುಲ್ಕಿ ನ.ಪಂ. ಸದಸ್ಯರಾದ ಸುಭಾಷ್ ಶೆಟ್ಟಿ, ಸತೀಶ್ ಅಂಚನ್, ಶೈಲೇಶ್,ಮಾಜೀ ತಾ.ಪಂ.ಸದಸ್ಯ ದಿವಾಕರ್ ಕರ್ಕೇರ,ಉದ್ಯಮಿ ಸ್ಟ್ಯಾನಿ ಪಿಂಟೋ ಕಟೀಲು, ಪ್ರವೀಣ್ ಆರ್ ಶೆಟ್ಟಿ, ಮುಂಬೈ, ಕಾರ್ಯಕ್ರಮ ಸಂಘಟಕ ಜೀವನ್ ಶೆಟ್ಟಿ, ಸುಧೀರ್ ಶೆಟ್ಟಿ ಅಂಗರಗುಡ್ಡೆ ಮತ್ತಿತರರು ಉಪಸ್ಥಿತರಿದ್ದರು ನಿತೇಶ್ ಶೆಟ್ಟಿ ಎಕ್ಕಾರು ನಿರೂಪಿಸಿದರು.
ಕಾರ್ಯಕ್ರಮದಲ್ಲಿ ನೂರಕ್ಕೂ ಹೆಚ್ಚು ಅಸಹಾಯಕ ಕುಟುಂಬಗಳಿಗೆ ಸಹಾಯ ಹಸ್ತ ನೀಡಲಾಯಿತು
ಬಳಿಕ ಹಗ್ಗ ಜಗ್ಗಾಟ ಪಂದ್ಯಾಟ ನಡೆಯಿತು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…